ರೈತರು ಉಳುಮೆ ಮಾಡುವ ಜಮೀನು ಸರ್ಕಾರದ ಹೆಸರಿಗೆ:  ಸೌಕರ್ಯ ಸಿಗದೇ ಅನ್ನದಾತರು ಕಂಗಾಲು..!

ರೈತರು ಉಳುಮೆ ಮಾಡುವ ಜಮೀನು ಸರ್ಕಾರದ ಹೆಸರಿಗೆ: ಸೌಕರ್ಯ ಸಿಗದೇ ಅನ್ನದಾತರು ಕಂಗಾಲು..!

Published : Nov 10, 2023, 11:24 AM ISTUpdated : Nov 10, 2023, 11:25 AM IST

ಭೀಕರ ಬರದ ಮಧ್ಯೆ  ತತ್ತರಿಸಿರುವ ರೈತರಿಗೆ ಸರ್ಕಾರ ಮತ್ತೊಂದು ಶಾಕ್ ಕೊಟ್ಟಿದೆ. ತುಂಡು ಭೂಮಿಯನ್ನು ನಂಬಿದ್ದ ರೈತರ ಜಾಗ ಇದೀಗ ಸರ್ಕಾರದ ಜಾಗ ಎಂದು ನಮೂದಾಗಿದೆ.
 

ಶತಮಾನಗಳಿಂದ ಜೀವನಕ್ಕಾಗಿ ತುಂಡು ಭೂಮಿಯನ್ನು ನಂಬಿದ್ದ ಅನ್ನದಾತರಿಗೆ(farmers) ಇದೀಗ ಆತಂಕ ಎದುರಾಗಿದೆ. ಗದಗ(Gadag) ಜಿಲ್ಲೆ ನರಗುಂದ ತಾಲೂಕಿನ ಕುರುಗೋವಿನಕೊಪ್ಪ ಗ್ರಾಮದ 538 ಎಕರೆ ಜಮೀನನ್ನ ರೈತರು ಉಳುಮೆ ಮಾಡ್ತಿದ್ರು.ಈ ಜಮೀನನ್ನೇ ನಂಬಿದ್ದ ರೈತರಿಗೆ ಭೂಮಿಯೂ ಕೈ ತಪ್ಪಿ ಹೋಗುವ ಆತಂಕ ಶುರುವಾಗಿದೆ. ಈ ಜಮೀನಿನ ದಾಖಲೆಗಳಲ್ಲಿ(Land Record) ಹರಿದೀಕ್ಷಿತ್ ಇನಾಮದಾರ್ ಹಾಗೂ ಇತರ ರೈತರ ಹೆಸರು ದಾಖಲಾಗಿತ್ತು. ಆದ್ರೇ ಇದೀಗ ರೈತರ ಹೆಸರಿನ ಬದಲಾಗಿ ಸರ್ಕಾರಿ ಜಾಗ ಅಂತಾ ನಮೂದಾಗಿದೆ.. ಈ ಭೂಮಿಯನ್ನೇ ನಂಬಿದ ರೈತರಿಗೆ ದಿಕ್ಕು ತೋಚದಂತಾಗಿದೆ. ಇನಾಮು ಜಮೀನಿನ ಹಕ್ಕು ಪತ್ರ  ನೀಡುವಂತೆ ಸರ್ಕಾರಕ್ಕೆ ರೈತರು ಪರಿ ಪರಿಯಾಗಿ ಮನವಿ ಮಾಡಿದ್ರೂ ಯಾವುದೇ ಪ್ರಯೋಜನವಾಗಿಲ್ಲ.. 2021 ರೈತರ ಹೋರಾಟಕ್ಕೆ ಮಣಿದ ಸರ್ಕಾರ ಸರ್ವೆ ಮಾಡಲು ಸೂಚನೆ ನೀಡಿತ್ತು.. ಆದ್ರೀಗ ಪಹಣಿಯಿಂದ ರೈತ್ರ ಹೆಸರಿನ ಬದಲಾಗಿ, ಸರ್ಕಾರದ ಹೆಸರು ಬಂದಿದೆ.. ಇದ್ರಿಂದಾಗಿ ರೈತ ವಿಮೆ, ಬೆಳೆ ನಷ್ಟ ಪರಿಹಾರ ಸೇರಿ ರೈತರಿಗೆ ಸಿಗಬೇಕಾದ ಸೌಲಭ್ಯ ಸಿಗ್ತಿಲ್ಲ..ಆದಷ್ಟು ಬೇಗ ಈ ಸಮಸ್ಯೆಯನ್ನ ಸರ್ಕಾರ ಬಗೆಹರಿಸಬೇಕೆಂದು ರೈತರು ಆಗ್ರಹಿಸ್ತಿದ್ದಾರೆ. ಈ ಸಂಬಂಧ ಪಹಣಿಯಲ್ಲಿನ ಹೆಸರನ್ನು ಬದಲಾಯಿಸುವ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಭರವಸೆ ನೀಡಿದ್ದಾರೆ. ಜೀವನೋಪಾಯಕ್ಕೆ ಅಂತಿದ್ದ ತುಂಡು ಜಮೀನು ಈಗ ಸರ್ಕಾರದ ಹೆಸರಿಗೆ ಬದಲಾವಣೆಯಾಗಿದೆ.. ಬರ ಬಿದ್ದಿದ್ದು ಸರ್ಕಾರದಿಂದ ಸಿಗುವ ಯಾವುದೇ ಸೌಲಭ್ಯ ಸಿಗುವ ಭರವಸೆಯೂ ರೈತ್ರಿಗೆ ಉಳಿದಿಲ್ಲ.

ಇದನ್ನೂ ವೀಕ್ಷಿಸಿ:  IMA ಕೇಸ್‌ನಲ್ಲಿ ಹಣ ಕಳೆದುಕೊಂಡಿದ್ದವರಿಗೆ ಗುಡ್ ನ್ಯೂಸ್: 55 ಸಾವಿರ ಹೂಡಿಕೆದಾರರಿಗೆ 68 ಕೋಟಿ ಹಂಚಿಕೆ..!

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more