BIG 3: ಗದಗ ತರಕಾರಿ ಮಾರುಕಟ್ಟೆಯಲ್ಲಿ 'ಕತ್ತಲೆ'ಯಲ್ಲೇ ರೈತರ ವ್ಯಾಪಾರ

BIG 3: ಗದಗ ತರಕಾರಿ ಮಾರುಕಟ್ಟೆಯಲ್ಲಿ 'ಕತ್ತಲೆ'ಯಲ್ಲೇ ರೈತರ ವ್ಯಾಪಾರ

Published : Jan 18, 2023, 03:49 PM ISTUpdated : Jan 18, 2023, 03:50 PM IST

ಗದಗ ನಗರದ ಹೃದಯ ಭಾಗದಲ್ಲಿನ ವೆಜಿಟೆಬಲ್ ಮಾರ್ಕೆಟ್'ನಲ್ಲಿ ಸಂಜೆ 6 ಗಂಟೆಯಾಗ್ತಿದ್ದಂತೆ ಕತ್ತಲೆಯಲ್ಲೇ ಕ್ಯಾಂಡಲ್ ಲೈಟ್ ಇಲ್ವೆ, ಚಾರ್ಜರ್ ಲೈಟ್ ಹಚ್ಕೊಂಡು ವ್ಯಾಪಾರ ಮಾಡೋ ಪರಿಸ್ಥಿತಿ ಎದುರಾಗಿದೆ. 

ಗದಗ ನಗರದಲ್ಲಿ ನಿತ್ಯ ಬರೋಬ್ಬರಿ 40 ತರಕಾರಿ ಮಳಿಗೆಗಳ ವ್ಯಾಪಾರಸ್ಥರು ಸಂಜೆ ಕತ್ತಲಲ್ಲಿ ವ್ಯಾಪಾರ ಮಾಡ್ತಾರೆ. ಶಾಸಕರು, ಜಿಲ್ಲಾಧಿಕಾರಿಗಳು, ಕಮಿಷನರ್ ಸಾಹೇಬರಿಗೆ ದೂರು ನೀಡಿದ್ರೂ ಪ್ರಯೋಜನವಾಗಿಲ್ಲ. ಗ್ರೇನ್ ಮಾರ್ಕೆಟ್ ನಲ್ಲಿ ವ್ಯಾಪಾರ ಮಾಡೋ ತರಕಾರಿ ವ್ಯಾಪಾರಸ್ಥರಿಗೆ ಅನುಕೂಲವಾಗ್ಲಿ, ಮಳೆಗಾಳಿಯಿಂದ ರಕ್ಷಣೆ ನೀಡ್ಲೆ ಅನ್ನೋ ಉದ್ದೇಶಕ್ಕೆ ಶೆಡ್ ನಿರ್ಮಾಣ ಮಾಡಲಾಗಿದೆ. ನಗರಸಭೆ ಜನರಲ್ ಫಂಡ್'ನ 20 ಲಕ್ಷ ರೂ. ವ್ಯಯಿಸಿ 2021ರಲ್ಲಿ‌ ಕಾಮಗಾರಿ ಆರಂಭಿಸಿ ಕಳೆದ ಏಳು ತಿಂಗಳ ಹಿಂದೆ ಶೆಡ್ ನಿರ್ಮಾಣ ಮಾಡಿದ್ರು. ಶೆಡ್'ಗೆ ಕರೆಂಟ್ ತಾಗಿ ಅನಾಹುತ ಆಗದಿರಲಿ ಎಂದು ಎಲೆಕ್ಟ್ರಿಕ್ ಕನೆಕ್ಷನ್ ತಪ್ಪಿಸಲಾಗಿದೆ. ಗ್ರೇನ್ ಮಾರ್ಕೆಟ್'ನ ಒಂದು ಭಾಗಕ್ಕೆ ಪವರ್ ಕನೆಕ್ಷನ್ ಇದೆ. ಅಲ್ಲಿ ಸರಿಯಾಗಿ ಬೆಳಕಿನ ವ್ಯವಸ್ಥೆ ಇದೆ. ಆದರೆ 40 ಕ್ಕೂ ಹೆಚ್ಚು ವ್ಯಾಪಾರಸ್ಥರು ಕೂರುವ ಮತ್ತೊಂದು ಭಾಗಕ್ಕೆ ಕರೆಂಟ್ ಇಲ್ಲ. ಹೀಗಾಗಿ ಈ ಭಾಗಕ್ಕೆ ಜನ ಕಾಲಿಡೋದಕ್ಕೂ ಭಯ ಪಡ್ತಾರೆ. ಕೆಲಸ ಮುಗಿಸಿ ಮನೆಗೆ ಹೋಗುವಾಗ ಬಹುತೇಕರು ತರಕಾರಿ ಖರೀದಿಸ್ತಾರೆ. ಸರಿಯಾದ ಬೆಳಕು ಇಲ್ದಿದ್ರೆ ವ್ಯಾಪಾರ ಆಗೋದಾದ್ರೂ ಹೇಗೆ ಅಂತಾರೆ ತರಕಾರಿ ವ್ಯಾಪಾರಸ್ಥರು. ಈ ಸಮಸ್ಯೆಯನ್ನು ಬಗೆಹರಿಸೋ ನಿಟ್ಟಿನಲ್ಲಿ ನಗರಸಭೆ ಕ್ರಮ ತೆಗೆದುಕೊಳ್ಳಬೇಕಿದೆ.

ವಿಧಾನಸಭೆ ಜೊತೆ ಕೇಂದ್ರದಲ್ಲಿ ಹ್ಯಾಟ್ರಿಕ್‌ ಗೆಲುವಿಗೆ ಪ್ಲಾನ್‌: ಹೈಕಮಾಂಡ್ ಕೊಟ್ಟ ಟಾಸ್ಕ್ ಏನು?

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more