16 ವರ್ಷ ಸಾರ್ಥಕ ಸೇವೆ: ಶಿಕ್ಷಕನ ವರ್ಗಾವಣೆಗೆ ವಿದ್ಯಾರ್ಥಿಗಳ ಕಣ್ಣೀರ ಬೀಳ್ಕೊಡುಗೆ

16 ವರ್ಷ ಸಾರ್ಥಕ ಸೇವೆ: ಶಿಕ್ಷಕನ ವರ್ಗಾವಣೆಗೆ ವಿದ್ಯಾರ್ಥಿಗಳ ಕಣ್ಣೀರ ಬೀಳ್ಕೊಡುಗೆ

Published : Sep 01, 2023, 11:09 AM IST

16 ವರ್ಷದ ನಿರಂತರ ಸೇವೆ. ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಗುರು. ಗುರುಗಳು ವರ್ಗಾವಣೆಯಾದ್ರು ಅಂತಾ ಗ್ರಾಮವೇ ಕಣ್ಣೀರಿಟ್ಟಿದೆ. ಮನಮುಟ್ಟುವ ರೀತಿಯಲ್ಲಿ ಬೀಳ್ಕೊಡುಗೆ ಸಮಾರಂಭ ಮಾಡಿ ಮನೆ ಮಗನಂತಿದ್ದ ಮೇಷ್ಟ್ರನ್ನ ಸೆಂಡ್ ಆಫ್ ಮಾಡಿದೆ. 

ನೆಚ್ಚಿನ ಗುರುಗಳ ಮೇಲೆ ಪುಷ್ಪಮಳೆ. ತೆರೆದ ವಾಹನದಲ್ಲಿ ಅದ್ಧೂರಿ ಮೆರವಣಿಗೆ. ಜ್ಞಾನದ ಬುತ್ತಿ ಬಿತ್ತಿದ ಶಿಕ್ಷಕನಿಗೆ(Teacher) ಕಣ್ಣೀರ ಬೀಳ್ಕೊಡುಗೆ. ಈ ದೃಶ್ಯ ಕಂಡು ಬಂದಿದ್ದು ಗದಗ(Gadag) ಜಿಲ್ಲೆಯ ನಾಗರಮಡುವು ಗ್ರಾಮದಲ್ಲಿ. ಪುಟ್ಟಹಳ್ಳಿಯಲ್ಲಿ ಬರೋಬ್ಬರಿ 16 ವರ್ಷ ಸಾರ್ಥಕ ಸೇವೆ ಸಲ್ಲಿಸಿದ ಶಿಕ್ಷಕ ಬಸವರಾಜ್ ಹೆಳವಿ ಅವರಿಗೆ ವರ್ಗಾವಣೆಯಾಗಿದೆ. ನೆಚ್ಚಿನ ಶಿಕ್ಷಕನನ್ನು  ಗ್ರಾಮದ ರಸ್ತೆಗಳಲ್ಲಿ ರಂಗೋಲಿ ಹಾಕಿ. ತೋರಣಕಟ್ಟಿ..ತೆರದ ವಾಹನದಲ್ಲಿ ಮೆರವಣಿಗೆ ಮಾಡಿ ಬೀಳ್ಕೊಟ್ಟರು. 16 ವರ್ಷಗಳ ಕಾಲ ಸಾವಿರಾರು ಮಕ್ಕಳ ಭವಿಷ್ಯ ರೂಪಿಸಿದ ಶಿಕ್ಷಕನ ವರ್ಗಾವಣೆ (Transfer) ಕೆಲವರನ್ನು ಕಣ್ಣೀರ ಕಡಲಲ್ಲಿ ತೇಲಿಸಿತು. ಮಕ್ಕಳು ಮಾತ್ರವಲ್ಲ. ಪೋಷಕರೂ ಬಿಕ್ಕಿ ಬಿಕ್ಕಿ ಅತ್ತರು. ಇಂಗ್ಲಿಷ್ ಶಿಕ್ಷಕರಾಗಿದ್ದ ಬಸವರಾಜ್ ಹೆಳವಿ.. ಮಕ್ಕಳ ಅಭ್ಯುದಯಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದರು. ಬೆಳಗ್ಗೆ 6 ಗಂಟೆಯಿಂದ್ಲೆ ಫೀಲ್ಡ್ ಗೆ ಇಳೀತಿದ್ದ ಬಸವರಾಜ್ ಹೆಳವಿ(Basavaraj Helavi) ಮಕ್ಕಳಿಗೆ ಸ್ಪೋರ್ಟ್ಸ್ ಪ್ರ್ಯಾಕ್ಟೀಸ್ ಮಾಡಿಸುತ್ತಿದ್ರು. ರನ್ನಿಂಗ್, ಕಬ್ಬಡ್ಡಿ, ಹೈಜೆಂಪ್, ಕೋಕೋ, ಚೆಸ್ ಹೀಗೆ ವಿವಿಧ ಆಟಗಳ ಟ್ರೈನಿಂಗ್ ನೀಡುತ್ತಿದ್ದರು. ಇದರ ಫಲವಾಗಿ ಗ್ರಾಮದ ಮಕ್ಕಳು ಜಿಲ್ಲಾಮಟ್ಟ, ರಾಜ್ಯ ಮಟ್ಟದಲ್ಲೂ ಪ್ರಶಸ್ತಿ ಬಾಚಿದಾರೆ. ಆ ಗೆದ್ದ ಟ್ರೋಪಿಗಳನ್ನೆಲ್ಲಾ ತೆರೆದ ವಾಹನದಲ್ಲಿ ಇಟ್ಟು ಶಿಕ್ಷಕರ ಮೆರವಣಿಗೆ ಮಾಡಿದ್ರು.

ಇದನ್ನೂ ವೀಕ್ಷಿಸಿ:  ಯೇಸು ಹೊಗಳಿಕೆ..ಹಿಂದೂ ದೇವರುಗಳ ಬಗ್ಗೆ ಅಶ್ಲೀಲ ಮಾತು: ವ್ಯಕ್ತಿಯ ವಿಡಿಯೋ ವೈರಲ್‌

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more