BBMP Lab Fire: ನಿಯಮಬಾಹಿರವಾಗಿ ಲ್ಯಾಬ್‌ ನಿರ್ಮಾಣ? ಕಮಿಷನರ್‌ಗೆ ನೋಟಿಸ್‌

BBMP Lab Fire: ನಿಯಮಬಾಹಿರವಾಗಿ ಲ್ಯಾಬ್‌ ನಿರ್ಮಾಣ? ಕಮಿಷನರ್‌ಗೆ ನೋಟಿಸ್‌

Published : Aug 13, 2023, 07:06 PM ISTUpdated : Aug 13, 2023, 07:09 PM IST

ಬಿಬಿಎಂಪಿ ಕೇಂದ್ರ ಕಚೇರಿಯ ಗುಣನಿಯಂತ್ರಣ ವಿಭಾಗದಲ್ಲಿ ನಡೆದ ಅಗ್ನಿ ಅವಘಡ ಪರಕರಣಕ್ಕೆ ಸಂಬಂಧಿಸಿದಂತೆ ಪಾಲಿಕೆ ಆಯುಕ್ತರಿಗೆ ನೋಟಿಸ್‌ ಕೊಡಲಾಗುತ್ತಿದೆ.

ಬೆಂಗಳೂರು (ಆ.13): ಬಿಬಿಎಂಪಿ ಕೇಂದ್ರ ಕಚೇರಿಯ ಗುಣನಿಯಂತ್ರಣ ವಿಭಾಗದಲ್ಲಿ ನಡೆದ ಅಗ್ನಿ ಅವಘಡ ಪರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ಬೇಧಿಸಲು ಮುಂದಾಗಿರುವ ಹಲಸೂರು ಗೇಟ್‌ ಠಾಣೆ ಪೊಲೀಸರು ಯೋಗ್ಯವಲ್ಲದ ಜಾಗದಲ್ಲಿ ಲ್ಯಾಬ್‌ ನಿರ್ಮಾಣ ಮಾಡಲಾಗಿತ್ತೇ ಎಂಬ ತನಿಖೆಗೆ ಮುಂದಾಗಿದ್ದಾರೆ. ಈ ಹಿಂದೆ ಇದ್ದ ಗೋದಾಮನ್ನು ಲ್ಯಾಬ್‌ ಅನ್ನಾಗಿ ಮಾಡಿಕೊಳ್ಳಲಾಗಿತ್ತು. ಆದ್ದರಿಂದ ಯೋಗ್ಯವಲ್ಲದ ಜಾಗದಲ್ಲಿ ನಿರ್ಮಾಣ ಮಾಡಲಾಗಿತ್ತೇ, ಲ್ಯಾಬ್‌ ನಿರ್ಮಾಣಕ್ಕೆ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ (ಪರವಾನಗಿ) ಪಡೆಯಲಾಗಿತ್ತೇ ಎಂಬುದರ ಬಗ್ಗೆ ತನಿಖೆಯನ್ನು ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ಇಂಜಿನಿಯರ್‌ಗಳಿಗೆ ಪೊಲೀಸ್‌ ಇಲಾಖೆಯಿಂದ ನೋಟಿಸ್‌ ನೀಡಲು ಮುಂದಾಗಿದೆ. ಇನ್ನು ಬಿಬಿಎಂಪಿ ಲ್ಯಾಬ್‌ನಲ್ಲಿ ಡಿ. ಗ್ರೂಪ್‌ ನೌಕರ ಸುರೇಶ್‌ನಿಗೆ ಪ್ರಯೋಗಾಲದ ಉಸ್ತುವಾರಿ ನೀಡಲಾಗಿತ್ತು. ಜೊತೆಗೆ, ಆತನೇ ಲ್ಯಾಬ್‌ನಲ್ಲಿ ಟೆಸ್ಟಿಂಗ್‌ ಮಾಡುತ್ತಿದ್ದನು. ಇನ್ನು ಪ್ರಯೋಗಾಲಯದಕ್ಕೆ ಇರಬೇಕಿದ್ದ ಸಾಮಾನ್ಯ ನಿಯಮಾವಳಿಗಳನ್ನು (ಎಸ್‌ಒಪಿ) ಪಾಲಿಸಲಾಗಿದೆಯೇ ಎಂಬ ಅನುಮಾನಗಳಿವೆ. ಆದ್ದರಿಂದ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more