2 ಲಕ್ಷದ ಶ್ರೀಗಂಧ ಮರಕ್ಕೆ ಹೈವೆ ಅಧಿಕಾರಿಗಳು ಕೊಡೋದು 1 ಸಾವಿರ: ಸಂಕಷ್ಟದಲ್ಲಿ ಅನ್ನದಾತ

2 ಲಕ್ಷದ ಶ್ರೀಗಂಧ ಮರಕ್ಕೆ ಹೈವೆ ಅಧಿಕಾರಿಗಳು ಕೊಡೋದು 1 ಸಾವಿರ: ಸಂಕಷ್ಟದಲ್ಲಿ ಅನ್ನದಾತ

Published : Mar 24, 2022, 12:29 PM IST

*  ಶ್ರೀಗಂಧ ಬೆಳೆದ ಜಮೀನು ಸ್ವಾಧೀನಪಡಿಸಿಕೊಂಡ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ
*  ರೈತರಿಗೆ ಮಾರುಕಟ್ಟೆ ಬೆಲೆ ನೀಡಲು ಮೀನಾಮೇಷ ಎಣಿಸುತ್ತಿರುವ ಅಧಿಕಾರಿಗಳು
*  ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಹೈಕೋರ್ಟ್ ಆದೇಶವಿದ್ದರೂ ಡೋಂಟ್‌ ಕೇರ್ 
 

ಚಿಕ್ಕಮಗಳೂರು(ಮಾ.24):  ಮೊದಲು ಅಧಿಕಾರಿಗಳು ಬಂದು ಜಾಗ ಬಿಡಿ ಅಂದ್ರು.. ಇಲ್ಲಾ ನಾವು ಶ್ರೀಗಂಧ ಬೆಳೆದಿದ್ದೀವಿ, ಬದುಕೇ ಇಲ್ಲಿ ಕಟ್ಟಿಕೊಂಡಿದ್ದೀವಿ ಹೇಗೆ ಬಿಡೋದು ಅಂತಾ ರೈತರು ಕೇಳಿದ್ರು. ಅಯ್ಯೋ, ಡೋಂಟ್ ವರಿ ಒಳ್ಳೇ ಪರಿಹಾರ ಕೊಡ್ತೀವಿ ಜಾಗ ಬಿಡ್ಬೇಕು ನೋ ದೂಸ್ರಾ ಮಾತು ಅಂತಾ ಆ ಕಡೆಯಿಂದ ರಿಪ್ಲೈ ಬಂತು. ಸರಿ, ಜಾಗ ಬಿಡ್ತೀವಿ ಅಂತಾ ರೈತರು ರೆಡಿಯಾದ್ರು. ಆದರೆ ಇದೀಗ ಕೋರ್ಟ್ ಆದೇಶ ಇದ್ರೂ ಪರಿಹಾರ ನೀಡದೇ ಇರುವ ಅಧಿಕಾರಿಗಳು ಕ್ರಮ ಖಂಡಿಸಿ ರೈತರು ಕುಟುಂಬದೊಂದಿಗೆ 22 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ 

ಸೊಗಸಾಗಿ ಬೆಳೆದಿರೋ ಈ ಶ್ರೀಗಂಧದ ವನವನ್ನ ನೋಡಿದ್ರೆ, ನಾವಿರುವ ತಾಣವೇ ಗಂಧದ ಗುಡಿ.. ಚಂದದ ಗುಡಿ.. ಶ್ರೀಗಂಧದ ಗುಡಿ.. ಅನ್ನೋ ಕನ್ನಡದ ಕಣ್ಮಣಿ ಡಾ.ರಾಜ್ ಸಾಂಗ್ ನೆನಪಾಗದೇ ಇರದು..! ಆದ್ರೆ ಈ ರೈತರಿಗೆ, ತಾವು ಬೆಳೆದ ಶ್ರೀಗಂಧದ ಮರಗಳ ಬಳಿಯೇ ಕುಳಿತುಕೊಂಡು ಸರ್ಕಾರ, ಅಧಿಕಾರಿಗಳ ವಿರುದ್ದ ಪ್ರತಿಭಟನೆ ನಡೆಸುವ ಸ್ಥಿತಿ ಬಂದಿದೆ. ಕೋರ್ಟ್‌ನ ಪರಿಹಾರದ ಆದೇಶ ಇಟ್ಕೊಂಡ್ ತೋರಿಸೋ ಜರೂರತ್ತು ಎದುರಾಗಿದೆ. ದೇವ್ರು ಕೊಟ್ರೂ ಪೂಜಾರಿ ಕೊಡ್ತಿಲಲ್ವಾ ಅನ್ನೋ ಆತಂಕ ಶುರುವಾಗಿದೆ. ಹೌದು, ಅಂದಾಗೆ ಹೀಗೆ ಪ್ರತಿಭಟನೆ ನಡೆಸುತ್ತಿರುವ ರೈತರು ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಹಳಿಯೂರು ಗ್ರಾಮದವರು. ಈ ಗ್ರಾಮದ 22 ಮಂದಿ ರೈತರು 8 ವರ್ಷದಿಂದ ಇಲ್ಲಿ ಭೂಮಿ ತೆಗೆದುಕೊಂಡು ಶ್ರೀಗಂಧ ಬೆಳೆದಿದ್ರು. ಆದ್ರೆ ಇದೀಗ ತರೀಕೆರೆ ಬೈಪಾಸ್ ರಾಷ್ಟ್ರೀಯ ಹೆದ್ದಾರಿಯನ್ನ ನಿರ್ಮಿಸಲು ಇವುಗಳಿಗೆ ಕೊಡಲಿ ಪೆಟ್ಟು ಬೀಳೋ ಸಮಯ ಸನ್ನಿಹಿತವಾಗಿದೆ. ಆರು ವರ್ಷದ ಹಿಂದೆಯೇ ಈ ಜಾಗಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವ್ರು ನೋಟಿಫಿಕೇಶನ್ ಮಾಡಿದ್ದಾರೆ. ಈ ವೇಳೆ ಕೇವಲ ಭೂಮಿಗೆ ಮಾತ್ರ ಅತಿ ಕಡಿಮೆ ಬೆಲೆ ಕಟ್ಟಿ ಪರಿಹಾರ ನೀಡಿದ್ದಾರೆ. ಆದ್ರೆ ಅದೇ ಭೂಮಿಯಲ್ಲಿ ಬೆಳೆದಿದ್ದ ಶ್ರೀಗಂಧದ ಮರಗಳಿಗೆ ಪರಿಹಾರದ ಹಣ ನೀಡಲು ಪ್ರಾಧಿಕಾರ ಮೀನಾಮೇಷ ಎಣಿಸುತ್ತಿದ್ದು, ರೈತರ ಆಕ್ರೋಶಕ್ಕೆ ಕಾರಣವಾಗಿದೆ. 

ಗೋಮಾಂಸ ಸಾಗಣೆ: ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು

ಮೊದಲು ಶ್ರೀಗಂಧದ ಬೆಳೆಗೆ ಬೆಲೆ ಫಿಕ್ಸ್ ಮಾಡಲು ಹಾವು ಏಣಿ ಆಟವನ್ನ ಪ್ರಾಧಿಕಾರ ಮಾಡ್ತು. ಸರ್ಕಾರಿ, ಖಾಸಗಿ ಏಜೆನ್ಸಿ ಅಂತಾ ವರ್ಷಗಟ್ಟಲ್ಲೇ ಸಮಯ ದೂಡುತ್ತಲೇ ಬಂತು. ಕೊನೆಗೆ ಶ್ರೀಗಂಧ ಮರದ 30 ವರ್ಷದ ಜೀವಿತಾವಧಿಯನ್ನ ಗಮನದಲ್ಲಿಟ್ಟುಕೊಂಡು ಒಂದು ಮರಕ್ಕೆ 2 ಲಕ್ಷದ 44 ಸಾವಿರ ರೂಪಾಯಿಯನ್ನ ನೀಡುವಂತೆ ಹೈಕೋರ್ಟ್ ಸೂಚಿಸಿದೆ. ಆದರೂ ಅರಣ್ಯ ಇಲಾಖೆ ದಿನಕ್ಕೊಂದು ವರದಿ ತಯಾರಿಸುತ್ತಾ ಶ್ರೀಗಂಧ ಬೆಳೆದ ರೈತರಿಗೆ ಯಾಮಾರಿಸುತ್ತಲೇ ಬರುತ್ತಿದೆ. ಹತ್ತು ವರ್ಷದ ಒಂದು ಮರಕ್ಕೆ ಕೇವಲ 1176 ರೂಪಾಯಿ ನೀಡುವುದಾಗಿ ಹೇಳಿದೆ. ಎಲ್ಲಿಯ 2 ಲಕ್ಷ, ಎಲ್ಲಿಯ 1 ಸಾವಿರ..? ಇವ್ರು ಕೊಡುವ ಪರಿಹಾರ ವಿಷವನ್ನ ಖರೀದಿ ಮಾಡಲು ಕೂಡ ಸಾಕಾಗುವುದಿಲ್ಲ ಅಂತಾ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಯಾಲಯ ಆದೇಶ ಮಾಡಿದ್ರೂ ರೈತರನ್ನ ಸತಾಯಿಸುತ್ತಿರೋ ಅಧಿಕಾರಿಗಳ ನಡೆ ಪ್ರಶ್ನಿಸಿ ರೈತರು ಕುಟುಂಬ ಸದಸ್ಯರೊಂದಿಗೆ ಕಳೆದ 22 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. 

ಒಟ್ಟಾರೆ ದೇವ್ರು ಕೊಟ್ರೂ ಪೂಜಾರಿ ಕೊಡದ ಪರಿಸ್ಥಿತಿ ಈ ರೈತರದ್ದಾಗಿದ್ದು ಇದರಿಂದ ನ್ಯಾಯಾಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೂ ರೈತರ ಸಮಸ್ಯೆ ಕೇಳಲು ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಮುಂದೆ ಬಾರದೇ ಇರುವುದು ವಿಷರ್ಯಾಸವೇ ಸರಿ. ಇನ್ನಾದ್ರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಮುಖಹಾಕಬೇಕಾಗಿದೆ.
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more