Karwar:  ವಾಣಿಜ್ಯ ಬಂದರು ವಿಸ್ತರಣೆ ಕಾಮಗಾರಿಗೆ ಮೀನುಗಾರರ ವಿರೋಧ

Karwar: ವಾಣಿಜ್ಯ ಬಂದರು ವಿಸ್ತರಣೆ ಕಾಮಗಾರಿಗೆ ಮೀನುಗಾರರ ವಿರೋಧ

Suvarna News   | Asianet News
Published : Feb 19, 2022, 12:34 PM IST

*   ರಾಜ್ಯದ ಸರ್ವಋತು ಬಂದರು ಅಂತಲೇ ಪ್ರಸಿದ್ಧಿಯಾಗಿರುವ ಕಾರವಾರ ಬಂದರು
*  ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸಾಗರಮಾಲಾ ಯೋಜನೆಯಡಿ ಬಂದರು ವಿಸ್ತರಣೆ
*  ಯೋಜನೆಯಿಂದ ಕಡಲತೀರದ ಪರಿಸರಕ್ಕೆ ಹಾನಿ ಎಂದು ಮೀನುಗಾರರ ಆರೋಪ
 

ಕಾರವಾರ(ಫೆ.19):  ರಾಜ್ಯದ ಸರ್ವಋತು ಬಂದರು ಅಂತಲೇ ಪ್ರಸಿದ್ಧಿಯಾಗಿರುವ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ವಾಣಿಜ್ಯ ಬಂದರು ವಿಸ್ತರಣೆ ಕಾಮಗಾರಿಗೆ ಮೀನುಗಾರರಿಂದ ವಿರೋಧ ಮುಂದುವರಿದಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಸಾಗರಮಾಲಾ ಯೋಜನೆಯಡಿಯಲ್ಲಿ ಬಂದರು ವಿಸ್ತರಣೆಗೆ ಯೋಜನೆ ಸಿದ್ಧವಾಗಿದ್ದು, ಇದರ ಅಂಗವಾಗಿ ಕಾರವಾರ ನಗರದ ಟ್ಯಾಗೋರ್ ಕಡಲತೀರದಲ್ಲಿ ಅಲೆ ತಡೆಗೋಡೆ ನಿರ್ಮಾಣಕ್ಕೆ ಗುತ್ತಿಗೆ ಪಡೆದ ಕಂಪೆನಿ ಮುಂದಾಗಿತ್ತು. ಆದ್ರೆ ಈ ವೇಳೆ ಸ್ಥಳೀಯ ಮೀನುಗಾರರು ಯೋಜನೆಯಿಂದ ಕಡಲತೀರದ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ಆರೋಪಿಸಿ ಕಾಮಗಾರಿಗೆ ಅಡ್ಡಿಪಡಿಸಿದ್ದರು. 

2020ರಲ್ಲಿ ಸಾಗರಮಾಲಾ ಯೋಜನೆಯಡಿ ಕಾಮಗಾರಿ ಪ್ರಾರಂಭಕ್ಕೆ ಜಿಲ್ಲಾಡಳಿತ ಮುಂದಾಗಿದ್ದು ಈ ವೇಳೆ ಸ್ಥಳೀಯ ಮೀನುಗಾರರು ಸಾವಿರಾರು ಸಂಖ್ಯೆಯಲ್ಲಿ ಒಟ್ಟಾಗಿ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ ವಾರಗಳ ಕಾಲ ಧರಣಿ ನಡೆಸುವ ಮೂಲಕ ಕಡಲತೀರವನ್ನು, ಸಾಂಪ್ರದಾಯಿಕ ಮೀನುಗಾರಿಕೆಯನ್ನ ಉಳಿಸಿಕೊಡುವಂತೆ ಒತ್ತಾಯ ಮಾಡಿದ್ದರು. ಪರಿಣಾಮ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದ್ದರಿಂದಾಗಿ ಕಳೆದೊಂದು ವರ್ಷದಿಂದ ಕಾಮಗಾರಿ ಸ್ಥಗಿತಗೊಂಡಿದೆ. ಆದ್ರೆ ಈವರೆಗೂ  ಜಿಲ್ಲಾಡಳಿತವಾಗಲೀ, ಜನಪ್ರತಿನಿಧಿಗಳಾಗಲೀ ಮೀನುಗಾರರೊಂದಿಗೆ ಚರ್ಚೆಗೆ ಮುಂದಾಗಿರಲಿಲ್ಲ. 

Ankola: ಉರೂಸ್‌ನಲ್ಲಿ ಜಾತಿ, ಧರ್ಮ ಭೇದ ಮರೆತು ಸೇರಿದ ಸಾವಿರಾರು ಜನ

ಈ ನಿಟ್ಟಿನಲ್ಲಿ ಕಾರವಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಚಿವ ಶಿವರಾಮ ಹೆಬ್ಬಾರ್ ನೇತೃತ್ವದಲ್ಲಿ ನಡೆಸಲಾದ ಕೆಡಿಪಿ ಸಭೆಗೂ ಮೀನುಗಾರರು ಹಾಜರಾಗದೇ ವಿರೋಧ ವ್ಯಕ್ತಪಡಿಸಿದ್ದರು. ಯೋಜನೆ ಆರಂಭದಿಂದಲೂ ಮೀನುಗಾರರೊಂದಿಗೆ ಯಾರೊಬ್ಬರೂ ಕೂಡಾ ಸೂಕ್ತವಾಗಿ ಚರ್ಚೆ ನಡೆಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸುವ ಮೀನುಗಾರರು, ಸಾಗರಮಾಲಾ ಜಾರಿಯಿಂದ ಮೀನುಗಾರಿಕೆಗೆ ಎದುರಾಗುವ ಸಮಸ್ಯೆ ಕುರಿತು ಮೊದಲು ಬಹಿರಂಗ ಸಭೆ ನಡೆಸಿ ಅಭಿಪ್ರಾಯ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more