Uttara Kannada: ಜಮೀನು ಮಂಜೂರಾತಿಗೆ ಒದ್ದಾಡುತ್ತಿರುವ ನಿವೃತ್ತ ಯೋಧರು: ಪ್ರಧಾನಿ ಕಚೇರಿಗೂ ಪತ್ರ!

Uttara Kannada: ಜಮೀನು ಮಂಜೂರಾತಿಗೆ ಒದ್ದಾಡುತ್ತಿರುವ ನಿವೃತ್ತ ಯೋಧರು: ಪ್ರಧಾನಿ ಕಚೇರಿಗೂ ಪತ್ರ!

Published : Jan 18, 2022, 11:58 AM IST

*ನನಸಾಗಿಯೇ ಉಳಿದಿರುವ ನಿವೃತ್ತ ಸೈನಿಕರ ಸೂರಿನ ಕನಸು  
*ಜಮೀನು ಮಂಜೂರಾತಿಗೆ ಒದ್ದಾಡುತ್ತಿರುವ ನಿವೃತ್ತ ಯೋಧರು
*4-5 ಗುಂಟೆ ಜಾಗಕ್ಕೆ ಜಿಲ್ಲಾಡಳಿತ, ಪ್ರಧಾನಿ ಕಚೇರಿಗೂ ಪತ್ರ
*ಇರುವ ಜಾಗದಲ್ಲಿ ಮನೆ ಕಟ್ಟಲು'ಅತಿಕ್ರಮಣ ಜಾಗ' ಎಂಬ ತೊಡಕು
*ಸರ್ಕಾರಿ ಜಾಗದ ಕೊರತೆಯಿಂದ ಹೊಸ ಜಾಗ ಮಂಜೂರು ಮಾಡಲು ತೊಡಕು!
 

ಕಾರವಾರ (ಜ. 18): ಶತ್ರುಗಳಿಂದ ದೇಶದ ರಕ್ಷಣೆ ಮಾಡುತ್ತಾ ತಮ್ಮ ಪ್ರಾಣವನ್ನೇ ಪಣಕ್ಕಿಡುವ ಯೋಧರು (Soldier) ಗಡಿ ಭದ್ರತೆಯಲ್ಲೇ ಜೀವನ ಕಳೆಯುತ್ತಾರೆ. ದೇಶಕ್ಕೆ ತಮ್ಮ ಕೊಡುಗೆ ನೀಡಿ ನಿವೃತ್ತಿ ಪಡೆದ ಬಳಿಕ ಸ್ವಂತ ಮನೆಯಲ್ಲಿ ಕುಟುಂಬದೊಂದಿಗೆ ನೆಮ್ಮದಿಯ ಜೀವನ ಸಾಗಿಸಬೇಕೆನ್ನುವುದು ಯೋಧರು ಕನಸ್ಸು. ಆದರೆ ಉತ್ತರಕನ್ನಡ ಜಿಲ್ಲೆಯ ಮೂಲದ ನಿವೃತ್ತ ಯೋಧರ ಈ ಕನಸ್ಸು ಮಾತ್ರ ಕನಸಾಗಿಯೇ ಉಳಿಯುವಂತಾಗಿದೆ. ಜಿಲ್ಲೆಯ ಸುಮಾರು 50ಕ್ಕೂ ಅಧಿಕ ನಿವೃತ್ತ ಯೋಧರಿಗೆ ಈವರೆಗೂ ಜಿಲ್ಲಾಡಳಿತ ಭೂಮಿಯೇ ಮಂಜೂರು ಮಾಡಿಲ್ಲದ್ದರಿಂದ ಇಂದಿಗೂ ನಿವೃತ್ತ ಯೋಧರು ಭೂಮಿಗಾಗಿ ಅಲೆದಾಡುವಂತಾಗಿದೆ.

ಇದನ್ನೂ ಓದಿ: ದೇಶದ ಸೇನಾ ಪಡೆಗೆ ಶತ್ರು ‘ಕಣ್ತಪ್ಪಿಸುವಂಥ’ ನೂತನ ಸಮವಸ್ತ್ರ: 14 ವರ್ಷಗಳ ಬಳಿಕ ಬದಲಾವಣೆ!

ಕಾರವಾರ ತಾಲೂಕಿನ ಕೆರವಾಡಿ ಗ್ರಾಮದ ನಿವೃತ್ತ ಸೈನಿಕ ರಮೇಶ ನಾಯ್ಕ ಹಲವು ವರ್ಷಗಳಿಂದ ಸರಕಾರದ ಸವಲತ್ತಿಗಾಗಿ ಅಲೆದಾಡುತ್ತಿದ್ದಾರೆ. ಸುಮಾರು 17 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ, ನಿವೃತ್ತಿಯ ನಂತರವೂ ಜೀವನಕ್ಕಾಗಿ ಬ್ಯಾಂಕ್‌ನಲ್ಲಿ ಸೆಕ್ಯೂರಿಟಿಗಾರ್ಡ್ ಕೆಲಸ ಮಾಡಿಕೊಂಡಿದ್ದರು. ಕೆರವಾಡಿ ಗ್ರಾಮದ ಅತಿಕ್ರಮಣ ಜಮೀನಿನಲ್ಲಿ ಮನೆಯೊಂದನ್ನು ಕಟ್ಟಿಕೊಂಡು ಅವರು ಜೀವನ ಸಾಗಿಸುತ್ತಿದ್ದರಾದ್ರೂ, ಕಳೆದ ಮಳೆಗಾಲದಲ್ಲಿ ಆ ಮನೆಯೂ ನೀರಿನಲ್ಲಿ ಮುಳುಗಿ ಹಾಳಾಗಿ ಹೋಗಿದೆ. ಇದರಿಂದಾಗಿ ಸದ್ಯಕ್ಕೆ ಯಾರದ್ದೋ ಬಾಡಿಗೆ ಮನೆಯಲ್ಲಿ ರಮೇಶ್ ನಾಯ್ಕ ನೆಲೆಸಿದ್ದಾರೆ ಈ ಕುರಿತ ಒಂದು ಸ್ಟೋರಿ ಇಲ್ಲಿದೆ ನೋಡಿ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more