Karwar:  ವಾಣಿಜ್ಯ ಬಂದರು ವಿಸ್ತರಣೆ ಕಾಮಗಾರಿಗೆ ಮೀನುಗಾರರ ವಿರೋಧ

Karwar: ವಾಣಿಜ್ಯ ಬಂದರು ವಿಸ್ತರಣೆ ಕಾಮಗಾರಿಗೆ ಮೀನುಗಾರರ ವಿರೋಧ

Suvarna News   | Asianet News
Published : Feb 19, 2022, 12:34 PM IST

*   ರಾಜ್ಯದ ಸರ್ವಋತು ಬಂದರು ಅಂತಲೇ ಪ್ರಸಿದ್ಧಿಯಾಗಿರುವ ಕಾರವಾರ ಬಂದರು
*  ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸಾಗರಮಾಲಾ ಯೋಜನೆಯಡಿ ಬಂದರು ವಿಸ್ತರಣೆ
*  ಯೋಜನೆಯಿಂದ ಕಡಲತೀರದ ಪರಿಸರಕ್ಕೆ ಹಾನಿ ಎಂದು ಮೀನುಗಾರರ ಆರೋಪ
 

ಕಾರವಾರ(ಫೆ.19):  ರಾಜ್ಯದ ಸರ್ವಋತು ಬಂದರು ಅಂತಲೇ ಪ್ರಸಿದ್ಧಿಯಾಗಿರುವ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ವಾಣಿಜ್ಯ ಬಂದರು ವಿಸ್ತರಣೆ ಕಾಮಗಾರಿಗೆ ಮೀನುಗಾರರಿಂದ ವಿರೋಧ ಮುಂದುವರಿದಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಸಾಗರಮಾಲಾ ಯೋಜನೆಯಡಿಯಲ್ಲಿ ಬಂದರು ವಿಸ್ತರಣೆಗೆ ಯೋಜನೆ ಸಿದ್ಧವಾಗಿದ್ದು, ಇದರ ಅಂಗವಾಗಿ ಕಾರವಾರ ನಗರದ ಟ್ಯಾಗೋರ್ ಕಡಲತೀರದಲ್ಲಿ ಅಲೆ ತಡೆಗೋಡೆ ನಿರ್ಮಾಣಕ್ಕೆ ಗುತ್ತಿಗೆ ಪಡೆದ ಕಂಪೆನಿ ಮುಂದಾಗಿತ್ತು. ಆದ್ರೆ ಈ ವೇಳೆ ಸ್ಥಳೀಯ ಮೀನುಗಾರರು ಯೋಜನೆಯಿಂದ ಕಡಲತೀರದ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ಆರೋಪಿಸಿ ಕಾಮಗಾರಿಗೆ ಅಡ್ಡಿಪಡಿಸಿದ್ದರು. 

2020ರಲ್ಲಿ ಸಾಗರಮಾಲಾ ಯೋಜನೆಯಡಿ ಕಾಮಗಾರಿ ಪ್ರಾರಂಭಕ್ಕೆ ಜಿಲ್ಲಾಡಳಿತ ಮುಂದಾಗಿದ್ದು ಈ ವೇಳೆ ಸ್ಥಳೀಯ ಮೀನುಗಾರರು ಸಾವಿರಾರು ಸಂಖ್ಯೆಯಲ್ಲಿ ಒಟ್ಟಾಗಿ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ ವಾರಗಳ ಕಾಲ ಧರಣಿ ನಡೆಸುವ ಮೂಲಕ ಕಡಲತೀರವನ್ನು, ಸಾಂಪ್ರದಾಯಿಕ ಮೀನುಗಾರಿಕೆಯನ್ನ ಉಳಿಸಿಕೊಡುವಂತೆ ಒತ್ತಾಯ ಮಾಡಿದ್ದರು. ಪರಿಣಾಮ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದ್ದರಿಂದಾಗಿ ಕಳೆದೊಂದು ವರ್ಷದಿಂದ ಕಾಮಗಾರಿ ಸ್ಥಗಿತಗೊಂಡಿದೆ. ಆದ್ರೆ ಈವರೆಗೂ  ಜಿಲ್ಲಾಡಳಿತವಾಗಲೀ, ಜನಪ್ರತಿನಿಧಿಗಳಾಗಲೀ ಮೀನುಗಾರರೊಂದಿಗೆ ಚರ್ಚೆಗೆ ಮುಂದಾಗಿರಲಿಲ್ಲ. 

Ankola: ಉರೂಸ್‌ನಲ್ಲಿ ಜಾತಿ, ಧರ್ಮ ಭೇದ ಮರೆತು ಸೇರಿದ ಸಾವಿರಾರು ಜನ

ಈ ನಿಟ್ಟಿನಲ್ಲಿ ಕಾರವಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಚಿವ ಶಿವರಾಮ ಹೆಬ್ಬಾರ್ ನೇತೃತ್ವದಲ್ಲಿ ನಡೆಸಲಾದ ಕೆಡಿಪಿ ಸಭೆಗೂ ಮೀನುಗಾರರು ಹಾಜರಾಗದೇ ವಿರೋಧ ವ್ಯಕ್ತಪಡಿಸಿದ್ದರು. ಯೋಜನೆ ಆರಂಭದಿಂದಲೂ ಮೀನುಗಾರರೊಂದಿಗೆ ಯಾರೊಬ್ಬರೂ ಕೂಡಾ ಸೂಕ್ತವಾಗಿ ಚರ್ಚೆ ನಡೆಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸುವ ಮೀನುಗಾರರು, ಸಾಗರಮಾಲಾ ಜಾರಿಯಿಂದ ಮೀನುಗಾರಿಕೆಗೆ ಎದುರಾಗುವ ಸಮಸ್ಯೆ ಕುರಿತು ಮೊದಲು ಬಹಿರಂಗ ಸಭೆ ನಡೆಸಿ ಅಭಿಪ್ರಾಯ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more