ರೈತರ ನೋವನ್ನ ಕೇಳುವ ಕೃಷಿ ಸಚಿವರೇ ಎಲ್ಲಿದ್ದಿರಪ್ಪಾ..! ಗ್ಯಾರಂಟಿ ಕೊಟ್ಟು..ಸುಲಿಗೆ ಮಾಡ್ತಿದೆಯಾ ರಾಜ್ಯ ಸರ್ಕಾರ..?

ರೈತರ ನೋವನ್ನ ಕೇಳುವ ಕೃಷಿ ಸಚಿವರೇ ಎಲ್ಲಿದ್ದಿರಪ್ಪಾ..! ಗ್ಯಾರಂಟಿ ಕೊಟ್ಟು..ಸುಲಿಗೆ ಮಾಡ್ತಿದೆಯಾ ರಾಜ್ಯ ಸರ್ಕಾರ..?

Published : May 29, 2024, 09:18 AM ISTUpdated : May 29, 2024, 09:19 AM IST

ಬಿತ್ತನೆ ಬೀಜದ ಬೆಲೆ ಈ ಪರಿ ಹೆಚ್ಚು ಮಾಡುವುದು ಎಷ್ಟು ಸರಿ..?
ಗ್ಯಾರಂಟಿ ಕೊಟ್ಟು.. ಸುಲಿಗೆ ಮಾಡ್ತಿದೆಯಾ ರಾಜ್ಯ ಸರ್ಕಾರ..? 
ರೈತ ಸಂಪರ್ಕ ಕೇಂದ್ರದಿಂದ ಬರಿಗೈಯಲ್ಲಿ ರೈತರು ವಾಪಸ್ಸು..!
 

ಕೆಲವೇ ಕೆಲವು ದಿನಗಳ ಹಿಂದಿನ ಮಾತು.. ಎಂಥಾ ಬಿಸ್ಲು ಕಣ್ರಿ. ಕಾಲ ಕೆಳಗಿನ ಭೂಮಿಯೂ ಬಿಸಿಬಿಸಿ ಹಂಚಾಗಿ ಹೋಗಿತ್ತು. ಯಾವಾಗ ಹನಿ ಹನಿ ಮಳೆ ಬಂತೋ ಭೂಮಿಯಷ್ಟೇ ಅಲ್ಲ. ಭೂಮಿಯ ಮೇಲೆ ಇರೋ ಸಕಲ ಜೀವರಾಶಿಗಳಿಗೂ ಜೀವಕ್ಕೆ ಜೀವ ಬಂದಂತಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಉತ್ತಮ ಮಳೆಯಾಗುತ್ತಿದೆ. ಕಳೆದ ವರ್ಷ ಬರಗಾಲದಿಂದ(Drought) ತತ್ತರಿಸಿದ್ದ ಜನ, ಈ ಮಳೆಯನ್ನ ನೋಡಿದ್ದೇ ತಡ, ನಿಟ್ಟುಸಿರು ಬಿಟ್ಟಿದ್ದಾರೆ. ಅದರಲ್ಲೂ ಅನ್ನದಾತರಂತೂ (Farmers) ದೊಡ್ಡ ಹಬ್ಬವನ್ನೇ ಆಚರಿಸ್ತಿದ್ದಾರೆ. ಇನ್ನೇನು ಮಳೆ ಆಯ್ತು..ಬಿತ್ತನೇ ಮಾಡ್ಬೇಕು ಅನ್ನೊ ಲೆಕ್ಕಾಚಾರವನ್ನೂ ಶುರು ಮಾಡಿದ್ದಾರೆ. ಆಗಲೇ ನೋಡಿ ಸರ್ಕಾರ ಅವರಿಗೆ ಎಂಥಾ ಶಾಕ್ ಕೊಟ್ಟಿದೆ ಅಂತ. ಕಳೆದ ವರ್ಷ ಬರಗಾಲ ಹೇಗಿತ್ತು ಅನ್ನೊದು ಎಲ್ಲರಿಗೂ ಅನುಭವ ಆಗ್ಹೋಗಿದೆ. ಅದರಲ್ಲೂ ರೈತರಿಗೆ ಆ ಬರಗಾಲದ ಸದ್ಯಕ್ಕೆ ಸುಧಾರಿಸಿಕೊಳ್ಳೊದಕ್ಕೂ ಆಗದಂತ ಬರೆ ಹಾಕಿದೆ. ಈ ಬಾರಿಯೂ ಅಂಥ ಕರಾಳ ದಿನಗಳು ಬರದೇ ಇರಲಿ ಅಂತ ಅಂದುಕೊಳ್ಳುತ್ತಿರುವಾಗಲೇ ಸರ್ಕಾರ ರೈತರ ಇದೇ, ಬರದ ಬರೆಯ ಮೇಲೆ ಇನ್ನೊಂದು ಬರೆಯನ್ನ ಹಾಕಿದೆ. ಅದೇ ಬಿತ್ತನೆ ಬೀಜದ(Sowing Seeds) ದರದ ಬೆಲೆ(Price High) ಏರಿಕೆಯ  ಕಳೆದ ಬಾರಿ ಮಳೆ ಕೈಕೊಟ್ಟಿತ್ತು. ಈ ಬಾರಿ ಮುಂಗಾರು ಮಳೆ ಚೆನ್ನಾಗಾಗ್ತಿದೆ, ಮುಂದಿನ ದಿನಗಳಲ್ಲೂ ಮಳೆ ಚೆನ್ನಾಗಿ ಆಗುತ್ತೆ. ಈ ಶುಭ ಸುದ್ದಿ ಯಾವಾಗ ಹವಾಮಾನ ಇಲಾಖೆ ಕೊಟ್ಟಿತ್ತೋ, ರೈತರಿಗೆ ಆದ ಸಮಾಧಾನ ಅಷ್ಟಿಷ್ಟಲ್ಲ. ಅವರು ಬೆಳೆಯೋ ಬೆಳೆಗೆ ಮಳೆಯೇ ತಾನೇ ಜೀವಾಳ. ಇನ್ನೇನು ತಡ ಅಂತ ಬಿತ್ತನೆಗೆ ಮುಂದಾದ್ರು.. ಅದಕ್ಕೆ ಈಗ ಬಿತ್ತನೇ ಬೀಜ ಬೇಕು.. ಅದನ್ನ ಕೊಂಡುಕೊಳ್ಳೊದಕ್ಕೆ ಅಂತ ಹೋದ ಅನ್ನದಾತನಿಗೆ ಶಾಕೋ ಶಾಕು.

ಇದನ್ನೂ ವೀಕ್ಷಿಸಿ:  Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? 12 ರಾಶಿಗಳ ಫಲ ಯಾವ ರೀತಿ ಫಲ ಇದೆ?

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
Read more