ಕುಟುಂಬ ನಿರ್ಹವಣೆಗಾಗಿ ಗಂಡನಿಗೆ ತಿಳಿಯದಂತೆ ಮಗು ಮಾರಿದ ತಾಯಿ!

ಕುಟುಂಬ ನಿರ್ಹವಣೆಗಾಗಿ ಗಂಡನಿಗೆ ತಿಳಿಯದಂತೆ ಮಗು ಮಾರಿದ ತಾಯಿ!

Published : Dec 12, 2024, 08:22 PM ISTUpdated : Dec 12, 2024, 08:23 PM IST

ರಾಮನಗರದಲ್ಲಿ ಬಡತನದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ತಮ್ಮ ಒಂದು ತಿಂಗಳ ಹಸುಗೂಸನ್ನು 1.5 ಲಕ್ಷ ರೂ.ಗೆ ಮಾರಾಟ ಮಾಡಿದ್ದಾರೆ. ಗಂಡನಿಗೆ ತಿಳಿಯದಂತೆ ಮಗುವನ್ನು ಮಾರಾಟ ಮಾಡಿದ್ದ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ಬಡತನ ಎನ್ನುವುದು ಎಷ್ಟು ಕ್ರೂರ ಎಂದು ಅದನ್ನು ಅನುಭವಿಸಿದವರಿಗೆ ಗೊತ್ತು. ಆದರೆ, ದುಡಿದು ತಂದು ಹಾಕುವ ಗಂಡ ಹಾಗೂ ಮನೆಯಲ್ಲಿನ ಗಂಡಸರು ಮನೆ ತುಂಬಾ ಮಕ್ಕಳನ್ನು ಮಾಡಿ ಅಲ್ಪ ದುಡಿಮೆಯಿಂದ ಜೀವನ ನಡೆಸುವ ಪರಿಸ್ಥಿತಿಯನ್ನು ಹೆಂಡತಿಗೆ ತಂದು ಹಾಕುತ್ತಾರೆ. ಇಂದಿನ ಬೆಲೆ ಏರಿಕೆ ಜಮಾನದಲ್ಲಿ ಪಕ್ಕದ ಮನೆಯಲ್ಲಿ ಹೆಣ ಬಿದ್ದರೂ ತಿರುಗಿ ನೋಡದ ಸಿಟಿ ಜನರ ನಡುವೆ ಊಟಕ್ಕೆ ಗತಿ ಇಲ್ಲದಂತೆ ಜೀವನ ಮಾಡುವುದು ನಿಜಕ್ಕೂ ನರಕದಂತೆ ಭಾಸವಾಗುತ್ತದೆ. ತಾನು ಗಂಡ ಬರುವವರೆಗೂ ಹಸಿವಿನಿಂದ ಬಳಲಿದರೂ ಸಹಿಸಿಕೊಳ್ಳಬಹುದು. ಆದರೆ, ಒಬ್ಬ ತಾಯಿಯಾಗಿ ಮಕ್ಕಳು ಹಸಿವಿನಿಂದ ಬಳಲುತ್ತಿದ್ದರೆ ಹೇಗೆ ತಾನೆ ಸಹಿಸಿಕೊಳ್ಳುತ್ತಾಳೆ ಹೇಳಿ.

ಅದೇ ರಿತಿ ಮನೆ ತುಂಬಾ ಮಕ್ಕಳಿದ್ದರೂ ಗಂಡನ ದಿನಗೂಲಿ ಮೇಲೆಯೇ ಜೀವನ ನಡೆಸುತ್ತಿದ್ದ ಹೆಂಡತಿ ಇದೀಗ ತನ್ನ ಸ್ವಂತ ಮಗುವೊಂದನ್ನು ಕುಟುಂಬ ನಿರ್ಹಣೆಗಾಗಿ ಮಾರಾಟ ಮಾಡಿದ ದಯನೀಯ ಸ್ಥಿತಿಯ ಘಟನೆ ರಾಮನಗರದ ಸಿಟಿಯಲ್ಲಿ ನಡೆದಿದೆ. ತನ್ನ ಒಂದು ತಿಂಗಳ ಹಸುಗೂಸನ್ನು 1.5 ಲfಷ ರೂ. ಹಣಕ್ಕೆ ಮಾರಾಟ ಮಾಡಿ ಬಂದಿದ್ದಾಳೆ. ಕೂಲಿ ಕೆಲಸ ಮಾಡುತ್ತಾ ಬಡತನದಲ್ಲಿ ಹೆಂಡತಿ ಮಕ್ಕಳನ್ನು ಸಾಕುತ್ತಿದ್ದ ಗಂಡ ತನ್ನ ಚಿಕ್ಕ ಮಗುವೆಲ್ಲಿ ಎಂದು ಹೆಂಡತಿಯನ್ನು ಕೇಳಿದರೆ ಸಂಬಂಧಿಕರ ಮನೆಯಲ್ಲಿ ಬಿಟ್ಟು ಬಂದಿರುವುದಾಗಿ ಸುಳ್ಳು ಹೇಳಿದ್ದಾಳೆ. ಈ ಘಟನೆ ನಡೆದು ಒಂದು ತಿಂಗಳ ನಂತರ ಬೆಳಕಿಗೆ ಬಂದಿದ್ದು, ಅಕ್ರಮವಾಗಿ ಮಗು ಮಾರಾಟ ಮಾಡಿದ್ದ ತಾಯಿ ನಸ್ರೀನ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ 6 ವರ್ಷದ ಹಿಂದೆ ಸದ್ದಾಂ ಮತ್ತು ನಸ್ರೀನ್ ಮದುವೆ ಮಾಡಿಕೊಂಡಿದ್ದರು. ರಾಮನಗರದಲ್ಲಿ ವಿವಿಧ ಅಂಗಡಿ, ಮಯಂಗಟ್ಟು ಹಾಗೂ ಇತರೆ ಮನೆ ಕೆಲಸ ಸೇರಿದಂತೆ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಆದರೆ, ಗಂಡನಿಗೆ ಗೊತ್ತಿಲ್ಲದೆ ಮಗು ಮಾರಾಟ ಮಾಡಿದ ಪತ್ನಿ ಇದೀಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾಳೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more