Shivamogga: ದೇವಸ್ಥಾನ ಉಳಿಸಲು ಹೋರಾಡಿದ ನಾಗರ ಹಾವು ಕೊಂದವರ ವಿರುದ್ಧ FIR

Shivamogga: ದೇವಸ್ಥಾನ ಉಳಿಸಲು ಹೋರಾಡಿದ ನಾಗರ ಹಾವು ಕೊಂದವರ ವಿರುದ್ಧ FIR

Suvarna News   | Asianet News
Published : Dec 11, 2021, 01:40 PM ISTUpdated : Dec 11, 2021, 02:14 PM IST

ಶಿವಮೊಗ್ಗ (Shivamogga) ಎಪಿಎಂಸಿ ರಸ್ತೆಯಲ್ಲಿ 40 ವರ್ಷ ಇತಿಹಾಸ (History) ಹೊಂದಿರುವ ಪುರಾತನ ಆಂಜನೇಯ ಸ್ವಾಮಿ  ದೇಗುಲವೊಂದಿತ್ತು. ಶಿವಮೊಗ್ಗ ಸ್ಮಾರ್ಟ್ ಸಿಟಿ (Smart City) ರಸ್ತೆ ಅಗಲೀಕರಣ ನೆಪದಲ್ಲಿ ಈ ದೇಗುಲ ತೆರವುಗೊಳಿಸಲು ಸ್ಥಳೀಯ ಆಡಳಿತ ಮುಂದಾಗಿದೆ. 

ಶಿವಮೊಗ್ಗ (ಡಿ. 11):  ಎಪಿಎಂಸಿ (APMC) ರಸ್ತೆಯಲ್ಲಿ 40 ವರ್ಷ ಇತಿಹಾಸ (History) ಹೊಂದಿರುವ ಪುರಾತನ ಆಂಜನೇಯ ಸ್ವಾಮಿ  ದೇಗುಲವೊಂದಿತ್ತು. ಶಿವಮೊಗ್ಗ ಸ್ಮಾರ್ಟ್ ಸಿಟಿ (Smart City)ರಸ್ತೆ ಅಗಲೀಕರಣ ನೆಪದಲ್ಲಿ ಈ ದೇಗುಲ ತೆರವುಗೊಳಿಸಲು ಸ್ಥಳೀಯ ಆಡಳಿತ ಮುಂದಾಗಿದೆ.

ಜೆಸಿಬಿಯಿಂದ ದೇಗುಲ ತೆರವುಗೊಳಿಸಲು ಮುಂದಾದಾಗ ಅಚ್ಚರಿ ಎಂಬಂತೆ, ನಾಗರಹಾವೊಂದು ಅಲ್ಲಿ ಪ್ರತ್ಯಕ್ಷವಾಗಿದೆ. ಜೆಸಿಬಿ ಕೆಲಸ ಮಾಡುವಾಗ ಇದಕ್ಕೆ ಸಮ್ಮತವಿಲ್ಲ ಎಂದು ವಿರೋಧ ವ್ಯಕ್ತಪಡಿಸಿದೆ. ಆದರೆ ಸಂಬಂಧಪಟ್ಟವರು ಇದನ್ನು ಗಂಭೀರವಾಗಿ ತೆಗೆದುಕೊಳ್ಳದೇ ತಮ್ಮ ಕೆಲಸ ಮುಂದುವರೆಸಿದ್ದಾರೆ. ಹೀಗೆ ಕೆಲಸ ಮಾಡುತ್ತಿರುವಾಗ, ನಾಗರಹಾವು ಜೆಸಿಬಿಗೆ ಸಿಲುಕಿ ಸಾವನ್ನಪ್ಪಿತ್ತು. ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳೀಯರು, ಭಜರಂಗದಳ, ವಿಶ್ವ ಹಿಂದೂ ಪರಿಷತ್‌ ದವರು  ಸ್ಥಳೀಯ ಆಡಳಿತದ ವಿರುದ್ಧ, ಕೆಲಸ ಮಾಡಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವಿಸ್ತೃತವಾದ ವರದಿ ಪ್ರಸಾರ ಮಾಡಿತ್ತು. 

ಶಿವಮೊಗ್ಗ ಸ್ಮಾರ್ಟ್‌ಸಿಟಿ ಇಂಜಿನಿಯರ್‌ ಕೆ.ವಿ.ವಿಜಯಕುಮಾರ್,  ರಾಜ ಕುಮಾರ್ ಮತ್ತು ಜೆಸಿಬಿ ಚಾಲಕ ನಾಗಪ್ಪ ವಿರುದ್ಧ ಅರಣ್ಯ ಇಲಾಖೆ ಶಂಕರ ವಲಯ ವಿಭಾಗದಲ್ಲಿ ಎಫ್ಐಆರ್ ದಾಖಲಾಗಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಸೆಕ್ಷನ್ ನಂ .9, 31 ಮತ್ತು  51 ರ ಅಡಿಯಲ್ಲಿ ಕೇಸ್ ದಾಖಲಾಗಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more