Karwar:  ವಾಣಿಜ್ಯ ಬಂದರು ವಿಸ್ತರಣೆ ಕಾಮಗಾರಿಗೆ ಮೀನುಗಾರರ ವಿರೋಧ

Karwar: ವಾಣಿಜ್ಯ ಬಂದರು ವಿಸ್ತರಣೆ ಕಾಮಗಾರಿಗೆ ಮೀನುಗಾರರ ವಿರೋಧ

Suvarna News   | Asianet News
Published : Feb 19, 2022, 12:34 PM IST

*   ರಾಜ್ಯದ ಸರ್ವಋತು ಬಂದರು ಅಂತಲೇ ಪ್ರಸಿದ್ಧಿಯಾಗಿರುವ ಕಾರವಾರ ಬಂದರು
*  ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸಾಗರಮಾಲಾ ಯೋಜನೆಯಡಿ ಬಂದರು ವಿಸ್ತರಣೆ
*  ಯೋಜನೆಯಿಂದ ಕಡಲತೀರದ ಪರಿಸರಕ್ಕೆ ಹಾನಿ ಎಂದು ಮೀನುಗಾರರ ಆರೋಪ
 

ಕಾರವಾರ(ಫೆ.19):  ರಾಜ್ಯದ ಸರ್ವಋತು ಬಂದರು ಅಂತಲೇ ಪ್ರಸಿದ್ಧಿಯಾಗಿರುವ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ವಾಣಿಜ್ಯ ಬಂದರು ವಿಸ್ತರಣೆ ಕಾಮಗಾರಿಗೆ ಮೀನುಗಾರರಿಂದ ವಿರೋಧ ಮುಂದುವರಿದಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಸಾಗರಮಾಲಾ ಯೋಜನೆಯಡಿಯಲ್ಲಿ ಬಂದರು ವಿಸ್ತರಣೆಗೆ ಯೋಜನೆ ಸಿದ್ಧವಾಗಿದ್ದು, ಇದರ ಅಂಗವಾಗಿ ಕಾರವಾರ ನಗರದ ಟ್ಯಾಗೋರ್ ಕಡಲತೀರದಲ್ಲಿ ಅಲೆ ತಡೆಗೋಡೆ ನಿರ್ಮಾಣಕ್ಕೆ ಗುತ್ತಿಗೆ ಪಡೆದ ಕಂಪೆನಿ ಮುಂದಾಗಿತ್ತು. ಆದ್ರೆ ಈ ವೇಳೆ ಸ್ಥಳೀಯ ಮೀನುಗಾರರು ಯೋಜನೆಯಿಂದ ಕಡಲತೀರದ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ಆರೋಪಿಸಿ ಕಾಮಗಾರಿಗೆ ಅಡ್ಡಿಪಡಿಸಿದ್ದರು. 

2020ರಲ್ಲಿ ಸಾಗರಮಾಲಾ ಯೋಜನೆಯಡಿ ಕಾಮಗಾರಿ ಪ್ರಾರಂಭಕ್ಕೆ ಜಿಲ್ಲಾಡಳಿತ ಮುಂದಾಗಿದ್ದು ಈ ವೇಳೆ ಸ್ಥಳೀಯ ಮೀನುಗಾರರು ಸಾವಿರಾರು ಸಂಖ್ಯೆಯಲ್ಲಿ ಒಟ್ಟಾಗಿ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ ವಾರಗಳ ಕಾಲ ಧರಣಿ ನಡೆಸುವ ಮೂಲಕ ಕಡಲತೀರವನ್ನು, ಸಾಂಪ್ರದಾಯಿಕ ಮೀನುಗಾರಿಕೆಯನ್ನ ಉಳಿಸಿಕೊಡುವಂತೆ ಒತ್ತಾಯ ಮಾಡಿದ್ದರು. ಪರಿಣಾಮ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದ್ದರಿಂದಾಗಿ ಕಳೆದೊಂದು ವರ್ಷದಿಂದ ಕಾಮಗಾರಿ ಸ್ಥಗಿತಗೊಂಡಿದೆ. ಆದ್ರೆ ಈವರೆಗೂ  ಜಿಲ್ಲಾಡಳಿತವಾಗಲೀ, ಜನಪ್ರತಿನಿಧಿಗಳಾಗಲೀ ಮೀನುಗಾರರೊಂದಿಗೆ ಚರ್ಚೆಗೆ ಮುಂದಾಗಿರಲಿಲ್ಲ. 

Ankola: ಉರೂಸ್‌ನಲ್ಲಿ ಜಾತಿ, ಧರ್ಮ ಭೇದ ಮರೆತು ಸೇರಿದ ಸಾವಿರಾರು ಜನ

ಈ ನಿಟ್ಟಿನಲ್ಲಿ ಕಾರವಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಚಿವ ಶಿವರಾಮ ಹೆಬ್ಬಾರ್ ನೇತೃತ್ವದಲ್ಲಿ ನಡೆಸಲಾದ ಕೆಡಿಪಿ ಸಭೆಗೂ ಮೀನುಗಾರರು ಹಾಜರಾಗದೇ ವಿರೋಧ ವ್ಯಕ್ತಪಡಿಸಿದ್ದರು. ಯೋಜನೆ ಆರಂಭದಿಂದಲೂ ಮೀನುಗಾರರೊಂದಿಗೆ ಯಾರೊಬ್ಬರೂ ಕೂಡಾ ಸೂಕ್ತವಾಗಿ ಚರ್ಚೆ ನಡೆಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸುವ ಮೀನುಗಾರರು, ಸಾಗರಮಾಲಾ ಜಾರಿಯಿಂದ ಮೀನುಗಾರಿಕೆಗೆ ಎದುರಾಗುವ ಸಮಸ್ಯೆ ಕುರಿತು ಮೊದಲು ಬಹಿರಂಗ ಸಭೆ ನಡೆಸಿ ಅಭಿಪ್ರಾಯ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more