ರೈತರು ಉಳುಮೆ ಮಾಡುವ ಜಮೀನು ಸರ್ಕಾರದ ಹೆಸರಿಗೆ:  ಸೌಕರ್ಯ ಸಿಗದೇ ಅನ್ನದಾತರು ಕಂಗಾಲು..!

ರೈತರು ಉಳುಮೆ ಮಾಡುವ ಜಮೀನು ಸರ್ಕಾರದ ಹೆಸರಿಗೆ: ಸೌಕರ್ಯ ಸಿಗದೇ ಅನ್ನದಾತರು ಕಂಗಾಲು..!

Published : Nov 10, 2023, 11:24 AM ISTUpdated : Nov 10, 2023, 11:25 AM IST

ಭೀಕರ ಬರದ ಮಧ್ಯೆ  ತತ್ತರಿಸಿರುವ ರೈತರಿಗೆ ಸರ್ಕಾರ ಮತ್ತೊಂದು ಶಾಕ್ ಕೊಟ್ಟಿದೆ. ತುಂಡು ಭೂಮಿಯನ್ನು ನಂಬಿದ್ದ ರೈತರ ಜಾಗ ಇದೀಗ ಸರ್ಕಾರದ ಜಾಗ ಎಂದು ನಮೂದಾಗಿದೆ.
 

ಶತಮಾನಗಳಿಂದ ಜೀವನಕ್ಕಾಗಿ ತುಂಡು ಭೂಮಿಯನ್ನು ನಂಬಿದ್ದ ಅನ್ನದಾತರಿಗೆ(farmers) ಇದೀಗ ಆತಂಕ ಎದುರಾಗಿದೆ. ಗದಗ(Gadag) ಜಿಲ್ಲೆ ನರಗುಂದ ತಾಲೂಕಿನ ಕುರುಗೋವಿನಕೊಪ್ಪ ಗ್ರಾಮದ 538 ಎಕರೆ ಜಮೀನನ್ನ ರೈತರು ಉಳುಮೆ ಮಾಡ್ತಿದ್ರು.ಈ ಜಮೀನನ್ನೇ ನಂಬಿದ್ದ ರೈತರಿಗೆ ಭೂಮಿಯೂ ಕೈ ತಪ್ಪಿ ಹೋಗುವ ಆತಂಕ ಶುರುವಾಗಿದೆ. ಈ ಜಮೀನಿನ ದಾಖಲೆಗಳಲ್ಲಿ(Land Record) ಹರಿದೀಕ್ಷಿತ್ ಇನಾಮದಾರ್ ಹಾಗೂ ಇತರ ರೈತರ ಹೆಸರು ದಾಖಲಾಗಿತ್ತು. ಆದ್ರೇ ಇದೀಗ ರೈತರ ಹೆಸರಿನ ಬದಲಾಗಿ ಸರ್ಕಾರಿ ಜಾಗ ಅಂತಾ ನಮೂದಾಗಿದೆ.. ಈ ಭೂಮಿಯನ್ನೇ ನಂಬಿದ ರೈತರಿಗೆ ದಿಕ್ಕು ತೋಚದಂತಾಗಿದೆ. ಇನಾಮು ಜಮೀನಿನ ಹಕ್ಕು ಪತ್ರ  ನೀಡುವಂತೆ ಸರ್ಕಾರಕ್ಕೆ ರೈತರು ಪರಿ ಪರಿಯಾಗಿ ಮನವಿ ಮಾಡಿದ್ರೂ ಯಾವುದೇ ಪ್ರಯೋಜನವಾಗಿಲ್ಲ.. 2021 ರೈತರ ಹೋರಾಟಕ್ಕೆ ಮಣಿದ ಸರ್ಕಾರ ಸರ್ವೆ ಮಾಡಲು ಸೂಚನೆ ನೀಡಿತ್ತು.. ಆದ್ರೀಗ ಪಹಣಿಯಿಂದ ರೈತ್ರ ಹೆಸರಿನ ಬದಲಾಗಿ, ಸರ್ಕಾರದ ಹೆಸರು ಬಂದಿದೆ.. ಇದ್ರಿಂದಾಗಿ ರೈತ ವಿಮೆ, ಬೆಳೆ ನಷ್ಟ ಪರಿಹಾರ ಸೇರಿ ರೈತರಿಗೆ ಸಿಗಬೇಕಾದ ಸೌಲಭ್ಯ ಸಿಗ್ತಿಲ್ಲ..ಆದಷ್ಟು ಬೇಗ ಈ ಸಮಸ್ಯೆಯನ್ನ ಸರ್ಕಾರ ಬಗೆಹರಿಸಬೇಕೆಂದು ರೈತರು ಆಗ್ರಹಿಸ್ತಿದ್ದಾರೆ. ಈ ಸಂಬಂಧ ಪಹಣಿಯಲ್ಲಿನ ಹೆಸರನ್ನು ಬದಲಾಯಿಸುವ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಭರವಸೆ ನೀಡಿದ್ದಾರೆ. ಜೀವನೋಪಾಯಕ್ಕೆ ಅಂತಿದ್ದ ತುಂಡು ಜಮೀನು ಈಗ ಸರ್ಕಾರದ ಹೆಸರಿಗೆ ಬದಲಾವಣೆಯಾಗಿದೆ.. ಬರ ಬಿದ್ದಿದ್ದು ಸರ್ಕಾರದಿಂದ ಸಿಗುವ ಯಾವುದೇ ಸೌಲಭ್ಯ ಸಿಗುವ ಭರವಸೆಯೂ ರೈತ್ರಿಗೆ ಉಳಿದಿಲ್ಲ.

ಇದನ್ನೂ ವೀಕ್ಷಿಸಿ:  IMA ಕೇಸ್‌ನಲ್ಲಿ ಹಣ ಕಳೆದುಕೊಂಡಿದ್ದವರಿಗೆ ಗುಡ್ ನ್ಯೂಸ್: 55 ಸಾವಿರ ಹೂಡಿಕೆದಾರರಿಗೆ 68 ಕೋಟಿ ಹಂಚಿಕೆ..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more