ಬೆಳಗಾವಿ: ಗಂಡು ಚಿರತೆ ಸರೆಗೆ ಬೋನುಗಳಿಗೆ ಹೆಣ್ಣು ಚಿರತೆ ಯೂರಿನ್‌ ಸ್ಪ್ರೇ

ಬೆಳಗಾವಿ: ಗಂಡು ಚಿರತೆ ಸರೆಗೆ ಬೋನುಗಳಿಗೆ ಹೆಣ್ಣು ಚಿರತೆ ಯೂರಿನ್‌ ಸ್ಪ್ರೇ

Published : Aug 26, 2022, 06:22 PM IST

ಬೆಳಗಾವಿಯಲ್ಲಿ ಚಿರತೆ ಹಿಡಿಯಲು ಕೈಗೊಂಡ ಹಲವು ಪ್ರಯತ್ನಗಳು ವಿಫಲವಾದ ಹಿನ್ನೆಲೆಯಲ್ಲಿ ಈಗ ಚಿರತೆ ಬೋನಿಗೆ ಹೆಣ್ಣು ಚಿರತೆಯ ಮೂತ್ರವನ್ನು ಸಿಂಪಡಿಸಲಾಗಿದೆ.


ಬೆಳಗಾವಿ: ಕಳೆದ 21 ದಿನಗಳಿಂದ ಕುಂದಾನಗರಿ ಬೆಳಗಾವಿ ಜನರ ನಿದ್ದೆಗೆಡಿಸಿರುವ ಚಿರತೆ ಮೊನ್ನೆ ರಾತ್ರಿ ಟ್ರ್ಯಾಪ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳೆದ 21 ದಿನಗಳಿಂದ ಬೆಳಗಾವಿ ಜನರ ನಿದ್ದೆಗೆಡಿಸಿರುವ ಈ ಚಿರತೆ ಅರಣ್ಯ ಇಲಾಖೆ ಅಧಿಕಾರಿಗಳೆದುರೇ ಬೆಳಗಾವಿ ಹಿಂಡಲಗಾ ಮಧ್ಯೆ ಇರುವ ಕ್ಲಬ್ ರಸ್ತೆಯಿಂದ ಗಾಲ್ಫ್ ಮೈದಾನಕ್ಕೆ ನುಗ್ಗಿತ್ತು‌. ನಿನ್ನೆ ರಾತ್ರಿ ಗಾಲ್ಫ್‌ ಮೈದಾನದಲ್ಲಿ ಅಳವಡಿಸಿದ್ದ ಟ್ರ್ಯಾಪ್ ಕ್ಯಾಮರಾದಲ್ಲಿ ಇದು ಕಾಣಿಸಿಕೊಂಡಿದೆ. ಚಿರತೆ ಪೋಟೋ ಆಧರಿಸಿ ಅದೇ ಭಾಗದಲ್ಲಿ ಇಂದು ಕಾರ್ಯಾಚರಣೆ ಆರಂಭಿಸಲಾಯಿತು. ಇದಕ್ಕೂ ‌ಮುನ್ನ ಗಾಲ್ಪ್ ಮೈದಾನದ ಸುತ್ತ ಬೆಳೆದ ಗಿಡಗಂಟಿಗಳನ್ನು ಐದು ಜೆಸಿಬಿಗಳ ಸಹಾಯದಿಂದ ತೆರವು ಮಾಡಲಾಯಿತು. ಇದಲ್ಲದೇ ಹಂದಿ ಹಿಡಿಯುವವರು ಹಾಗೂ ಆನೆಗಳನ್ನು ಕೂಡ ಈ ಚಿರತೆಯನ್ನು ಸೆರೆ ಹಿಡಿಯಲು ಕರೆಸಲಾಗಿತ್ತು. ಆದರೆ ಯಾವುದು ಫಲ ನೀಡದ ಹಿನ್ನೆಲೆಯಲ್ಲಿ ಬೋನಿಗೆ ಹೆಣ್ಣು ಚಿರತೆಯ ಮೂತ್ರವನ್ನು ಸಿಂಪಡಿಸಲು ನಿರ್ಧರಿಸಲಾಗಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more