ಮಂಡ್ಯ ಡಿಸಿ ಕಚೇರಿ ಎದುರು ರೈತ ಸಂಘಗಳ ಹೈಡ್ರಾಮಾ: ತಾರಕಕ್ಕೇರಿದ ಜಗಳ...!

ಮಂಡ್ಯ ಡಿಸಿ ಕಚೇರಿ ಎದುರು ರೈತ ಸಂಘಗಳ ಹೈಡ್ರಾಮಾ: ತಾರಕಕ್ಕೇರಿದ ಜಗಳ...!

Published : Dec 06, 2023, 10:37 AM IST

ರೈತರ ಸಮಸ್ಯೆಗಳನ್ನು ಹೊತ್ತು ಡಿಸಿ ಭೇಟಿಗೆ ತೆರಳಿದ್ದ ರೈತ ಸಂಘದ 2 ಬಣಗಳು ತಮ್ಮ ಮೂಲ ಉದ್ದೇಶ ಮರೆತು ಕಿತ್ತಾಡಿಕೊಂಡಿದ್ದು ಮುಜುಗರ ಉಂಟುಮಾಡಿದೆ.

ಮಂಡ್ಯ(ಡಿ.06):  ಮಂಡ್ಯದ ಡಿಸಿ ಕಚೇರಿ ಆವರಣದಲ್ಲಿ ದೊಡ್ಡ ಹೈಡ್ರಾಮಾ ನಡೆದಿದೆ. ರಾಜ್ಯ ರೈತ ಸಂಘದ ಎರಡು ಬಣಗಳ ನಡುವೆ ಗಲಾಟೆ ನಡೆದಿದ್ದು, ದೂರು ಪ್ರತಿದೂರು ದಾಖಲಾಗಿದೆ. ಮಂಡ್ಯ ಡಿಸಿ ಆಫೀಸ್ ಆವರಣ ರಣರಂಗವಾಗಿತ್ತು. ಒಗ್ಗಟ್ಟಿನಿಂದ ಹೋರಾಡಬೇಕಿದ್ದ ರೈತ ಸಂಘಟನೆಗಳೇ ಪರಸ್ಪರ ಕಿತ್ತಾಡಿಕೊಂಡಿದ್ರು. ಡಿಸಿಗೆ ಮನವಿ ಸಲ್ಲಿಸಲು ಬಂದಿದ್ದ ವೇಳೆ 2 ಬಣಗಳ ರೈತ ಮುಖಂಡರು ಜಗಳ ಶುರು ಮಾಡಿದ್ರು. 

ಸಾಲ ವಸೂಲಿ ವೇಳೆ ಬ್ಯಾಂಕ್ ರೈತರಿಗೆ ಕಿರುಕುಳ ನೀಡ್ತಿದೆ ಅಂತ ರೈತ ಸಂಘಗಳು ಆಕ್ರೋಶ ವ್ಯಕ್ತಪಡಿಸ್ತಿವೆ. ಬ್ಯಾಂಕ್ಗಳ ನಡೆ ವಿರೋಧಿಸಿ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಬ್ಯಾಂಕ್ ಆಫ್ ಬರೋಡಾ ಎದುರು ಪ್ರತಿಭಟಿಸಿದ್ರು. ಬಳಿಕ ಡಿಸಿಗೆ ಮನವಿ ಸಲ್ಲಿಸಲು ತೆರಳಿದ್ರು. ಅದೇ ಸಮಯಕ್ಕೆ ರೈತ ಬಣದ ಅಧ್ಯಕ್ಷ ಇಂಗಲಕುಪ್ಪೆ ಕೃಷ್ಣ ಮುಖಾಮುಖಿಯಾದ್ರು. ಮೊದಲಿಂದಲೂ ರೈತ ಸಂಘ ವಿರೋಧಿಸಿ, ಅಸಮಾಧಾನಕ್ಕೆ ಗುರಿಯಾಗಿದ್ದ ಕೃಷ್ಣ ಬಣ ನೋಡ್ತಿದ್ದಂತೆ, ಉನ್ನೊಂದು ಬಣದ ಕಾರ್ಯಕರ್ತರು ಸಿಡಿಮಿಡಿಗೊಂಡರು. ಬಡಗಲಪುರ ನಾಗೇಂದ್ರ ಮೇಲೆ ಕೃಷ್ಣ ಬೆಂಬಲಿಗರು ಹಲ್ಲೆ ನಡೆಸಿ, ಕಾರು ಹತ್ತಿಸಲು ಪ್ರಯತ್ನಿಸಿದ್ರು. 

ಭಾರತ್ ಜೋಡೋ ಮಾಡಿದ ಕಾಂಗ್ರೆಸ್‌ನಿಂದಲೇ ಇದೀಗ ಉತ್ತರ-ದಕ್ಷಿಣ ವಿಭಜನೆ ಕಿಡಿ!

ಕೂಡಲೇ ಬಡಗಲಪುರ ನಾಗೇಂದ್ರ ಪರ ಕಾರ್ಯಕರ್ತರು ಕೃಷ್ಣರನ್ನು ಬಂಧಿಸಬೇಕು ಅಂತ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ರು. ಕೃಷ್ಣ ರೈತ ಸಂಘದ ಹೆಸರಿನಲ್ಲಿ ಸಾಕಷ್ಟು ಅಕ್ರಮ ಎಸಗಿದ್ದಾರೆ. ಕಾರಿಗೆ ಅಕ್ರಮವಾಗಿ ನಾಮಫಲಕ ಹಾಗೂ ಹಸಿರು ದೀಪ ಹಾಕಿಕೊಂಡಿದ್ದು ಕಾರನ್ನು ವಶಕ್ಕೆ ಪಡೆಯಬೇಕು ಅಂತ ಒತ್ತಾಯಿಸಿದರು. ಕೃಷ್ಣ ನಮ್ಮ ಮೇಲೆ ಬೇಕಂತಲೇ ದೂರು ನೀಡಿದ್ದಾರೆ, ನನ್ನ ಕೊಲೆಗೆ ಯತ್ನಿಸಿದ್ದಾರೆ ಅಂತ ಬಡಗಲಪುರ ನಾಗೇಂದ್ರ ಆಕ್ರೋಶ ಹೊರಹಾಕಿದ್ದಾರೆ. 

ರಸ್ತೆ ದುರಸ್ತಿ ಸಂಬಂಧ ಜಿಲ್ಲಾಧಿಕಾರಿಗೆ ಮನವಿ ನೀಡಲು ಹೋಗಿದ್ವಿ. ಆಗ ನಾಗೇಂದ್ರ ಬೆಂಬಲಿಗರು ಇಲ್ಲಸಲ್ಲದ ಹೇಳಿಕೆ ನೀಡುತ್ತೀಯ ಅಂತ ನನ್ನ ಬೆದರಿಸಿದ್ರು. ನನ್ನ ಕಾರನ್ನು ತಡೆದು ಹಲ್ಲೆಗೆ ಯತ್ನಿಸಿದರು ಅಂತ ಕೃಷ್ಣ ಕಿಡಿಕಾರಿದ್ದಾರೆ.  ರೈತರ ಸಮಸ್ಯೆಗಳನ್ನು ಹೊತ್ತು ಡಿಸಿ ಭೇಟಿಗೆ ತೆರಳಿದ್ದ ರೈತ ಸಂಘದ 2 ಬಣಗಳು ತಮ್ಮ ಮೂಲ ಉದ್ದೇಶ ಮರೆತು ಕಿತ್ತಾಡಿಕೊಂಡಿದ್ದು ಮುಜುಗರ ಉಂಟುಮಾಡಿದೆ.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more