ರೈತರ ನೋವನ್ನ ಕೇಳುವ ಕೃಷಿ ಸಚಿವರೇ ಎಲ್ಲಿದ್ದಿರಪ್ಪಾ..! ಗ್ಯಾರಂಟಿ ಕೊಟ್ಟು..ಸುಲಿಗೆ ಮಾಡ್ತಿದೆಯಾ ರಾಜ್ಯ ಸರ್ಕಾರ..?

ರೈತರ ನೋವನ್ನ ಕೇಳುವ ಕೃಷಿ ಸಚಿವರೇ ಎಲ್ಲಿದ್ದಿರಪ್ಪಾ..! ಗ್ಯಾರಂಟಿ ಕೊಟ್ಟು..ಸುಲಿಗೆ ಮಾಡ್ತಿದೆಯಾ ರಾಜ್ಯ ಸರ್ಕಾರ..?

Published : May 29, 2024, 09:18 AM ISTUpdated : May 29, 2024, 09:19 AM IST

ಬಿತ್ತನೆ ಬೀಜದ ಬೆಲೆ ಈ ಪರಿ ಹೆಚ್ಚು ಮಾಡುವುದು ಎಷ್ಟು ಸರಿ..?
ಗ್ಯಾರಂಟಿ ಕೊಟ್ಟು.. ಸುಲಿಗೆ ಮಾಡ್ತಿದೆಯಾ ರಾಜ್ಯ ಸರ್ಕಾರ..? 
ರೈತ ಸಂಪರ್ಕ ಕೇಂದ್ರದಿಂದ ಬರಿಗೈಯಲ್ಲಿ ರೈತರು ವಾಪಸ್ಸು..!
 

ಕೆಲವೇ ಕೆಲವು ದಿನಗಳ ಹಿಂದಿನ ಮಾತು.. ಎಂಥಾ ಬಿಸ್ಲು ಕಣ್ರಿ. ಕಾಲ ಕೆಳಗಿನ ಭೂಮಿಯೂ ಬಿಸಿಬಿಸಿ ಹಂಚಾಗಿ ಹೋಗಿತ್ತು. ಯಾವಾಗ ಹನಿ ಹನಿ ಮಳೆ ಬಂತೋ ಭೂಮಿಯಷ್ಟೇ ಅಲ್ಲ. ಭೂಮಿಯ ಮೇಲೆ ಇರೋ ಸಕಲ ಜೀವರಾಶಿಗಳಿಗೂ ಜೀವಕ್ಕೆ ಜೀವ ಬಂದಂತಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಉತ್ತಮ ಮಳೆಯಾಗುತ್ತಿದೆ. ಕಳೆದ ವರ್ಷ ಬರಗಾಲದಿಂದ(Drought) ತತ್ತರಿಸಿದ್ದ ಜನ, ಈ ಮಳೆಯನ್ನ ನೋಡಿದ್ದೇ ತಡ, ನಿಟ್ಟುಸಿರು ಬಿಟ್ಟಿದ್ದಾರೆ. ಅದರಲ್ಲೂ ಅನ್ನದಾತರಂತೂ (Farmers) ದೊಡ್ಡ ಹಬ್ಬವನ್ನೇ ಆಚರಿಸ್ತಿದ್ದಾರೆ. ಇನ್ನೇನು ಮಳೆ ಆಯ್ತು..ಬಿತ್ತನೇ ಮಾಡ್ಬೇಕು ಅನ್ನೊ ಲೆಕ್ಕಾಚಾರವನ್ನೂ ಶುರು ಮಾಡಿದ್ದಾರೆ. ಆಗಲೇ ನೋಡಿ ಸರ್ಕಾರ ಅವರಿಗೆ ಎಂಥಾ ಶಾಕ್ ಕೊಟ್ಟಿದೆ ಅಂತ. ಕಳೆದ ವರ್ಷ ಬರಗಾಲ ಹೇಗಿತ್ತು ಅನ್ನೊದು ಎಲ್ಲರಿಗೂ ಅನುಭವ ಆಗ್ಹೋಗಿದೆ. ಅದರಲ್ಲೂ ರೈತರಿಗೆ ಆ ಬರಗಾಲದ ಸದ್ಯಕ್ಕೆ ಸುಧಾರಿಸಿಕೊಳ್ಳೊದಕ್ಕೂ ಆಗದಂತ ಬರೆ ಹಾಕಿದೆ. ಈ ಬಾರಿಯೂ ಅಂಥ ಕರಾಳ ದಿನಗಳು ಬರದೇ ಇರಲಿ ಅಂತ ಅಂದುಕೊಳ್ಳುತ್ತಿರುವಾಗಲೇ ಸರ್ಕಾರ ರೈತರ ಇದೇ, ಬರದ ಬರೆಯ ಮೇಲೆ ಇನ್ನೊಂದು ಬರೆಯನ್ನ ಹಾಕಿದೆ. ಅದೇ ಬಿತ್ತನೆ ಬೀಜದ(Sowing Seeds) ದರದ ಬೆಲೆ(Price High) ಏರಿಕೆಯ  ಕಳೆದ ಬಾರಿ ಮಳೆ ಕೈಕೊಟ್ಟಿತ್ತು. ಈ ಬಾರಿ ಮುಂಗಾರು ಮಳೆ ಚೆನ್ನಾಗಾಗ್ತಿದೆ, ಮುಂದಿನ ದಿನಗಳಲ್ಲೂ ಮಳೆ ಚೆನ್ನಾಗಿ ಆಗುತ್ತೆ. ಈ ಶುಭ ಸುದ್ದಿ ಯಾವಾಗ ಹವಾಮಾನ ಇಲಾಖೆ ಕೊಟ್ಟಿತ್ತೋ, ರೈತರಿಗೆ ಆದ ಸಮಾಧಾನ ಅಷ್ಟಿಷ್ಟಲ್ಲ. ಅವರು ಬೆಳೆಯೋ ಬೆಳೆಗೆ ಮಳೆಯೇ ತಾನೇ ಜೀವಾಳ. ಇನ್ನೇನು ತಡ ಅಂತ ಬಿತ್ತನೆಗೆ ಮುಂದಾದ್ರು.. ಅದಕ್ಕೆ ಈಗ ಬಿತ್ತನೇ ಬೀಜ ಬೇಕು.. ಅದನ್ನ ಕೊಂಡುಕೊಳ್ಳೊದಕ್ಕೆ ಅಂತ ಹೋದ ಅನ್ನದಾತನಿಗೆ ಶಾಕೋ ಶಾಕು.

ಇದನ್ನೂ ವೀಕ್ಷಿಸಿ:  Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? 12 ರಾಶಿಗಳ ಫಲ ಯಾವ ರೀತಿ ಫಲ ಇದೆ?

24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
Read more