Karwar:  ವಾಣಿಜ್ಯ ಬಂದರು ವಿಸ್ತರಣೆ ಕಾಮಗಾರಿಗೆ ಮೀನುಗಾರರ ವಿರೋಧ

Karwar: ವಾಣಿಜ್ಯ ಬಂದರು ವಿಸ್ತರಣೆ ಕಾಮಗಾರಿಗೆ ಮೀನುಗಾರರ ವಿರೋಧ

Published : Feb 19, 2022, 12:34 PM IST

*   ರಾಜ್ಯದ ಸರ್ವಋತು ಬಂದರು ಅಂತಲೇ ಪ್ರಸಿದ್ಧಿಯಾಗಿರುವ ಕಾರವಾರ ಬಂದರು
*  ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸಾಗರಮಾಲಾ ಯೋಜನೆಯಡಿ ಬಂದರು ವಿಸ್ತರಣೆ
*  ಯೋಜನೆಯಿಂದ ಕಡಲತೀರದ ಪರಿಸರಕ್ಕೆ ಹಾನಿ ಎಂದು ಮೀನುಗಾರರ ಆರೋಪ
 

ಕಾರವಾರ(ಫೆ.19):  ರಾಜ್ಯದ ಸರ್ವಋತು ಬಂದರು ಅಂತಲೇ ಪ್ರಸಿದ್ಧಿಯಾಗಿರುವ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ವಾಣಿಜ್ಯ ಬಂದರು ವಿಸ್ತರಣೆ ಕಾಮಗಾರಿಗೆ ಮೀನುಗಾರರಿಂದ ವಿರೋಧ ಮುಂದುವರಿದಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಸಾಗರಮಾಲಾ ಯೋಜನೆಯಡಿಯಲ್ಲಿ ಬಂದರು ವಿಸ್ತರಣೆಗೆ ಯೋಜನೆ ಸಿದ್ಧವಾಗಿದ್ದು, ಇದರ ಅಂಗವಾಗಿ ಕಾರವಾರ ನಗರದ ಟ್ಯಾಗೋರ್ ಕಡಲತೀರದಲ್ಲಿ ಅಲೆ ತಡೆಗೋಡೆ ನಿರ್ಮಾಣಕ್ಕೆ ಗುತ್ತಿಗೆ ಪಡೆದ ಕಂಪೆನಿ ಮುಂದಾಗಿತ್ತು. ಆದ್ರೆ ಈ ವೇಳೆ ಸ್ಥಳೀಯ ಮೀನುಗಾರರು ಯೋಜನೆಯಿಂದ ಕಡಲತೀರದ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ಆರೋಪಿಸಿ ಕಾಮಗಾರಿಗೆ ಅಡ್ಡಿಪಡಿಸಿದ್ದರು. 

2020ರಲ್ಲಿ ಸಾಗರಮಾಲಾ ಯೋಜನೆಯಡಿ ಕಾಮಗಾರಿ ಪ್ರಾರಂಭಕ್ಕೆ ಜಿಲ್ಲಾಡಳಿತ ಮುಂದಾಗಿದ್ದು ಈ ವೇಳೆ ಸ್ಥಳೀಯ ಮೀನುಗಾರರು ಸಾವಿರಾರು ಸಂಖ್ಯೆಯಲ್ಲಿ ಒಟ್ಟಾಗಿ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ ವಾರಗಳ ಕಾಲ ಧರಣಿ ನಡೆಸುವ ಮೂಲಕ ಕಡಲತೀರವನ್ನು, ಸಾಂಪ್ರದಾಯಿಕ ಮೀನುಗಾರಿಕೆಯನ್ನ ಉಳಿಸಿಕೊಡುವಂತೆ ಒತ್ತಾಯ ಮಾಡಿದ್ದರು. ಪರಿಣಾಮ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದ್ದರಿಂದಾಗಿ ಕಳೆದೊಂದು ವರ್ಷದಿಂದ ಕಾಮಗಾರಿ ಸ್ಥಗಿತಗೊಂಡಿದೆ. ಆದ್ರೆ ಈವರೆಗೂ  ಜಿಲ್ಲಾಡಳಿತವಾಗಲೀ, ಜನಪ್ರತಿನಿಧಿಗಳಾಗಲೀ ಮೀನುಗಾರರೊಂದಿಗೆ ಚರ್ಚೆಗೆ ಮುಂದಾಗಿರಲಿಲ್ಲ. 

Ankola: ಉರೂಸ್‌ನಲ್ಲಿ ಜಾತಿ, ಧರ್ಮ ಭೇದ ಮರೆತು ಸೇರಿದ ಸಾವಿರಾರು ಜನ

ಈ ನಿಟ್ಟಿನಲ್ಲಿ ಕಾರವಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಚಿವ ಶಿವರಾಮ ಹೆಬ್ಬಾರ್ ನೇತೃತ್ವದಲ್ಲಿ ನಡೆಸಲಾದ ಕೆಡಿಪಿ ಸಭೆಗೂ ಮೀನುಗಾರರು ಹಾಜರಾಗದೇ ವಿರೋಧ ವ್ಯಕ್ತಪಡಿಸಿದ್ದರು. ಯೋಜನೆ ಆರಂಭದಿಂದಲೂ ಮೀನುಗಾರರೊಂದಿಗೆ ಯಾರೊಬ್ಬರೂ ಕೂಡಾ ಸೂಕ್ತವಾಗಿ ಚರ್ಚೆ ನಡೆಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸುವ ಮೀನುಗಾರರು, ಸಾಗರಮಾಲಾ ಜಾರಿಯಿಂದ ಮೀನುಗಾರಿಕೆಗೆ ಎದುರಾಗುವ ಸಮಸ್ಯೆ ಕುರಿತು ಮೊದಲು ಬಹಿರಂಗ ಸಭೆ ನಡೆಸಿ ಅಭಿಪ್ರಾಯ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more