ಮಂಡ್ಯ ಡಿಸಿ ಕಚೇರಿ ಎದುರು ರೈತ ಸಂಘಗಳ ಹೈಡ್ರಾಮಾ: ತಾರಕಕ್ಕೇರಿದ ಜಗಳ...!

ಮಂಡ್ಯ ಡಿಸಿ ಕಚೇರಿ ಎದುರು ರೈತ ಸಂಘಗಳ ಹೈಡ್ರಾಮಾ: ತಾರಕಕ್ಕೇರಿದ ಜಗಳ...!

Published : Dec 06, 2023, 10:37 AM IST

ರೈತರ ಸಮಸ್ಯೆಗಳನ್ನು ಹೊತ್ತು ಡಿಸಿ ಭೇಟಿಗೆ ತೆರಳಿದ್ದ ರೈತ ಸಂಘದ 2 ಬಣಗಳು ತಮ್ಮ ಮೂಲ ಉದ್ದೇಶ ಮರೆತು ಕಿತ್ತಾಡಿಕೊಂಡಿದ್ದು ಮುಜುಗರ ಉಂಟುಮಾಡಿದೆ.

ಮಂಡ್ಯ(ಡಿ.06):  ಮಂಡ್ಯದ ಡಿಸಿ ಕಚೇರಿ ಆವರಣದಲ್ಲಿ ದೊಡ್ಡ ಹೈಡ್ರಾಮಾ ನಡೆದಿದೆ. ರಾಜ್ಯ ರೈತ ಸಂಘದ ಎರಡು ಬಣಗಳ ನಡುವೆ ಗಲಾಟೆ ನಡೆದಿದ್ದು, ದೂರು ಪ್ರತಿದೂರು ದಾಖಲಾಗಿದೆ. ಮಂಡ್ಯ ಡಿಸಿ ಆಫೀಸ್ ಆವರಣ ರಣರಂಗವಾಗಿತ್ತು. ಒಗ್ಗಟ್ಟಿನಿಂದ ಹೋರಾಡಬೇಕಿದ್ದ ರೈತ ಸಂಘಟನೆಗಳೇ ಪರಸ್ಪರ ಕಿತ್ತಾಡಿಕೊಂಡಿದ್ರು. ಡಿಸಿಗೆ ಮನವಿ ಸಲ್ಲಿಸಲು ಬಂದಿದ್ದ ವೇಳೆ 2 ಬಣಗಳ ರೈತ ಮುಖಂಡರು ಜಗಳ ಶುರು ಮಾಡಿದ್ರು. 

ಸಾಲ ವಸೂಲಿ ವೇಳೆ ಬ್ಯಾಂಕ್ ರೈತರಿಗೆ ಕಿರುಕುಳ ನೀಡ್ತಿದೆ ಅಂತ ರೈತ ಸಂಘಗಳು ಆಕ್ರೋಶ ವ್ಯಕ್ತಪಡಿಸ್ತಿವೆ. ಬ್ಯಾಂಕ್ಗಳ ನಡೆ ವಿರೋಧಿಸಿ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಬ್ಯಾಂಕ್ ಆಫ್ ಬರೋಡಾ ಎದುರು ಪ್ರತಿಭಟಿಸಿದ್ರು. ಬಳಿಕ ಡಿಸಿಗೆ ಮನವಿ ಸಲ್ಲಿಸಲು ತೆರಳಿದ್ರು. ಅದೇ ಸಮಯಕ್ಕೆ ರೈತ ಬಣದ ಅಧ್ಯಕ್ಷ ಇಂಗಲಕುಪ್ಪೆ ಕೃಷ್ಣ ಮುಖಾಮುಖಿಯಾದ್ರು. ಮೊದಲಿಂದಲೂ ರೈತ ಸಂಘ ವಿರೋಧಿಸಿ, ಅಸಮಾಧಾನಕ್ಕೆ ಗುರಿಯಾಗಿದ್ದ ಕೃಷ್ಣ ಬಣ ನೋಡ್ತಿದ್ದಂತೆ, ಉನ್ನೊಂದು ಬಣದ ಕಾರ್ಯಕರ್ತರು ಸಿಡಿಮಿಡಿಗೊಂಡರು. ಬಡಗಲಪುರ ನಾಗೇಂದ್ರ ಮೇಲೆ ಕೃಷ್ಣ ಬೆಂಬಲಿಗರು ಹಲ್ಲೆ ನಡೆಸಿ, ಕಾರು ಹತ್ತಿಸಲು ಪ್ರಯತ್ನಿಸಿದ್ರು. 

ಭಾರತ್ ಜೋಡೋ ಮಾಡಿದ ಕಾಂಗ್ರೆಸ್‌ನಿಂದಲೇ ಇದೀಗ ಉತ್ತರ-ದಕ್ಷಿಣ ವಿಭಜನೆ ಕಿಡಿ!

ಕೂಡಲೇ ಬಡಗಲಪುರ ನಾಗೇಂದ್ರ ಪರ ಕಾರ್ಯಕರ್ತರು ಕೃಷ್ಣರನ್ನು ಬಂಧಿಸಬೇಕು ಅಂತ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ರು. ಕೃಷ್ಣ ರೈತ ಸಂಘದ ಹೆಸರಿನಲ್ಲಿ ಸಾಕಷ್ಟು ಅಕ್ರಮ ಎಸಗಿದ್ದಾರೆ. ಕಾರಿಗೆ ಅಕ್ರಮವಾಗಿ ನಾಮಫಲಕ ಹಾಗೂ ಹಸಿರು ದೀಪ ಹಾಕಿಕೊಂಡಿದ್ದು ಕಾರನ್ನು ವಶಕ್ಕೆ ಪಡೆಯಬೇಕು ಅಂತ ಒತ್ತಾಯಿಸಿದರು. ಕೃಷ್ಣ ನಮ್ಮ ಮೇಲೆ ಬೇಕಂತಲೇ ದೂರು ನೀಡಿದ್ದಾರೆ, ನನ್ನ ಕೊಲೆಗೆ ಯತ್ನಿಸಿದ್ದಾರೆ ಅಂತ ಬಡಗಲಪುರ ನಾಗೇಂದ್ರ ಆಕ್ರೋಶ ಹೊರಹಾಕಿದ್ದಾರೆ. 

ರಸ್ತೆ ದುರಸ್ತಿ ಸಂಬಂಧ ಜಿಲ್ಲಾಧಿಕಾರಿಗೆ ಮನವಿ ನೀಡಲು ಹೋಗಿದ್ವಿ. ಆಗ ನಾಗೇಂದ್ರ ಬೆಂಬಲಿಗರು ಇಲ್ಲಸಲ್ಲದ ಹೇಳಿಕೆ ನೀಡುತ್ತೀಯ ಅಂತ ನನ್ನ ಬೆದರಿಸಿದ್ರು. ನನ್ನ ಕಾರನ್ನು ತಡೆದು ಹಲ್ಲೆಗೆ ಯತ್ನಿಸಿದರು ಅಂತ ಕೃಷ್ಣ ಕಿಡಿಕಾರಿದ್ದಾರೆ.  ರೈತರ ಸಮಸ್ಯೆಗಳನ್ನು ಹೊತ್ತು ಡಿಸಿ ಭೇಟಿಗೆ ತೆರಳಿದ್ದ ರೈತ ಸಂಘದ 2 ಬಣಗಳು ತಮ್ಮ ಮೂಲ ಉದ್ದೇಶ ಮರೆತು ಕಿತ್ತಾಡಿಕೊಂಡಿದ್ದು ಮುಜುಗರ ಉಂಟುಮಾಡಿದೆ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more