16 ವರ್ಷ ಸಾರ್ಥಕ ಸೇವೆ: ಶಿಕ್ಷಕನ ವರ್ಗಾವಣೆಗೆ ವಿದ್ಯಾರ್ಥಿಗಳ ಕಣ್ಣೀರ ಬೀಳ್ಕೊಡುಗೆ

16 ವರ್ಷ ಸಾರ್ಥಕ ಸೇವೆ: ಶಿಕ್ಷಕನ ವರ್ಗಾವಣೆಗೆ ವಿದ್ಯಾರ್ಥಿಗಳ ಕಣ್ಣೀರ ಬೀಳ್ಕೊಡುಗೆ

Published : Sep 01, 2023, 11:09 AM IST

16 ವರ್ಷದ ನಿರಂತರ ಸೇವೆ. ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಗುರು. ಗುರುಗಳು ವರ್ಗಾವಣೆಯಾದ್ರು ಅಂತಾ ಗ್ರಾಮವೇ ಕಣ್ಣೀರಿಟ್ಟಿದೆ. ಮನಮುಟ್ಟುವ ರೀತಿಯಲ್ಲಿ ಬೀಳ್ಕೊಡುಗೆ ಸಮಾರಂಭ ಮಾಡಿ ಮನೆ ಮಗನಂತಿದ್ದ ಮೇಷ್ಟ್ರನ್ನ ಸೆಂಡ್ ಆಫ್ ಮಾಡಿದೆ. 

ನೆಚ್ಚಿನ ಗುರುಗಳ ಮೇಲೆ ಪುಷ್ಪಮಳೆ. ತೆರೆದ ವಾಹನದಲ್ಲಿ ಅದ್ಧೂರಿ ಮೆರವಣಿಗೆ. ಜ್ಞಾನದ ಬುತ್ತಿ ಬಿತ್ತಿದ ಶಿಕ್ಷಕನಿಗೆ(Teacher) ಕಣ್ಣೀರ ಬೀಳ್ಕೊಡುಗೆ. ಈ ದೃಶ್ಯ ಕಂಡು ಬಂದಿದ್ದು ಗದಗ(Gadag) ಜಿಲ್ಲೆಯ ನಾಗರಮಡುವು ಗ್ರಾಮದಲ್ಲಿ. ಪುಟ್ಟಹಳ್ಳಿಯಲ್ಲಿ ಬರೋಬ್ಬರಿ 16 ವರ್ಷ ಸಾರ್ಥಕ ಸೇವೆ ಸಲ್ಲಿಸಿದ ಶಿಕ್ಷಕ ಬಸವರಾಜ್ ಹೆಳವಿ ಅವರಿಗೆ ವರ್ಗಾವಣೆಯಾಗಿದೆ. ನೆಚ್ಚಿನ ಶಿಕ್ಷಕನನ್ನು  ಗ್ರಾಮದ ರಸ್ತೆಗಳಲ್ಲಿ ರಂಗೋಲಿ ಹಾಕಿ. ತೋರಣಕಟ್ಟಿ..ತೆರದ ವಾಹನದಲ್ಲಿ ಮೆರವಣಿಗೆ ಮಾಡಿ ಬೀಳ್ಕೊಟ್ಟರು. 16 ವರ್ಷಗಳ ಕಾಲ ಸಾವಿರಾರು ಮಕ್ಕಳ ಭವಿಷ್ಯ ರೂಪಿಸಿದ ಶಿಕ್ಷಕನ ವರ್ಗಾವಣೆ (Transfer) ಕೆಲವರನ್ನು ಕಣ್ಣೀರ ಕಡಲಲ್ಲಿ ತೇಲಿಸಿತು. ಮಕ್ಕಳು ಮಾತ್ರವಲ್ಲ. ಪೋಷಕರೂ ಬಿಕ್ಕಿ ಬಿಕ್ಕಿ ಅತ್ತರು. ಇಂಗ್ಲಿಷ್ ಶಿಕ್ಷಕರಾಗಿದ್ದ ಬಸವರಾಜ್ ಹೆಳವಿ.. ಮಕ್ಕಳ ಅಭ್ಯುದಯಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದರು. ಬೆಳಗ್ಗೆ 6 ಗಂಟೆಯಿಂದ್ಲೆ ಫೀಲ್ಡ್ ಗೆ ಇಳೀತಿದ್ದ ಬಸವರಾಜ್ ಹೆಳವಿ(Basavaraj Helavi) ಮಕ್ಕಳಿಗೆ ಸ್ಪೋರ್ಟ್ಸ್ ಪ್ರ್ಯಾಕ್ಟೀಸ್ ಮಾಡಿಸುತ್ತಿದ್ರು. ರನ್ನಿಂಗ್, ಕಬ್ಬಡ್ಡಿ, ಹೈಜೆಂಪ್, ಕೋಕೋ, ಚೆಸ್ ಹೀಗೆ ವಿವಿಧ ಆಟಗಳ ಟ್ರೈನಿಂಗ್ ನೀಡುತ್ತಿದ್ದರು. ಇದರ ಫಲವಾಗಿ ಗ್ರಾಮದ ಮಕ್ಕಳು ಜಿಲ್ಲಾಮಟ್ಟ, ರಾಜ್ಯ ಮಟ್ಟದಲ್ಲೂ ಪ್ರಶಸ್ತಿ ಬಾಚಿದಾರೆ. ಆ ಗೆದ್ದ ಟ್ರೋಪಿಗಳನ್ನೆಲ್ಲಾ ತೆರೆದ ವಾಹನದಲ್ಲಿ ಇಟ್ಟು ಶಿಕ್ಷಕರ ಮೆರವಣಿಗೆ ಮಾಡಿದ್ರು.

ಇದನ್ನೂ ವೀಕ್ಷಿಸಿ:  ಯೇಸು ಹೊಗಳಿಕೆ..ಹಿಂದೂ ದೇವರುಗಳ ಬಗ್ಗೆ ಅಶ್ಲೀಲ ಮಾತು: ವ್ಯಕ್ತಿಯ ವಿಡಿಯೋ ವೈರಲ್‌

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more