ರೈತರು ಉಳುಮೆ ಮಾಡುವ ಜಮೀನು ಸರ್ಕಾರದ ಹೆಸರಿಗೆ:  ಸೌಕರ್ಯ ಸಿಗದೇ ಅನ್ನದಾತರು ಕಂಗಾಲು..!

ರೈತರು ಉಳುಮೆ ಮಾಡುವ ಜಮೀನು ಸರ್ಕಾರದ ಹೆಸರಿಗೆ: ಸೌಕರ್ಯ ಸಿಗದೇ ಅನ್ನದಾತರು ಕಂಗಾಲು..!

Published : Nov 10, 2023, 11:24 AM ISTUpdated : Nov 10, 2023, 11:25 AM IST

ಭೀಕರ ಬರದ ಮಧ್ಯೆ  ತತ್ತರಿಸಿರುವ ರೈತರಿಗೆ ಸರ್ಕಾರ ಮತ್ತೊಂದು ಶಾಕ್ ಕೊಟ್ಟಿದೆ. ತುಂಡು ಭೂಮಿಯನ್ನು ನಂಬಿದ್ದ ರೈತರ ಜಾಗ ಇದೀಗ ಸರ್ಕಾರದ ಜಾಗ ಎಂದು ನಮೂದಾಗಿದೆ.
 

ಶತಮಾನಗಳಿಂದ ಜೀವನಕ್ಕಾಗಿ ತುಂಡು ಭೂಮಿಯನ್ನು ನಂಬಿದ್ದ ಅನ್ನದಾತರಿಗೆ(farmers) ಇದೀಗ ಆತಂಕ ಎದುರಾಗಿದೆ. ಗದಗ(Gadag) ಜಿಲ್ಲೆ ನರಗುಂದ ತಾಲೂಕಿನ ಕುರುಗೋವಿನಕೊಪ್ಪ ಗ್ರಾಮದ 538 ಎಕರೆ ಜಮೀನನ್ನ ರೈತರು ಉಳುಮೆ ಮಾಡ್ತಿದ್ರು.ಈ ಜಮೀನನ್ನೇ ನಂಬಿದ್ದ ರೈತರಿಗೆ ಭೂಮಿಯೂ ಕೈ ತಪ್ಪಿ ಹೋಗುವ ಆತಂಕ ಶುರುವಾಗಿದೆ. ಈ ಜಮೀನಿನ ದಾಖಲೆಗಳಲ್ಲಿ(Land Record) ಹರಿದೀಕ್ಷಿತ್ ಇನಾಮದಾರ್ ಹಾಗೂ ಇತರ ರೈತರ ಹೆಸರು ದಾಖಲಾಗಿತ್ತು. ಆದ್ರೇ ಇದೀಗ ರೈತರ ಹೆಸರಿನ ಬದಲಾಗಿ ಸರ್ಕಾರಿ ಜಾಗ ಅಂತಾ ನಮೂದಾಗಿದೆ.. ಈ ಭೂಮಿಯನ್ನೇ ನಂಬಿದ ರೈತರಿಗೆ ದಿಕ್ಕು ತೋಚದಂತಾಗಿದೆ. ಇನಾಮು ಜಮೀನಿನ ಹಕ್ಕು ಪತ್ರ  ನೀಡುವಂತೆ ಸರ್ಕಾರಕ್ಕೆ ರೈತರು ಪರಿ ಪರಿಯಾಗಿ ಮನವಿ ಮಾಡಿದ್ರೂ ಯಾವುದೇ ಪ್ರಯೋಜನವಾಗಿಲ್ಲ.. 2021 ರೈತರ ಹೋರಾಟಕ್ಕೆ ಮಣಿದ ಸರ್ಕಾರ ಸರ್ವೆ ಮಾಡಲು ಸೂಚನೆ ನೀಡಿತ್ತು.. ಆದ್ರೀಗ ಪಹಣಿಯಿಂದ ರೈತ್ರ ಹೆಸರಿನ ಬದಲಾಗಿ, ಸರ್ಕಾರದ ಹೆಸರು ಬಂದಿದೆ.. ಇದ್ರಿಂದಾಗಿ ರೈತ ವಿಮೆ, ಬೆಳೆ ನಷ್ಟ ಪರಿಹಾರ ಸೇರಿ ರೈತರಿಗೆ ಸಿಗಬೇಕಾದ ಸೌಲಭ್ಯ ಸಿಗ್ತಿಲ್ಲ..ಆದಷ್ಟು ಬೇಗ ಈ ಸಮಸ್ಯೆಯನ್ನ ಸರ್ಕಾರ ಬಗೆಹರಿಸಬೇಕೆಂದು ರೈತರು ಆಗ್ರಹಿಸ್ತಿದ್ದಾರೆ. ಈ ಸಂಬಂಧ ಪಹಣಿಯಲ್ಲಿನ ಹೆಸರನ್ನು ಬದಲಾಯಿಸುವ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಭರವಸೆ ನೀಡಿದ್ದಾರೆ. ಜೀವನೋಪಾಯಕ್ಕೆ ಅಂತಿದ್ದ ತುಂಡು ಜಮೀನು ಈಗ ಸರ್ಕಾರದ ಹೆಸರಿಗೆ ಬದಲಾವಣೆಯಾಗಿದೆ.. ಬರ ಬಿದ್ದಿದ್ದು ಸರ್ಕಾರದಿಂದ ಸಿಗುವ ಯಾವುದೇ ಸೌಲಭ್ಯ ಸಿಗುವ ಭರವಸೆಯೂ ರೈತ್ರಿಗೆ ಉಳಿದಿಲ್ಲ.

ಇದನ್ನೂ ವೀಕ್ಷಿಸಿ:  IMA ಕೇಸ್‌ನಲ್ಲಿ ಹಣ ಕಳೆದುಕೊಂಡಿದ್ದವರಿಗೆ ಗುಡ್ ನ್ಯೂಸ್: 55 ಸಾವಿರ ಹೂಡಿಕೆದಾರರಿಗೆ 68 ಕೋಟಿ ಹಂಚಿಕೆ..!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more