ಬಳ್ಳಾರಿ: ದಶಕಗಳಿಂದ ಉಳಿಮೆ ಮಾಡಿಕೊಂಡು ಬಂದಿದ್ದ ಜಮೀನು ಕೈತಪ್ಪುವ ಆತಂಕ!

ಬಳ್ಳಾರಿ: ದಶಕಗಳಿಂದ ಉಳಿಮೆ ಮಾಡಿಕೊಂಡು ಬಂದಿದ್ದ ಜಮೀನು ಕೈತಪ್ಪುವ ಆತಂಕ!

Published : Dec 06, 2023, 11:24 AM IST

ಇದೇ ಜಮೀನನ ಪ್ರದೇಶದಲ್ಲಿ ಕೆಲವರಿಗೆ ಪಟ್ಟಾ ನೀಡಿದ್ದಾರಂತೆ. ಉಳಿದ 200ಕ್ಕೂ ಹೆಚ್ಚು ದಲಿತ ಕುಟುಂಬಗಳಿಗೂ ಕಂದಾಯ ಭೂಮಿ ಎಂದು ನಮೂದು ಮಾಡಿ ಪಟ್ಟಾ ನೀಡುವಂತೆ ಆಗ್ರಹಿಸುತ್ತಿದ್ದಾರೆ.
 

ಬಳ್ಳಾರಿ(ಡಿ.06):  ಅದು ಸ್ವಾತಂತ್ರ್ಯ ಪೂರ್ವದಿಂದಲೂ ಉಳುಮೆ ಮಾಡಿಕೊಂಡು ಬಂದಿರೋ ಜಮೀನು. ಆದರೆ ಕೆಲ ವರ್ಷಗಳ ಹಿಂದೆ ಸರ್ಕಾರ ಆ ಜಮೀನಿನ ಪಹಣಿಯಲ್ಲಿ ಪದನಾಮವಾಗಿ ಮಲ್ಲಪ್ಪನ ಕೆರೆ ಎಂದು ಬರೆಯಲಾಗಿದೆ. ಇದು ಈ ರೈತರ ನೆಮ್ಮದಿಗೇ ಕೊಳ್ಳಿ ಇಟ್ಟಿದೆ. ದಶಕಗಳಿಂದ ಉಳಿಮೆ ಮಾಡಿಕೊಂಡು ಬಂದಿದ್ದ ಜಮೀನು ಕೈತಪ್ಪುವ ಆತಂಕ ಎದುರಾಗಿದೆ.

ಇಲ್ನೋಡಿ ಹಚ್ಚ ಹಸಿರಿನ ಭೂಮಿ.. ಬಂಗಾರದಂತ ಈ ಬೆಳೆ ನೋಡ್ತಾ ನಿಂತ್ರೆ ರೈತನ ಮೊಗದಲ್ಲಿ ಮಂದಹಾಸ ಮೂಡುತ್ತೆ.. ಆದ್ರೆ, ಚಿನ್ನದ ಬೆಳೆ ಬಂದರೂ ಈ ರೈತರಿಗೆ ಸಂತೋಷವಿ.. ಮನಸ್ಸಿಗೆ ನೆಮ್ಮದಿ ಇಲ್ಲ.. ಯಾಕಂದ್ರೆ ಇದು ಕೆರೆ ಒತ್ತುವರಿ ಮಾಡಿಕೊಂಡ ಜಮೀನು ಅನ್ನೋ ಆರೋಪ ಕೇಳಿ ಬಂದಿದ್ದು, ತಮ್ಮನ್ನ ಒಕ್ಕಲೆಬ್ಬಿಸುವ ಆತಂಕ ಈ ರೈತರನ್ನು ಕಾಡುತ್ತಿದೆ. ಹೀಗಾಗಿ ಜಮೀನು ಉಳಿಸಿಕೊಳ್ಳಲು ಹೋರಾಟಕ್ಕೆ ಇಳಿದಿದ್ದಾರೆ.

ಮಂಡ್ಯ ಡಿಸಿ ಕಚೇರಿ ಎದುರು ರೈತ ಸಂಘಗಳ ಹೈಡ್ರಾಮಾ: ತಾರಕಕ್ಕೇರಿದ ಜಗಳ...!

ಜಮೀನಿಗಾಗಿ ದಶಕಗಳಿಂದಲೂ ಹೋರಾಟ ಮಾಡುತ್ತಿರೋ ದಲಿತ ಕುಟುಂಬಗಳು.. ಯಾರೋ ಮಾಡಿದ ತಪ್ಪಿಗೆ ಮತ್ಯಾನಿರಿಗೋ ಶಿಕ್ಷೆ ಎನ್ನುವಂತಾಗಿದೆ ಕುರಗೋಡು ರೈತರ ಪರಿಸ್ಥಿತಿ.. ಹೀಗೆ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸೋ ಮೂಲಕ ಹೋರಾಟ ಮಾಡುತ್ತಿರೋ ಇವರೆಲ್ಲರೂ ಕುರುಗೋಡು ತಾಲೂಕಿನ ನಿವಾಸಿಗಳು. 

ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಮಲ್ಲಪ್ಪನ ಕೆರೆಯ 246ಎಕರೆ ಪ್ರದೇಶದಲ್ಲಿ 200ಕ್ಕೂ ಹೆಚ್ಚು ರೈತರು 1928ರಿಂದಲೂ ಉಳುಮೆ ಮಾಡಿಕೊಂಡು ಬಂದಿದ್ದಾರೆ. ಈಗಲೂ ಸಹ ಜಮೀನನಲ್ಲಿ ಬೆಳೆಯಿದೆ. ಆದ್ರೆ, ಇಲ್ಲಿ ಮಲ್ಲಪ್ಪನ ಕೆರೆ ಅನ್ನೋ ಹೆಸರಿರೋ ಕಾರಣಕ್ಕೆ  ಇಲ್ಲೊಂದು ಕೆರೆ ಇತ್ತು. ಅದನ್ನು ಒತ್ತುವರಿ ಮಾಡಿಕೊಂಡು ಊಳುಮೆ ಮಾಡುತ್ತಿರೋದಾಗಿ ಅಧಿಕಾರಿಗಳು ಹೆಳ್ತಿದ್ದಾರಂತೆ. ಆದ್ರೆ ಇದು ಕೆರೆ ಜಮೀನಲ್ಲ.. ಮಲ್ಲಪ್ಪನ ಕೆರೆ ಅನ್ನೋ ಹೆಸರಿನ ಕಾರಣಕ್ಕೆ ನಮಗೆ ಸಂಕಷ್ಟ ಎದುರಾಗಿದೆ. ಹೀಗಾಗಿ ಮಲ್ಲಪ್ಪನ ಕೆರೆ ಎನ್ನುವ ಪದನಾಮ ತೆಗೆದು ಕಂದಾಯ ಭೂಮಿ ಎಂದು ನಮೂದು ಮಾಡುವಂತೆ ಒತ್ತಾಯಿಸಿ ಪ್ರತಿಭಟನೆಗೆ ಇಳಿದಿದ್ದಾರೆ. 

ರೇವಂತ್‌ ರೆಡ್ಡಿ ತೆಲಂಗಾಣದ ಹೊಸ ಸಿಎಂ, ಡಿ.7ಕ್ಕೆ ಪ್ರಮಾಣವಚನ!

ಸ್ಥಳೀಯ ಜನಪ್ರತಿನಿಧಿಗಳಿಂದ ಹಿಡಿದು ಜಿಲ್ಲಾಧಿಕಾರಿ ಮತ್ತು ಕಂದಾಯ ಮಂತ್ರಿ ಸೇರಿದಂತೆ ಮುಖ್ಯಮಂತ್ರಿಗಳಿಗೂ ಮನವಿ ಸಲ್ಲಿಸಲಾಗಿದೆ. ಕರುಗೋಡು ತಾಲೂಕಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ಮಾಡೋ ಮೂಲಕ ದಲಿತ ರೈತರನ್ನು ರಕ್ಷಿಸಿ ಎಂದು ಹೋರಾಟ ಮಾಡಿದ್ದಾಯ್ತು. ಇದೀಗ ಅನಿರ್ದಿಷ್ಟಾವಧಿ ಹೋರಾಟಕ್ಕಿಳಿದಿರೋ ರೈತರು ಬೆಳಗಾವಿ ಅಧಿವೇಶನದಲ್ಲಾದ್ರೂ ಮಲ್ಲಪ್ಪನ ಕೆರೆ ಅನ್ನೋ ಹೆಸರನ್ನು ತೆಗೆದು ಇದನ್ನು ಕಂದಾಯ ಭೂಮಿ ಎಂದು ಮಾಡಲು ಆಗ್ರಹಿಸುತ್ತಿದ್ದಾರೆ.

ಇನ್ನು ಇದೇ ಜಮೀನನ ಪ್ರದೇಶದಲ್ಲಿ ಕೆಲವರಿಗೆ ಪಟ್ಟಾ ನೀಡಿದ್ದಾರಂತೆ. ಉಳಿದ 200ಕ್ಕೂ ಹೆಚ್ಚು ದಲಿತ ಕುಟುಂಬಗಳಿಗೂ ಕಂದಾಯ ಭೂಮಿ ಎಂದು ನಮೂದು ಮಾಡಿ ಪಟ್ಟಾ ನೀಡುವಂತೆ ಆಗ್ರಹಿಸುತ್ತಿದ್ದಾರೆ.

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
Read more