Karwar:  ವಾಣಿಜ್ಯ ಬಂದರು ವಿಸ್ತರಣೆ ಕಾಮಗಾರಿಗೆ ಮೀನುಗಾರರ ವಿರೋಧ

Karwar: ವಾಣಿಜ್ಯ ಬಂದರು ವಿಸ್ತರಣೆ ಕಾಮಗಾರಿಗೆ ಮೀನುಗಾರರ ವಿರೋಧ

Suvarna News   | Asianet News
Published : Feb 19, 2022, 12:34 PM IST

*   ರಾಜ್ಯದ ಸರ್ವಋತು ಬಂದರು ಅಂತಲೇ ಪ್ರಸಿದ್ಧಿಯಾಗಿರುವ ಕಾರವಾರ ಬಂದರು
*  ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸಾಗರಮಾಲಾ ಯೋಜನೆಯಡಿ ಬಂದರು ವಿಸ್ತರಣೆ
*  ಯೋಜನೆಯಿಂದ ಕಡಲತೀರದ ಪರಿಸರಕ್ಕೆ ಹಾನಿ ಎಂದು ಮೀನುಗಾರರ ಆರೋಪ
 

ಕಾರವಾರ(ಫೆ.19):  ರಾಜ್ಯದ ಸರ್ವಋತು ಬಂದರು ಅಂತಲೇ ಪ್ರಸಿದ್ಧಿಯಾಗಿರುವ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ವಾಣಿಜ್ಯ ಬಂದರು ವಿಸ್ತರಣೆ ಕಾಮಗಾರಿಗೆ ಮೀನುಗಾರರಿಂದ ವಿರೋಧ ಮುಂದುವರಿದಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಸಾಗರಮಾಲಾ ಯೋಜನೆಯಡಿಯಲ್ಲಿ ಬಂದರು ವಿಸ್ತರಣೆಗೆ ಯೋಜನೆ ಸಿದ್ಧವಾಗಿದ್ದು, ಇದರ ಅಂಗವಾಗಿ ಕಾರವಾರ ನಗರದ ಟ್ಯಾಗೋರ್ ಕಡಲತೀರದಲ್ಲಿ ಅಲೆ ತಡೆಗೋಡೆ ನಿರ್ಮಾಣಕ್ಕೆ ಗುತ್ತಿಗೆ ಪಡೆದ ಕಂಪೆನಿ ಮುಂದಾಗಿತ್ತು. ಆದ್ರೆ ಈ ವೇಳೆ ಸ್ಥಳೀಯ ಮೀನುಗಾರರು ಯೋಜನೆಯಿಂದ ಕಡಲತೀರದ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ಆರೋಪಿಸಿ ಕಾಮಗಾರಿಗೆ ಅಡ್ಡಿಪಡಿಸಿದ್ದರು. 

2020ರಲ್ಲಿ ಸಾಗರಮಾಲಾ ಯೋಜನೆಯಡಿ ಕಾಮಗಾರಿ ಪ್ರಾರಂಭಕ್ಕೆ ಜಿಲ್ಲಾಡಳಿತ ಮುಂದಾಗಿದ್ದು ಈ ವೇಳೆ ಸ್ಥಳೀಯ ಮೀನುಗಾರರು ಸಾವಿರಾರು ಸಂಖ್ಯೆಯಲ್ಲಿ ಒಟ್ಟಾಗಿ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ ವಾರಗಳ ಕಾಲ ಧರಣಿ ನಡೆಸುವ ಮೂಲಕ ಕಡಲತೀರವನ್ನು, ಸಾಂಪ್ರದಾಯಿಕ ಮೀನುಗಾರಿಕೆಯನ್ನ ಉಳಿಸಿಕೊಡುವಂತೆ ಒತ್ತಾಯ ಮಾಡಿದ್ದರು. ಪರಿಣಾಮ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದ್ದರಿಂದಾಗಿ ಕಳೆದೊಂದು ವರ್ಷದಿಂದ ಕಾಮಗಾರಿ ಸ್ಥಗಿತಗೊಂಡಿದೆ. ಆದ್ರೆ ಈವರೆಗೂ  ಜಿಲ್ಲಾಡಳಿತವಾಗಲೀ, ಜನಪ್ರತಿನಿಧಿಗಳಾಗಲೀ ಮೀನುಗಾರರೊಂದಿಗೆ ಚರ್ಚೆಗೆ ಮುಂದಾಗಿರಲಿಲ್ಲ. 

Ankola: ಉರೂಸ್‌ನಲ್ಲಿ ಜಾತಿ, ಧರ್ಮ ಭೇದ ಮರೆತು ಸೇರಿದ ಸಾವಿರಾರು ಜನ

ಈ ನಿಟ್ಟಿನಲ್ಲಿ ಕಾರವಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಚಿವ ಶಿವರಾಮ ಹೆಬ್ಬಾರ್ ನೇತೃತ್ವದಲ್ಲಿ ನಡೆಸಲಾದ ಕೆಡಿಪಿ ಸಭೆಗೂ ಮೀನುಗಾರರು ಹಾಜರಾಗದೇ ವಿರೋಧ ವ್ಯಕ್ತಪಡಿಸಿದ್ದರು. ಯೋಜನೆ ಆರಂಭದಿಂದಲೂ ಮೀನುಗಾರರೊಂದಿಗೆ ಯಾರೊಬ್ಬರೂ ಕೂಡಾ ಸೂಕ್ತವಾಗಿ ಚರ್ಚೆ ನಡೆಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸುವ ಮೀನುಗಾರರು, ಸಾಗರಮಾಲಾ ಜಾರಿಯಿಂದ ಮೀನುಗಾರಿಕೆಗೆ ಎದುರಾಗುವ ಸಮಸ್ಯೆ ಕುರಿತು ಮೊದಲು ಬಹಿರಂಗ ಸಭೆ ನಡೆಸಿ ಅಭಿಪ್ರಾಯ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more