ಕುಟುಂಬ ನಿರ್ಹವಣೆಗಾಗಿ ಗಂಡನಿಗೆ ತಿಳಿಯದಂತೆ ಮಗು ಮಾರಿದ ತಾಯಿ!

ಕುಟುಂಬ ನಿರ್ಹವಣೆಗಾಗಿ ಗಂಡನಿಗೆ ತಿಳಿಯದಂತೆ ಮಗು ಮಾರಿದ ತಾಯಿ!

Published : Dec 12, 2024, 08:22 PM ISTUpdated : Dec 12, 2024, 08:23 PM IST

ರಾಮನಗರದಲ್ಲಿ ಬಡತನದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ತಮ್ಮ ಒಂದು ತಿಂಗಳ ಹಸುಗೂಸನ್ನು 1.5 ಲಕ್ಷ ರೂ.ಗೆ ಮಾರಾಟ ಮಾಡಿದ್ದಾರೆ. ಗಂಡನಿಗೆ ತಿಳಿಯದಂತೆ ಮಗುವನ್ನು ಮಾರಾಟ ಮಾಡಿದ್ದ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ಬಡತನ ಎನ್ನುವುದು ಎಷ್ಟು ಕ್ರೂರ ಎಂದು ಅದನ್ನು ಅನುಭವಿಸಿದವರಿಗೆ ಗೊತ್ತು. ಆದರೆ, ದುಡಿದು ತಂದು ಹಾಕುವ ಗಂಡ ಹಾಗೂ ಮನೆಯಲ್ಲಿನ ಗಂಡಸರು ಮನೆ ತುಂಬಾ ಮಕ್ಕಳನ್ನು ಮಾಡಿ ಅಲ್ಪ ದುಡಿಮೆಯಿಂದ ಜೀವನ ನಡೆಸುವ ಪರಿಸ್ಥಿತಿಯನ್ನು ಹೆಂಡತಿಗೆ ತಂದು ಹಾಕುತ್ತಾರೆ. ಇಂದಿನ ಬೆಲೆ ಏರಿಕೆ ಜಮಾನದಲ್ಲಿ ಪಕ್ಕದ ಮನೆಯಲ್ಲಿ ಹೆಣ ಬಿದ್ದರೂ ತಿರುಗಿ ನೋಡದ ಸಿಟಿ ಜನರ ನಡುವೆ ಊಟಕ್ಕೆ ಗತಿ ಇಲ್ಲದಂತೆ ಜೀವನ ಮಾಡುವುದು ನಿಜಕ್ಕೂ ನರಕದಂತೆ ಭಾಸವಾಗುತ್ತದೆ. ತಾನು ಗಂಡ ಬರುವವರೆಗೂ ಹಸಿವಿನಿಂದ ಬಳಲಿದರೂ ಸಹಿಸಿಕೊಳ್ಳಬಹುದು. ಆದರೆ, ಒಬ್ಬ ತಾಯಿಯಾಗಿ ಮಕ್ಕಳು ಹಸಿವಿನಿಂದ ಬಳಲುತ್ತಿದ್ದರೆ ಹೇಗೆ ತಾನೆ ಸಹಿಸಿಕೊಳ್ಳುತ್ತಾಳೆ ಹೇಳಿ.

ಅದೇ ರಿತಿ ಮನೆ ತುಂಬಾ ಮಕ್ಕಳಿದ್ದರೂ ಗಂಡನ ದಿನಗೂಲಿ ಮೇಲೆಯೇ ಜೀವನ ನಡೆಸುತ್ತಿದ್ದ ಹೆಂಡತಿ ಇದೀಗ ತನ್ನ ಸ್ವಂತ ಮಗುವೊಂದನ್ನು ಕುಟುಂಬ ನಿರ್ಹಣೆಗಾಗಿ ಮಾರಾಟ ಮಾಡಿದ ದಯನೀಯ ಸ್ಥಿತಿಯ ಘಟನೆ ರಾಮನಗರದ ಸಿಟಿಯಲ್ಲಿ ನಡೆದಿದೆ. ತನ್ನ ಒಂದು ತಿಂಗಳ ಹಸುಗೂಸನ್ನು 1.5 ಲfಷ ರೂ. ಹಣಕ್ಕೆ ಮಾರಾಟ ಮಾಡಿ ಬಂದಿದ್ದಾಳೆ. ಕೂಲಿ ಕೆಲಸ ಮಾಡುತ್ತಾ ಬಡತನದಲ್ಲಿ ಹೆಂಡತಿ ಮಕ್ಕಳನ್ನು ಸಾಕುತ್ತಿದ್ದ ಗಂಡ ತನ್ನ ಚಿಕ್ಕ ಮಗುವೆಲ್ಲಿ ಎಂದು ಹೆಂಡತಿಯನ್ನು ಕೇಳಿದರೆ ಸಂಬಂಧಿಕರ ಮನೆಯಲ್ಲಿ ಬಿಟ್ಟು ಬಂದಿರುವುದಾಗಿ ಸುಳ್ಳು ಹೇಳಿದ್ದಾಳೆ. ಈ ಘಟನೆ ನಡೆದು ಒಂದು ತಿಂಗಳ ನಂತರ ಬೆಳಕಿಗೆ ಬಂದಿದ್ದು, ಅಕ್ರಮವಾಗಿ ಮಗು ಮಾರಾಟ ಮಾಡಿದ್ದ ತಾಯಿ ನಸ್ರೀನ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ 6 ವರ್ಷದ ಹಿಂದೆ ಸದ್ದಾಂ ಮತ್ತು ನಸ್ರೀನ್ ಮದುವೆ ಮಾಡಿಕೊಂಡಿದ್ದರು. ರಾಮನಗರದಲ್ಲಿ ವಿವಿಧ ಅಂಗಡಿ, ಮಯಂಗಟ್ಟು ಹಾಗೂ ಇತರೆ ಮನೆ ಕೆಲಸ ಸೇರಿದಂತೆ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಆದರೆ, ಗಂಡನಿಗೆ ಗೊತ್ತಿಲ್ಲದೆ ಮಗು ಮಾರಾಟ ಮಾಡಿದ ಪತ್ನಿ ಇದೀಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾಳೆ.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more