Bagalkot: ಸವುಳು ಜವುಳು ಭೂಮಿಯಿಂದ ಕಂಗೆಟ್ಟ ಅನ್ನದಾತ: ಕಂಗಾಲಾದ ರೈತರು..!

Bagalkot: ಸವುಳು ಜವುಳು ಭೂಮಿಯಿಂದ ಕಂಗೆಟ್ಟ ಅನ್ನದಾತ: ಕಂಗಾಲಾದ ರೈತರು..!

Suvarna News   | Asianet News
Published : Mar 05, 2022, 08:55 AM IST

*  ಸಮಸ್ಯೆ ಮುಕ್ತಿಗೆ ಸರ್ಕಾರದ ಪ್ರಾಯೋಗಿಕ ಯೋಜನೆ
*  ಮುಧೋಳ ಮತ್ತು  ಜಮಖಂಡಿಯಲ್ಲಿ ವಿನೂತನ ಪ್ರಯತ್ನ
*  ಅಂದಾಜು 15 ಸಾವಿರ ಎಕರೆ ಪ್ರದೇಶ ಸವುಳು ಜವುಳು 
 

ಬಾಗಲಕೋಟೆ(ಮಾ.05): ರಾಜ್ಯದಲ್ಲಿಯೇ ಅತಿಹೆಚ್ಚು ಸವುಳು ಜವುಳು ಭೂಮಿಯನ್ನ ಬಾಗಲಕೋಟೆ ಜಿಲ್ಲೆ ಹೊಂದಿದ್ದು, ಜಿಲ್ಲೆಯ ಮುಧೋಳ ಮತ್ತು ಜಮಖಂಡಿ ತಾಲೂಕಿನಲ್ಲಿ 10 ರಿಂದ 15 ಸಾವಿರಕ್ಕೂ ಅಧಿಕ ಎಕರೆ ಭೂಮಿ ಇದೀಗ ಸವುಳು ಜವುಳಾಗಿದೆ. ನಿರಂತರ ನದಿ ನೀರು ಹಾಯಿಸಿ, ಕಬ್ಬು ಬೆಳೆಯುತ್ತ ಬಂದಿರೋ ರೈತರು ಈ ಸಮಸ್ಯೆಯಿಂದ ಬಳಲುತ್ತಿದ್ದು, ಇದರೊಟ್ಟಿಗೆ ರಾಜ್ಯದಲ್ಲಿ ಶೇ.35ರಷ್ಟು ನೀರಾವರಿ ಜಮೀನು, ಶೇ.65ರಷ್ಟು ಒಣಬೇಸಾಯದ ಜಮೀನಿದೆ. ಇವುಗಳ ಮಧ್ಯೆ ನೀರಾವರಿ ಯೋಜನೆಗಳನ್ನ ಅನುಷ್ಠಾನಗೊಳಿಸುವಲ್ಲಿ ಹಲವೆಡೆ ಸವುಳು ಜವುಳು ಭೂಮಿಯ ಎಫೆಕ್ಟ್ ಆಗಿದ್ದು, ಜಿಲ್ಲೆಯಲ್ಲಿ ಘಟಪ್ರಭಾ ನದಿಯ ಇಕ್ಕೆಲದಲ್ಲಿರೋ 10ಕ್ಕೂ ಅಧಿಕ ಹಳ್ಳಿಗಳ ರೈತ್ರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. 

ಸದಾ ನೀರಿನಿಂದ ನಿಂತು ಭೂಮಿಯಲ್ಲಿ ಬೇರೆ ಬೇರೆ ಬೆಳೆ ಬೆಳೆಯಲಾಗದೆ ರೈತ್ರು ಕೈಕಟ್ಟಿ ಕೂರುವಂತಾಗಿದೆ. ಹೀಗಾಗಿ ಈ ಭಾಗದ ರೈತಾಪಿ ವರ್ಗ ತಮ್ಮ ಜಮೀನನ್ನ ಬಿಟ್ಟು ಬೇರೆಡೆ ಕೆಲ್ಸ ಮಾಡೋದು ಮತ್ತು ತಮ್ಮ ಹೊಲ ಮಾರಾಟ ಮಾಡಿ ಬೇರೆ ಕಡೆಗೆ ಹೊಲ ಖರೀದಿಗೆ ಮುಂದಾಗೋದು ಜೊತೆಗೆ ಇನ್ನೂ ಕೆಲವರು ಊರನ್ನೇ ಬಿಟ್ಟು ಹೋಗುವಂತಹ ಪರಿಸ್ಥಿತಿ ಬಂದಿದ್ದು, ರೈತ್ರು ಅತಂತ್ರರಾಗಿದ್ದಾರೆ ಅಂತಾರೆ ಸ್ಥಳೀಯ ರೈತ್ರು. 

Karnataka Budget 2022 ರಾಜ್ಯ ಬಜೆಟ್ ಕುರಿತಾಗಿ ತಜ್ಞರು ಏನಂತಾರೆ?

ಇನ್ನು ಬಾಗಲಕೋಟೆ ಜಿಲ್ಲೆಯಲ್ಲಿ ಅತಿಹೆಚ್ಚಾಗಿ ಸವುಳು ಜವುಳು ಭೂಮಿ ಕಂಡು ಬಂದಿರೋ ಹಿನ್ನೆಲೆಯಲ್ಲಿ ಇದನ್ನ ಸರ್ಕಾರದ ಮಟ್ಟಕ್ಕೆ ಚರ್ಚೆಗೆ ತಂದಿದ್ದಾರೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ.  ಜಲಸಂಪನ್ಮೂಲ ಇಲಾಖೆ ಮೂಲಕ ಧಾರವಾಡದ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ ಹೆಸರಿನ ವಾಲ್ಮೀ ಸಂಸ್ಥೆಯ ಅಡಿಯಲ್ಲಿ ಇದೀಗ ರೈತರ ಸಮಸ್ಯೆಗೆ ಮುಕ್ತಿ ಹಾಡಲು ಮುಂದಾಗಿದೆ. 

ಈ ಸಂಸ್ಥೆಯ ಮೂಲಕ ಸವುಳು ಜವುಳು ಭೂಮಿಯನ್ನ ಪರಿವರ್ತನೆ ಮಾಡುವ ಹೊಸ ಪ್ರಯತ್ನ ನಡೆಸುತ್ತಿದೆ. ನೂತನ ತಂತ್ರಜ್ಞಾನದ ಮೂಲಕ ಪೈಪ್ ಮತ್ತು ಮರಳು ಸೇರಿದಂತೆ ವೈಜ್ಞಾನಿಕ ವಸ್ತುಗಳನ್ನ ಬಳಸಿ ಸವುಳು ಜವುಳು ಭೂಮಿಯನ್ನ ಮತ್ತೇ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಯತ್ನ ನಡೆಸಿದ್ದು, ಇವುಗಳ ಮಧ್ಯೆ ರೈತರಿಗಾಗಿ ತರಬೇತಿ  ಮತ್ತು ಮಾಹಿತಿ ಕಾರ್ಯಾಗಾರವನ್ನೂ ಸಹ ಮುಧೋಳದಲ್ಲಿ ಏರ್ಪಡಿಸಲಾಗಿದೆ. ಈ ಮೂಲಕ ರೈತರ ಸಮಸ್ಯೆಗೆ ಮುಕ್ತಿ ಹಾಡಲು ಸರ್ಕಾರ ಮುಧೋಳ ಮತ್ತು ಜಮಖಂಡಿ ತಾಲೂಕಿನ ಪ್ರಾಯೋಗಿಕ ಯೋಜನೆ ಜಾರಿಗೊಳಿಸಿದೆ ಅಂತಾರೆ ಸಚಿವ ಗೋವಿಂದ ಕಾರಜೋಳ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more