Bagalkot: ಸವುಳು ಜವುಳು ಭೂಮಿಯಿಂದ ಕಂಗೆಟ್ಟ ಅನ್ನದಾತ: ಕಂಗಾಲಾದ ರೈತರು..!

Bagalkot: ಸವುಳು ಜವುಳು ಭೂಮಿಯಿಂದ ಕಂಗೆಟ್ಟ ಅನ್ನದಾತ: ಕಂಗಾಲಾದ ರೈತರು..!

Suvarna News   | Asianet News
Published : Mar 05, 2022, 08:55 AM IST

*  ಸಮಸ್ಯೆ ಮುಕ್ತಿಗೆ ಸರ್ಕಾರದ ಪ್ರಾಯೋಗಿಕ ಯೋಜನೆ
*  ಮುಧೋಳ ಮತ್ತು  ಜಮಖಂಡಿಯಲ್ಲಿ ವಿನೂತನ ಪ್ರಯತ್ನ
*  ಅಂದಾಜು 15 ಸಾವಿರ ಎಕರೆ ಪ್ರದೇಶ ಸವುಳು ಜವುಳು 
 

ಬಾಗಲಕೋಟೆ(ಮಾ.05): ರಾಜ್ಯದಲ್ಲಿಯೇ ಅತಿಹೆಚ್ಚು ಸವುಳು ಜವುಳು ಭೂಮಿಯನ್ನ ಬಾಗಲಕೋಟೆ ಜಿಲ್ಲೆ ಹೊಂದಿದ್ದು, ಜಿಲ್ಲೆಯ ಮುಧೋಳ ಮತ್ತು ಜಮಖಂಡಿ ತಾಲೂಕಿನಲ್ಲಿ 10 ರಿಂದ 15 ಸಾವಿರಕ್ಕೂ ಅಧಿಕ ಎಕರೆ ಭೂಮಿ ಇದೀಗ ಸವುಳು ಜವುಳಾಗಿದೆ. ನಿರಂತರ ನದಿ ನೀರು ಹಾಯಿಸಿ, ಕಬ್ಬು ಬೆಳೆಯುತ್ತ ಬಂದಿರೋ ರೈತರು ಈ ಸಮಸ್ಯೆಯಿಂದ ಬಳಲುತ್ತಿದ್ದು, ಇದರೊಟ್ಟಿಗೆ ರಾಜ್ಯದಲ್ಲಿ ಶೇ.35ರಷ್ಟು ನೀರಾವರಿ ಜಮೀನು, ಶೇ.65ರಷ್ಟು ಒಣಬೇಸಾಯದ ಜಮೀನಿದೆ. ಇವುಗಳ ಮಧ್ಯೆ ನೀರಾವರಿ ಯೋಜನೆಗಳನ್ನ ಅನುಷ್ಠಾನಗೊಳಿಸುವಲ್ಲಿ ಹಲವೆಡೆ ಸವುಳು ಜವುಳು ಭೂಮಿಯ ಎಫೆಕ್ಟ್ ಆಗಿದ್ದು, ಜಿಲ್ಲೆಯಲ್ಲಿ ಘಟಪ್ರಭಾ ನದಿಯ ಇಕ್ಕೆಲದಲ್ಲಿರೋ 10ಕ್ಕೂ ಅಧಿಕ ಹಳ್ಳಿಗಳ ರೈತ್ರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. 

ಸದಾ ನೀರಿನಿಂದ ನಿಂತು ಭೂಮಿಯಲ್ಲಿ ಬೇರೆ ಬೇರೆ ಬೆಳೆ ಬೆಳೆಯಲಾಗದೆ ರೈತ್ರು ಕೈಕಟ್ಟಿ ಕೂರುವಂತಾಗಿದೆ. ಹೀಗಾಗಿ ಈ ಭಾಗದ ರೈತಾಪಿ ವರ್ಗ ತಮ್ಮ ಜಮೀನನ್ನ ಬಿಟ್ಟು ಬೇರೆಡೆ ಕೆಲ್ಸ ಮಾಡೋದು ಮತ್ತು ತಮ್ಮ ಹೊಲ ಮಾರಾಟ ಮಾಡಿ ಬೇರೆ ಕಡೆಗೆ ಹೊಲ ಖರೀದಿಗೆ ಮುಂದಾಗೋದು ಜೊತೆಗೆ ಇನ್ನೂ ಕೆಲವರು ಊರನ್ನೇ ಬಿಟ್ಟು ಹೋಗುವಂತಹ ಪರಿಸ್ಥಿತಿ ಬಂದಿದ್ದು, ರೈತ್ರು ಅತಂತ್ರರಾಗಿದ್ದಾರೆ ಅಂತಾರೆ ಸ್ಥಳೀಯ ರೈತ್ರು. 

Karnataka Budget 2022 ರಾಜ್ಯ ಬಜೆಟ್ ಕುರಿತಾಗಿ ತಜ್ಞರು ಏನಂತಾರೆ?

ಇನ್ನು ಬಾಗಲಕೋಟೆ ಜಿಲ್ಲೆಯಲ್ಲಿ ಅತಿಹೆಚ್ಚಾಗಿ ಸವುಳು ಜವುಳು ಭೂಮಿ ಕಂಡು ಬಂದಿರೋ ಹಿನ್ನೆಲೆಯಲ್ಲಿ ಇದನ್ನ ಸರ್ಕಾರದ ಮಟ್ಟಕ್ಕೆ ಚರ್ಚೆಗೆ ತಂದಿದ್ದಾರೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ.  ಜಲಸಂಪನ್ಮೂಲ ಇಲಾಖೆ ಮೂಲಕ ಧಾರವಾಡದ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ ಹೆಸರಿನ ವಾಲ್ಮೀ ಸಂಸ್ಥೆಯ ಅಡಿಯಲ್ಲಿ ಇದೀಗ ರೈತರ ಸಮಸ್ಯೆಗೆ ಮುಕ್ತಿ ಹಾಡಲು ಮುಂದಾಗಿದೆ. 

ಈ ಸಂಸ್ಥೆಯ ಮೂಲಕ ಸವುಳು ಜವುಳು ಭೂಮಿಯನ್ನ ಪರಿವರ್ತನೆ ಮಾಡುವ ಹೊಸ ಪ್ರಯತ್ನ ನಡೆಸುತ್ತಿದೆ. ನೂತನ ತಂತ್ರಜ್ಞಾನದ ಮೂಲಕ ಪೈಪ್ ಮತ್ತು ಮರಳು ಸೇರಿದಂತೆ ವೈಜ್ಞಾನಿಕ ವಸ್ತುಗಳನ್ನ ಬಳಸಿ ಸವುಳು ಜವುಳು ಭೂಮಿಯನ್ನ ಮತ್ತೇ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಯತ್ನ ನಡೆಸಿದ್ದು, ಇವುಗಳ ಮಧ್ಯೆ ರೈತರಿಗಾಗಿ ತರಬೇತಿ  ಮತ್ತು ಮಾಹಿತಿ ಕಾರ್ಯಾಗಾರವನ್ನೂ ಸಹ ಮುಧೋಳದಲ್ಲಿ ಏರ್ಪಡಿಸಲಾಗಿದೆ. ಈ ಮೂಲಕ ರೈತರ ಸಮಸ್ಯೆಗೆ ಮುಕ್ತಿ ಹಾಡಲು ಸರ್ಕಾರ ಮುಧೋಳ ಮತ್ತು ಜಮಖಂಡಿ ತಾಲೂಕಿನ ಪ್ರಾಯೋಗಿಕ ಯೋಜನೆ ಜಾರಿಗೊಳಿಸಿದೆ ಅಂತಾರೆ ಸಚಿವ ಗೋವಿಂದ ಕಾರಜೋಳ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more