BIG 3: ಗದಗ ತರಕಾರಿ ಮಾರುಕಟ್ಟೆಯಲ್ಲಿ 'ಕತ್ತಲೆ'ಯಲ್ಲೇ ರೈತರ ವ್ಯಾಪಾರ

BIG 3: ಗದಗ ತರಕಾರಿ ಮಾರುಕಟ್ಟೆಯಲ್ಲಿ 'ಕತ್ತಲೆ'ಯಲ್ಲೇ ರೈತರ ವ್ಯಾಪಾರ

Published : Jan 18, 2023, 03:49 PM ISTUpdated : Jan 18, 2023, 03:50 PM IST

ಗದಗ ನಗರದ ಹೃದಯ ಭಾಗದಲ್ಲಿನ ವೆಜಿಟೆಬಲ್ ಮಾರ್ಕೆಟ್'ನಲ್ಲಿ ಸಂಜೆ 6 ಗಂಟೆಯಾಗ್ತಿದ್ದಂತೆ ಕತ್ತಲೆಯಲ್ಲೇ ಕ್ಯಾಂಡಲ್ ಲೈಟ್ ಇಲ್ವೆ, ಚಾರ್ಜರ್ ಲೈಟ್ ಹಚ್ಕೊಂಡು ವ್ಯಾಪಾರ ಮಾಡೋ ಪರಿಸ್ಥಿತಿ ಎದುರಾಗಿದೆ. 

ಗದಗ ನಗರದಲ್ಲಿ ನಿತ್ಯ ಬರೋಬ್ಬರಿ 40 ತರಕಾರಿ ಮಳಿಗೆಗಳ ವ್ಯಾಪಾರಸ್ಥರು ಸಂಜೆ ಕತ್ತಲಲ್ಲಿ ವ್ಯಾಪಾರ ಮಾಡ್ತಾರೆ. ಶಾಸಕರು, ಜಿಲ್ಲಾಧಿಕಾರಿಗಳು, ಕಮಿಷನರ್ ಸಾಹೇಬರಿಗೆ ದೂರು ನೀಡಿದ್ರೂ ಪ್ರಯೋಜನವಾಗಿಲ್ಲ. ಗ್ರೇನ್ ಮಾರ್ಕೆಟ್ ನಲ್ಲಿ ವ್ಯಾಪಾರ ಮಾಡೋ ತರಕಾರಿ ವ್ಯಾಪಾರಸ್ಥರಿಗೆ ಅನುಕೂಲವಾಗ್ಲಿ, ಮಳೆಗಾಳಿಯಿಂದ ರಕ್ಷಣೆ ನೀಡ್ಲೆ ಅನ್ನೋ ಉದ್ದೇಶಕ್ಕೆ ಶೆಡ್ ನಿರ್ಮಾಣ ಮಾಡಲಾಗಿದೆ. ನಗರಸಭೆ ಜನರಲ್ ಫಂಡ್'ನ 20 ಲಕ್ಷ ರೂ. ವ್ಯಯಿಸಿ 2021ರಲ್ಲಿ‌ ಕಾಮಗಾರಿ ಆರಂಭಿಸಿ ಕಳೆದ ಏಳು ತಿಂಗಳ ಹಿಂದೆ ಶೆಡ್ ನಿರ್ಮಾಣ ಮಾಡಿದ್ರು. ಶೆಡ್'ಗೆ ಕರೆಂಟ್ ತಾಗಿ ಅನಾಹುತ ಆಗದಿರಲಿ ಎಂದು ಎಲೆಕ್ಟ್ರಿಕ್ ಕನೆಕ್ಷನ್ ತಪ್ಪಿಸಲಾಗಿದೆ. ಗ್ರೇನ್ ಮಾರ್ಕೆಟ್'ನ ಒಂದು ಭಾಗಕ್ಕೆ ಪವರ್ ಕನೆಕ್ಷನ್ ಇದೆ. ಅಲ್ಲಿ ಸರಿಯಾಗಿ ಬೆಳಕಿನ ವ್ಯವಸ್ಥೆ ಇದೆ. ಆದರೆ 40 ಕ್ಕೂ ಹೆಚ್ಚು ವ್ಯಾಪಾರಸ್ಥರು ಕೂರುವ ಮತ್ತೊಂದು ಭಾಗಕ್ಕೆ ಕರೆಂಟ್ ಇಲ್ಲ. ಹೀಗಾಗಿ ಈ ಭಾಗಕ್ಕೆ ಜನ ಕಾಲಿಡೋದಕ್ಕೂ ಭಯ ಪಡ್ತಾರೆ. ಕೆಲಸ ಮುಗಿಸಿ ಮನೆಗೆ ಹೋಗುವಾಗ ಬಹುತೇಕರು ತರಕಾರಿ ಖರೀದಿಸ್ತಾರೆ. ಸರಿಯಾದ ಬೆಳಕು ಇಲ್ದಿದ್ರೆ ವ್ಯಾಪಾರ ಆಗೋದಾದ್ರೂ ಹೇಗೆ ಅಂತಾರೆ ತರಕಾರಿ ವ್ಯಾಪಾರಸ್ಥರು. ಈ ಸಮಸ್ಯೆಯನ್ನು ಬಗೆಹರಿಸೋ ನಿಟ್ಟಿನಲ್ಲಿ ನಗರಸಭೆ ಕ್ರಮ ತೆಗೆದುಕೊಳ್ಳಬೇಕಿದೆ.

ವಿಧಾನಸಭೆ ಜೊತೆ ಕೇಂದ್ರದಲ್ಲಿ ಹ್ಯಾಟ್ರಿಕ್‌ ಗೆಲುವಿಗೆ ಪ್ಲಾನ್‌: ಹೈಕಮಾಂಡ್ ಕೊಟ್ಟ ಟಾಸ್ಕ್ ಏನು?

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more