16 ವರ್ಷ ಸಾರ್ಥಕ ಸೇವೆ: ಶಿಕ್ಷಕನ ವರ್ಗಾವಣೆಗೆ ವಿದ್ಯಾರ್ಥಿಗಳ ಕಣ್ಣೀರ ಬೀಳ್ಕೊಡುಗೆ

16 ವರ್ಷ ಸಾರ್ಥಕ ಸೇವೆ: ಶಿಕ್ಷಕನ ವರ್ಗಾವಣೆಗೆ ವಿದ್ಯಾರ್ಥಿಗಳ ಕಣ್ಣೀರ ಬೀಳ್ಕೊಡುಗೆ

Published : Sep 01, 2023, 11:09 AM IST

16 ವರ್ಷದ ನಿರಂತರ ಸೇವೆ. ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಗುರು. ಗುರುಗಳು ವರ್ಗಾವಣೆಯಾದ್ರು ಅಂತಾ ಗ್ರಾಮವೇ ಕಣ್ಣೀರಿಟ್ಟಿದೆ. ಮನಮುಟ್ಟುವ ರೀತಿಯಲ್ಲಿ ಬೀಳ್ಕೊಡುಗೆ ಸಮಾರಂಭ ಮಾಡಿ ಮನೆ ಮಗನಂತಿದ್ದ ಮೇಷ್ಟ್ರನ್ನ ಸೆಂಡ್ ಆಫ್ ಮಾಡಿದೆ. 

ನೆಚ್ಚಿನ ಗುರುಗಳ ಮೇಲೆ ಪುಷ್ಪಮಳೆ. ತೆರೆದ ವಾಹನದಲ್ಲಿ ಅದ್ಧೂರಿ ಮೆರವಣಿಗೆ. ಜ್ಞಾನದ ಬುತ್ತಿ ಬಿತ್ತಿದ ಶಿಕ್ಷಕನಿಗೆ(Teacher) ಕಣ್ಣೀರ ಬೀಳ್ಕೊಡುಗೆ. ಈ ದೃಶ್ಯ ಕಂಡು ಬಂದಿದ್ದು ಗದಗ(Gadag) ಜಿಲ್ಲೆಯ ನಾಗರಮಡುವು ಗ್ರಾಮದಲ್ಲಿ. ಪುಟ್ಟಹಳ್ಳಿಯಲ್ಲಿ ಬರೋಬ್ಬರಿ 16 ವರ್ಷ ಸಾರ್ಥಕ ಸೇವೆ ಸಲ್ಲಿಸಿದ ಶಿಕ್ಷಕ ಬಸವರಾಜ್ ಹೆಳವಿ ಅವರಿಗೆ ವರ್ಗಾವಣೆಯಾಗಿದೆ. ನೆಚ್ಚಿನ ಶಿಕ್ಷಕನನ್ನು  ಗ್ರಾಮದ ರಸ್ತೆಗಳಲ್ಲಿ ರಂಗೋಲಿ ಹಾಕಿ. ತೋರಣಕಟ್ಟಿ..ತೆರದ ವಾಹನದಲ್ಲಿ ಮೆರವಣಿಗೆ ಮಾಡಿ ಬೀಳ್ಕೊಟ್ಟರು. 16 ವರ್ಷಗಳ ಕಾಲ ಸಾವಿರಾರು ಮಕ್ಕಳ ಭವಿಷ್ಯ ರೂಪಿಸಿದ ಶಿಕ್ಷಕನ ವರ್ಗಾವಣೆ (Transfer) ಕೆಲವರನ್ನು ಕಣ್ಣೀರ ಕಡಲಲ್ಲಿ ತೇಲಿಸಿತು. ಮಕ್ಕಳು ಮಾತ್ರವಲ್ಲ. ಪೋಷಕರೂ ಬಿಕ್ಕಿ ಬಿಕ್ಕಿ ಅತ್ತರು. ಇಂಗ್ಲಿಷ್ ಶಿಕ್ಷಕರಾಗಿದ್ದ ಬಸವರಾಜ್ ಹೆಳವಿ.. ಮಕ್ಕಳ ಅಭ್ಯುದಯಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದರು. ಬೆಳಗ್ಗೆ 6 ಗಂಟೆಯಿಂದ್ಲೆ ಫೀಲ್ಡ್ ಗೆ ಇಳೀತಿದ್ದ ಬಸವರಾಜ್ ಹೆಳವಿ(Basavaraj Helavi) ಮಕ್ಕಳಿಗೆ ಸ್ಪೋರ್ಟ್ಸ್ ಪ್ರ್ಯಾಕ್ಟೀಸ್ ಮಾಡಿಸುತ್ತಿದ್ರು. ರನ್ನಿಂಗ್, ಕಬ್ಬಡ್ಡಿ, ಹೈಜೆಂಪ್, ಕೋಕೋ, ಚೆಸ್ ಹೀಗೆ ವಿವಿಧ ಆಟಗಳ ಟ್ರೈನಿಂಗ್ ನೀಡುತ್ತಿದ್ದರು. ಇದರ ಫಲವಾಗಿ ಗ್ರಾಮದ ಮಕ್ಕಳು ಜಿಲ್ಲಾಮಟ್ಟ, ರಾಜ್ಯ ಮಟ್ಟದಲ್ಲೂ ಪ್ರಶಸ್ತಿ ಬಾಚಿದಾರೆ. ಆ ಗೆದ್ದ ಟ್ರೋಪಿಗಳನ್ನೆಲ್ಲಾ ತೆರೆದ ವಾಹನದಲ್ಲಿ ಇಟ್ಟು ಶಿಕ್ಷಕರ ಮೆರವಣಿಗೆ ಮಾಡಿದ್ರು.

ಇದನ್ನೂ ವೀಕ್ಷಿಸಿ:  ಯೇಸು ಹೊಗಳಿಕೆ..ಹಿಂದೂ ದೇವರುಗಳ ಬಗ್ಗೆ ಅಶ್ಲೀಲ ಮಾತು: ವ್ಯಕ್ತಿಯ ವಿಡಿಯೋ ವೈರಲ್‌

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more