ಕುಟುಂಬ ನಿರ್ಹವಣೆಗಾಗಿ ಗಂಡನಿಗೆ ತಿಳಿಯದಂತೆ ಮಗು ಮಾರಿದ ತಾಯಿ!

ಕುಟುಂಬ ನಿರ್ಹವಣೆಗಾಗಿ ಗಂಡನಿಗೆ ತಿಳಿಯದಂತೆ ಮಗು ಮಾರಿದ ತಾಯಿ!

Published : Dec 12, 2024, 08:22 PM ISTUpdated : Dec 12, 2024, 08:23 PM IST

ರಾಮನಗರದಲ್ಲಿ ಬಡತನದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ತಮ್ಮ ಒಂದು ತಿಂಗಳ ಹಸುಗೂಸನ್ನು 1.5 ಲಕ್ಷ ರೂ.ಗೆ ಮಾರಾಟ ಮಾಡಿದ್ದಾರೆ. ಗಂಡನಿಗೆ ತಿಳಿಯದಂತೆ ಮಗುವನ್ನು ಮಾರಾಟ ಮಾಡಿದ್ದ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ಬಡತನ ಎನ್ನುವುದು ಎಷ್ಟು ಕ್ರೂರ ಎಂದು ಅದನ್ನು ಅನುಭವಿಸಿದವರಿಗೆ ಗೊತ್ತು. ಆದರೆ, ದುಡಿದು ತಂದು ಹಾಕುವ ಗಂಡ ಹಾಗೂ ಮನೆಯಲ್ಲಿನ ಗಂಡಸರು ಮನೆ ತುಂಬಾ ಮಕ್ಕಳನ್ನು ಮಾಡಿ ಅಲ್ಪ ದುಡಿಮೆಯಿಂದ ಜೀವನ ನಡೆಸುವ ಪರಿಸ್ಥಿತಿಯನ್ನು ಹೆಂಡತಿಗೆ ತಂದು ಹಾಕುತ್ತಾರೆ. ಇಂದಿನ ಬೆಲೆ ಏರಿಕೆ ಜಮಾನದಲ್ಲಿ ಪಕ್ಕದ ಮನೆಯಲ್ಲಿ ಹೆಣ ಬಿದ್ದರೂ ತಿರುಗಿ ನೋಡದ ಸಿಟಿ ಜನರ ನಡುವೆ ಊಟಕ್ಕೆ ಗತಿ ಇಲ್ಲದಂತೆ ಜೀವನ ಮಾಡುವುದು ನಿಜಕ್ಕೂ ನರಕದಂತೆ ಭಾಸವಾಗುತ್ತದೆ. ತಾನು ಗಂಡ ಬರುವವರೆಗೂ ಹಸಿವಿನಿಂದ ಬಳಲಿದರೂ ಸಹಿಸಿಕೊಳ್ಳಬಹುದು. ಆದರೆ, ಒಬ್ಬ ತಾಯಿಯಾಗಿ ಮಕ್ಕಳು ಹಸಿವಿನಿಂದ ಬಳಲುತ್ತಿದ್ದರೆ ಹೇಗೆ ತಾನೆ ಸಹಿಸಿಕೊಳ್ಳುತ್ತಾಳೆ ಹೇಳಿ.

ಅದೇ ರಿತಿ ಮನೆ ತುಂಬಾ ಮಕ್ಕಳಿದ್ದರೂ ಗಂಡನ ದಿನಗೂಲಿ ಮೇಲೆಯೇ ಜೀವನ ನಡೆಸುತ್ತಿದ್ದ ಹೆಂಡತಿ ಇದೀಗ ತನ್ನ ಸ್ವಂತ ಮಗುವೊಂದನ್ನು ಕುಟುಂಬ ನಿರ್ಹಣೆಗಾಗಿ ಮಾರಾಟ ಮಾಡಿದ ದಯನೀಯ ಸ್ಥಿತಿಯ ಘಟನೆ ರಾಮನಗರದ ಸಿಟಿಯಲ್ಲಿ ನಡೆದಿದೆ. ತನ್ನ ಒಂದು ತಿಂಗಳ ಹಸುಗೂಸನ್ನು 1.5 ಲfಷ ರೂ. ಹಣಕ್ಕೆ ಮಾರಾಟ ಮಾಡಿ ಬಂದಿದ್ದಾಳೆ. ಕೂಲಿ ಕೆಲಸ ಮಾಡುತ್ತಾ ಬಡತನದಲ್ಲಿ ಹೆಂಡತಿ ಮಕ್ಕಳನ್ನು ಸಾಕುತ್ತಿದ್ದ ಗಂಡ ತನ್ನ ಚಿಕ್ಕ ಮಗುವೆಲ್ಲಿ ಎಂದು ಹೆಂಡತಿಯನ್ನು ಕೇಳಿದರೆ ಸಂಬಂಧಿಕರ ಮನೆಯಲ್ಲಿ ಬಿಟ್ಟು ಬಂದಿರುವುದಾಗಿ ಸುಳ್ಳು ಹೇಳಿದ್ದಾಳೆ. ಈ ಘಟನೆ ನಡೆದು ಒಂದು ತಿಂಗಳ ನಂತರ ಬೆಳಕಿಗೆ ಬಂದಿದ್ದು, ಅಕ್ರಮವಾಗಿ ಮಗು ಮಾರಾಟ ಮಾಡಿದ್ದ ತಾಯಿ ನಸ್ರೀನ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ 6 ವರ್ಷದ ಹಿಂದೆ ಸದ್ದಾಂ ಮತ್ತು ನಸ್ರೀನ್ ಮದುವೆ ಮಾಡಿಕೊಂಡಿದ್ದರು. ರಾಮನಗರದಲ್ಲಿ ವಿವಿಧ ಅಂಗಡಿ, ಮಯಂಗಟ್ಟು ಹಾಗೂ ಇತರೆ ಮನೆ ಕೆಲಸ ಸೇರಿದಂತೆ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಆದರೆ, ಗಂಡನಿಗೆ ಗೊತ್ತಿಲ್ಲದೆ ಮಗು ಮಾರಾಟ ಮಾಡಿದ ಪತ್ನಿ ಇದೀಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾಳೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more