ಮಂಡ್ಯ ಡಿಸಿ ಕಚೇರಿ ಎದುರು ರೈತ ಸಂಘಗಳ ಹೈಡ್ರಾಮಾ: ತಾರಕಕ್ಕೇರಿದ ಜಗಳ...!

ಮಂಡ್ಯ ಡಿಸಿ ಕಚೇರಿ ಎದುರು ರೈತ ಸಂಘಗಳ ಹೈಡ್ರಾಮಾ: ತಾರಕಕ್ಕೇರಿದ ಜಗಳ...!

Published : Dec 06, 2023, 10:37 AM IST

ರೈತರ ಸಮಸ್ಯೆಗಳನ್ನು ಹೊತ್ತು ಡಿಸಿ ಭೇಟಿಗೆ ತೆರಳಿದ್ದ ರೈತ ಸಂಘದ 2 ಬಣಗಳು ತಮ್ಮ ಮೂಲ ಉದ್ದೇಶ ಮರೆತು ಕಿತ್ತಾಡಿಕೊಂಡಿದ್ದು ಮುಜುಗರ ಉಂಟುಮಾಡಿದೆ.

ಮಂಡ್ಯ(ಡಿ.06):  ಮಂಡ್ಯದ ಡಿಸಿ ಕಚೇರಿ ಆವರಣದಲ್ಲಿ ದೊಡ್ಡ ಹೈಡ್ರಾಮಾ ನಡೆದಿದೆ. ರಾಜ್ಯ ರೈತ ಸಂಘದ ಎರಡು ಬಣಗಳ ನಡುವೆ ಗಲಾಟೆ ನಡೆದಿದ್ದು, ದೂರು ಪ್ರತಿದೂರು ದಾಖಲಾಗಿದೆ. ಮಂಡ್ಯ ಡಿಸಿ ಆಫೀಸ್ ಆವರಣ ರಣರಂಗವಾಗಿತ್ತು. ಒಗ್ಗಟ್ಟಿನಿಂದ ಹೋರಾಡಬೇಕಿದ್ದ ರೈತ ಸಂಘಟನೆಗಳೇ ಪರಸ್ಪರ ಕಿತ್ತಾಡಿಕೊಂಡಿದ್ರು. ಡಿಸಿಗೆ ಮನವಿ ಸಲ್ಲಿಸಲು ಬಂದಿದ್ದ ವೇಳೆ 2 ಬಣಗಳ ರೈತ ಮುಖಂಡರು ಜಗಳ ಶುರು ಮಾಡಿದ್ರು. 

ಸಾಲ ವಸೂಲಿ ವೇಳೆ ಬ್ಯಾಂಕ್ ರೈತರಿಗೆ ಕಿರುಕುಳ ನೀಡ್ತಿದೆ ಅಂತ ರೈತ ಸಂಘಗಳು ಆಕ್ರೋಶ ವ್ಯಕ್ತಪಡಿಸ್ತಿವೆ. ಬ್ಯಾಂಕ್ಗಳ ನಡೆ ವಿರೋಧಿಸಿ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಬ್ಯಾಂಕ್ ಆಫ್ ಬರೋಡಾ ಎದುರು ಪ್ರತಿಭಟಿಸಿದ್ರು. ಬಳಿಕ ಡಿಸಿಗೆ ಮನವಿ ಸಲ್ಲಿಸಲು ತೆರಳಿದ್ರು. ಅದೇ ಸಮಯಕ್ಕೆ ರೈತ ಬಣದ ಅಧ್ಯಕ್ಷ ಇಂಗಲಕುಪ್ಪೆ ಕೃಷ್ಣ ಮುಖಾಮುಖಿಯಾದ್ರು. ಮೊದಲಿಂದಲೂ ರೈತ ಸಂಘ ವಿರೋಧಿಸಿ, ಅಸಮಾಧಾನಕ್ಕೆ ಗುರಿಯಾಗಿದ್ದ ಕೃಷ್ಣ ಬಣ ನೋಡ್ತಿದ್ದಂತೆ, ಉನ್ನೊಂದು ಬಣದ ಕಾರ್ಯಕರ್ತರು ಸಿಡಿಮಿಡಿಗೊಂಡರು. ಬಡಗಲಪುರ ನಾಗೇಂದ್ರ ಮೇಲೆ ಕೃಷ್ಣ ಬೆಂಬಲಿಗರು ಹಲ್ಲೆ ನಡೆಸಿ, ಕಾರು ಹತ್ತಿಸಲು ಪ್ರಯತ್ನಿಸಿದ್ರು. 

ಭಾರತ್ ಜೋಡೋ ಮಾಡಿದ ಕಾಂಗ್ರೆಸ್‌ನಿಂದಲೇ ಇದೀಗ ಉತ್ತರ-ದಕ್ಷಿಣ ವಿಭಜನೆ ಕಿಡಿ!

ಕೂಡಲೇ ಬಡಗಲಪುರ ನಾಗೇಂದ್ರ ಪರ ಕಾರ್ಯಕರ್ತರು ಕೃಷ್ಣರನ್ನು ಬಂಧಿಸಬೇಕು ಅಂತ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ರು. ಕೃಷ್ಣ ರೈತ ಸಂಘದ ಹೆಸರಿನಲ್ಲಿ ಸಾಕಷ್ಟು ಅಕ್ರಮ ಎಸಗಿದ್ದಾರೆ. ಕಾರಿಗೆ ಅಕ್ರಮವಾಗಿ ನಾಮಫಲಕ ಹಾಗೂ ಹಸಿರು ದೀಪ ಹಾಕಿಕೊಂಡಿದ್ದು ಕಾರನ್ನು ವಶಕ್ಕೆ ಪಡೆಯಬೇಕು ಅಂತ ಒತ್ತಾಯಿಸಿದರು. ಕೃಷ್ಣ ನಮ್ಮ ಮೇಲೆ ಬೇಕಂತಲೇ ದೂರು ನೀಡಿದ್ದಾರೆ, ನನ್ನ ಕೊಲೆಗೆ ಯತ್ನಿಸಿದ್ದಾರೆ ಅಂತ ಬಡಗಲಪುರ ನಾಗೇಂದ್ರ ಆಕ್ರೋಶ ಹೊರಹಾಕಿದ್ದಾರೆ. 

ರಸ್ತೆ ದುರಸ್ತಿ ಸಂಬಂಧ ಜಿಲ್ಲಾಧಿಕಾರಿಗೆ ಮನವಿ ನೀಡಲು ಹೋಗಿದ್ವಿ. ಆಗ ನಾಗೇಂದ್ರ ಬೆಂಬಲಿಗರು ಇಲ್ಲಸಲ್ಲದ ಹೇಳಿಕೆ ನೀಡುತ್ತೀಯ ಅಂತ ನನ್ನ ಬೆದರಿಸಿದ್ರು. ನನ್ನ ಕಾರನ್ನು ತಡೆದು ಹಲ್ಲೆಗೆ ಯತ್ನಿಸಿದರು ಅಂತ ಕೃಷ್ಣ ಕಿಡಿಕಾರಿದ್ದಾರೆ.  ರೈತರ ಸಮಸ್ಯೆಗಳನ್ನು ಹೊತ್ತು ಡಿಸಿ ಭೇಟಿಗೆ ತೆರಳಿದ್ದ ರೈತ ಸಂಘದ 2 ಬಣಗಳು ತಮ್ಮ ಮೂಲ ಉದ್ದೇಶ ಮರೆತು ಕಿತ್ತಾಡಿಕೊಂಡಿದ್ದು ಮುಜುಗರ ಉಂಟುಮಾಡಿದೆ.
 

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
Read more