Shivamogga: ದೇವಸ್ಥಾನ ಉಳಿಸಲು ಹೋರಾಡಿದ ನಾಗರ ಹಾವು ಕೊಂದವರ ವಿರುದ್ಧ FIR

Shivamogga: ದೇವಸ್ಥಾನ ಉಳಿಸಲು ಹೋರಾಡಿದ ನಾಗರ ಹಾವು ಕೊಂದವರ ವಿರುದ್ಧ FIR

Suvarna News   | Asianet News
Published : Dec 11, 2021, 01:40 PM ISTUpdated : Dec 11, 2021, 02:14 PM IST

ಶಿವಮೊಗ್ಗ (Shivamogga) ಎಪಿಎಂಸಿ ರಸ್ತೆಯಲ್ಲಿ 40 ವರ್ಷ ಇತಿಹಾಸ (History) ಹೊಂದಿರುವ ಪುರಾತನ ಆಂಜನೇಯ ಸ್ವಾಮಿ  ದೇಗುಲವೊಂದಿತ್ತು. ಶಿವಮೊಗ್ಗ ಸ್ಮಾರ್ಟ್ ಸಿಟಿ (Smart City) ರಸ್ತೆ ಅಗಲೀಕರಣ ನೆಪದಲ್ಲಿ ಈ ದೇಗುಲ ತೆರವುಗೊಳಿಸಲು ಸ್ಥಳೀಯ ಆಡಳಿತ ಮುಂದಾಗಿದೆ. 

ಶಿವಮೊಗ್ಗ (ಡಿ. 11):  ಎಪಿಎಂಸಿ (APMC) ರಸ್ತೆಯಲ್ಲಿ 40 ವರ್ಷ ಇತಿಹಾಸ (History) ಹೊಂದಿರುವ ಪುರಾತನ ಆಂಜನೇಯ ಸ್ವಾಮಿ  ದೇಗುಲವೊಂದಿತ್ತು. ಶಿವಮೊಗ್ಗ ಸ್ಮಾರ್ಟ್ ಸಿಟಿ (Smart City)ರಸ್ತೆ ಅಗಲೀಕರಣ ನೆಪದಲ್ಲಿ ಈ ದೇಗುಲ ತೆರವುಗೊಳಿಸಲು ಸ್ಥಳೀಯ ಆಡಳಿತ ಮುಂದಾಗಿದೆ.

ಜೆಸಿಬಿಯಿಂದ ದೇಗುಲ ತೆರವುಗೊಳಿಸಲು ಮುಂದಾದಾಗ ಅಚ್ಚರಿ ಎಂಬಂತೆ, ನಾಗರಹಾವೊಂದು ಅಲ್ಲಿ ಪ್ರತ್ಯಕ್ಷವಾಗಿದೆ. ಜೆಸಿಬಿ ಕೆಲಸ ಮಾಡುವಾಗ ಇದಕ್ಕೆ ಸಮ್ಮತವಿಲ್ಲ ಎಂದು ವಿರೋಧ ವ್ಯಕ್ತಪಡಿಸಿದೆ. ಆದರೆ ಸಂಬಂಧಪಟ್ಟವರು ಇದನ್ನು ಗಂಭೀರವಾಗಿ ತೆಗೆದುಕೊಳ್ಳದೇ ತಮ್ಮ ಕೆಲಸ ಮುಂದುವರೆಸಿದ್ದಾರೆ. ಹೀಗೆ ಕೆಲಸ ಮಾಡುತ್ತಿರುವಾಗ, ನಾಗರಹಾವು ಜೆಸಿಬಿಗೆ ಸಿಲುಕಿ ಸಾವನ್ನಪ್ಪಿತ್ತು. ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳೀಯರು, ಭಜರಂಗದಳ, ವಿಶ್ವ ಹಿಂದೂ ಪರಿಷತ್‌ ದವರು  ಸ್ಥಳೀಯ ಆಡಳಿತದ ವಿರುದ್ಧ, ಕೆಲಸ ಮಾಡಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವಿಸ್ತೃತವಾದ ವರದಿ ಪ್ರಸಾರ ಮಾಡಿತ್ತು. 

ಶಿವಮೊಗ್ಗ ಸ್ಮಾರ್ಟ್‌ಸಿಟಿ ಇಂಜಿನಿಯರ್‌ ಕೆ.ವಿ.ವಿಜಯಕುಮಾರ್,  ರಾಜ ಕುಮಾರ್ ಮತ್ತು ಜೆಸಿಬಿ ಚಾಲಕ ನಾಗಪ್ಪ ವಿರುದ್ಧ ಅರಣ್ಯ ಇಲಾಖೆ ಶಂಕರ ವಲಯ ವಿಭಾಗದಲ್ಲಿ ಎಫ್ಐಆರ್ ದಾಖಲಾಗಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಸೆಕ್ಷನ್ ನಂ .9, 31 ಮತ್ತು  51 ರ ಅಡಿಯಲ್ಲಿ ಕೇಸ್ ದಾಖಲಾಗಿದೆ.

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more