ದರ್ಶನ್, ಪವಿತ್ರಾ ಗೌಡ ವಿರುದ್ಧ ಪ್ರಬಲ ಸಾಕ್ಷ್ಯ ಸಂಗ್ರಹ: 10ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯ ಪಡೆದ ತನಿಖಾಧಿಕಾರಿಗಳು!

ದರ್ಶನ್, ಪವಿತ್ರಾ ಗೌಡ ವಿರುದ್ಧ ಪ್ರಬಲ ಸಾಕ್ಷ್ಯ ಸಂಗ್ರಹ: 10ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯ ಪಡೆದ ತನಿಖಾಧಿಕಾರಿಗಳು!

Published : Jun 17, 2024, 04:50 PM ISTUpdated : Jun 17, 2024, 04:51 PM IST

ರೇಣುಕಾಸ್ವಾಮಿ ಕೊಲೆಯಲ್ಲಿ ದರ್ಶನ್ ನೇರವಾಗಿ ಭಾಗಿಯಾಗಿರೋದಕ್ಕೆ ಅತ್ಯಂತ ಪ್ರಬಲ ಸಾಕ್ಷ್ಯ ದೊರೆತಿದ್ದು,10ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಗಳನ್ನ ತನಿಖಾಧಿಕಾರಿಗಳು ಸಂಗ್ರಹಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್‌​ನಲ್ಲಿ(Renukaswamy murder) ದರ್ಶನ್, ಪವಿತ್ರಾ ಗೌಡ ವಿರುದ್ಧ ಪ್ರಬಲ ಸಾಕ್ಷ್ಯ ದೊರೆತಿದೆ. ಈ ಪ್ರಕರಣದಲ್ಲಿ ದರ್ಶನ್(Darshan), ಪವಿತ್ರಾ ಗೌಡ ನೇರ ಪಾತ್ರ ಇರುವ ಬಗ್ಗೆ ಹಲವು ಸಾಕ್ಷ್ಯ ಸಿಕ್ಕಿದೆ. 10ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಗಳನ್ನ ತನಿಖಾಧಿಕಾರಿಗಳು ಸಂಗ್ರಹಿಸಿದ್ದಾರೆ. ಕೊಲೆಯಲ್ಲಿ(Murder) ದರ್ಶನ್ ನೇರಭಾಗಿಯಾಗಿರೋದಕ್ಕೆ ಅತ್ಯಂತ ಪ್ರಬಲ ಸಾಕ್ಷ್ಯ ಸಿಕ್ಕಿದೆ. ದರ್ಶನ್ ಬಟ್ಟೆಗಳ ಮೇಲೆ ಕೊಲೆಯಾದ ರೇಣಕಾಸ್ವಾಮಿ ರಕ್ತದ ಗುರುತು ಪತ್ತೆಯಾಗಿದ್ದು, ದರ್ಶನ್ ಮನೆಯಿಂದ ರಕ್ತಸಿಕ್ತ ಬಟ್ಟೆಗಳನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪವಿತ್ರಾ ಗೌಡ (Pavithra Gowda) ನೇರ ಪಾತ್ರದ ಬಗ್ಗೆಯೂ ತನಿಖಾಧಿಕಾರಿಗಳಿಗೆ ಸಾಕ್ಷ್ಯ ಸಿಕ್ಕಿದೆ. ಪವಿತ್ರಾ ಗೌಡ ಮನೆಯಿಂದ ಆಕೆಯ ಬಟ್ಟೆ, ಚಪ್ಪಲಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪವಿತ್ರಾ ಗೌಡ ಬಟ್ಟೆ ಮತ್ತು ಚಪ್ಪಲಿ ಮೇಲೆ ರಕ್ತದ ಕಲೆಗಳು ಪತ್ತೆಯಾಗಿವೆ. ಕೊಲೆಯಾದ ರೇಣುಕಾಸ್ವಾಮಿ ರಕ್ತದ ಮಾದರಿಯನ್ನು ಪೊಲೀಸರು ಸಂಗ್ರಹಿಸಿದ್ದು, ದರ್ಶನ್ ಮತ್ತು ಪವಿತ್ರಾಗೌಡ ಬಟ್ಟೆ ಮೇಲೆ ಸಿಕ್ಕ ರಕ್ತದ ಮಾದರಿ FSLಗೆ ಕಳುಹಿಸಲಾಗಿದೆ. ರಕ್ತದ ಮಾದರಿ ರೇಣುಕಾಸ್ವಾಮಿ ರಕ್ತಕ್ಕೆ ಹೋಲಿಕೆಯಾದ್ರೆ ಕಂಟಕ ಕಟ್ಟಿಟ್ಟ ಬುತ್ತಿಯಾಗಿದೆ. 

ಇದನ್ನೂ ವೀಕ್ಷಿಸಿ:  ಬಿಜೆಪಿ, ಜೆಡಿಎಸ್‌ನವರು ಪ್ರತಿಭಟನೆ ಮಾಡಬೇಕಿರೋದು ರಾಜ್ಯದ ವಿರುದ್ಧ ಅಲ್ಲ ಕೇಂದ್ರದ ವಿರುದ್ಧ: ಸಿಎಂ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more