BIG 3: ಗದಗ ತರಕಾರಿ ಮಾರುಕಟ್ಟೆಯಲ್ಲಿ 'ಕತ್ತಲೆ'ಯಲ್ಲೇ ರೈತರ ವ್ಯಾಪಾರ

BIG 3: ಗದಗ ತರಕಾರಿ ಮಾರುಕಟ್ಟೆಯಲ್ಲಿ 'ಕತ್ತಲೆ'ಯಲ್ಲೇ ರೈತರ ವ್ಯಾಪಾರ

Published : Jan 18, 2023, 03:49 PM ISTUpdated : Jan 18, 2023, 03:50 PM IST

ಗದಗ ನಗರದ ಹೃದಯ ಭಾಗದಲ್ಲಿನ ವೆಜಿಟೆಬಲ್ ಮಾರ್ಕೆಟ್'ನಲ್ಲಿ ಸಂಜೆ 6 ಗಂಟೆಯಾಗ್ತಿದ್ದಂತೆ ಕತ್ತಲೆಯಲ್ಲೇ ಕ್ಯಾಂಡಲ್ ಲೈಟ್ ಇಲ್ವೆ, ಚಾರ್ಜರ್ ಲೈಟ್ ಹಚ್ಕೊಂಡು ವ್ಯಾಪಾರ ಮಾಡೋ ಪರಿಸ್ಥಿತಿ ಎದುರಾಗಿದೆ. 

ಗದಗ ನಗರದಲ್ಲಿ ನಿತ್ಯ ಬರೋಬ್ಬರಿ 40 ತರಕಾರಿ ಮಳಿಗೆಗಳ ವ್ಯಾಪಾರಸ್ಥರು ಸಂಜೆ ಕತ್ತಲಲ್ಲಿ ವ್ಯಾಪಾರ ಮಾಡ್ತಾರೆ. ಶಾಸಕರು, ಜಿಲ್ಲಾಧಿಕಾರಿಗಳು, ಕಮಿಷನರ್ ಸಾಹೇಬರಿಗೆ ದೂರು ನೀಡಿದ್ರೂ ಪ್ರಯೋಜನವಾಗಿಲ್ಲ. ಗ್ರೇನ್ ಮಾರ್ಕೆಟ್ ನಲ್ಲಿ ವ್ಯಾಪಾರ ಮಾಡೋ ತರಕಾರಿ ವ್ಯಾಪಾರಸ್ಥರಿಗೆ ಅನುಕೂಲವಾಗ್ಲಿ, ಮಳೆಗಾಳಿಯಿಂದ ರಕ್ಷಣೆ ನೀಡ್ಲೆ ಅನ್ನೋ ಉದ್ದೇಶಕ್ಕೆ ಶೆಡ್ ನಿರ್ಮಾಣ ಮಾಡಲಾಗಿದೆ. ನಗರಸಭೆ ಜನರಲ್ ಫಂಡ್'ನ 20 ಲಕ್ಷ ರೂ. ವ್ಯಯಿಸಿ 2021ರಲ್ಲಿ‌ ಕಾಮಗಾರಿ ಆರಂಭಿಸಿ ಕಳೆದ ಏಳು ತಿಂಗಳ ಹಿಂದೆ ಶೆಡ್ ನಿರ್ಮಾಣ ಮಾಡಿದ್ರು. ಶೆಡ್'ಗೆ ಕರೆಂಟ್ ತಾಗಿ ಅನಾಹುತ ಆಗದಿರಲಿ ಎಂದು ಎಲೆಕ್ಟ್ರಿಕ್ ಕನೆಕ್ಷನ್ ತಪ್ಪಿಸಲಾಗಿದೆ. ಗ್ರೇನ್ ಮಾರ್ಕೆಟ್'ನ ಒಂದು ಭಾಗಕ್ಕೆ ಪವರ್ ಕನೆಕ್ಷನ್ ಇದೆ. ಅಲ್ಲಿ ಸರಿಯಾಗಿ ಬೆಳಕಿನ ವ್ಯವಸ್ಥೆ ಇದೆ. ಆದರೆ 40 ಕ್ಕೂ ಹೆಚ್ಚು ವ್ಯಾಪಾರಸ್ಥರು ಕೂರುವ ಮತ್ತೊಂದು ಭಾಗಕ್ಕೆ ಕರೆಂಟ್ ಇಲ್ಲ. ಹೀಗಾಗಿ ಈ ಭಾಗಕ್ಕೆ ಜನ ಕಾಲಿಡೋದಕ್ಕೂ ಭಯ ಪಡ್ತಾರೆ. ಕೆಲಸ ಮುಗಿಸಿ ಮನೆಗೆ ಹೋಗುವಾಗ ಬಹುತೇಕರು ತರಕಾರಿ ಖರೀದಿಸ್ತಾರೆ. ಸರಿಯಾದ ಬೆಳಕು ಇಲ್ದಿದ್ರೆ ವ್ಯಾಪಾರ ಆಗೋದಾದ್ರೂ ಹೇಗೆ ಅಂತಾರೆ ತರಕಾರಿ ವ್ಯಾಪಾರಸ್ಥರು. ಈ ಸಮಸ್ಯೆಯನ್ನು ಬಗೆಹರಿಸೋ ನಿಟ್ಟಿನಲ್ಲಿ ನಗರಸಭೆ ಕ್ರಮ ತೆಗೆದುಕೊಳ್ಳಬೇಕಿದೆ.

ವಿಧಾನಸಭೆ ಜೊತೆ ಕೇಂದ್ರದಲ್ಲಿ ಹ್ಯಾಟ್ರಿಕ್‌ ಗೆಲುವಿಗೆ ಪ್ಲಾನ್‌: ಹೈಕಮಾಂಡ್ ಕೊಟ್ಟ ಟಾಸ್ಕ್ ಏನು?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more