ಇಂದಿನಿಂದ ಶಿವಮೊಗ್ಗದಲ್ಲಿ ವಿಮಾನ ಪ್ರಯಾಣ ಆರಂಭ: ಬೆಂಗಳೂರು TO ಶಿವಮೊಗ್ಗಕ್ಕೆ ಹಾರಾಟ

ಇಂದಿನಿಂದ ಶಿವಮೊಗ್ಗದಲ್ಲಿ ವಿಮಾನ ಪ್ರಯಾಣ ಆರಂಭ: ಬೆಂಗಳೂರು TO ಶಿವಮೊಗ್ಗಕ್ಕೆ ಹಾರಾಟ

Published : Aug 31, 2023, 11:15 AM ISTUpdated : Aug 31, 2023, 11:16 AM IST

ಮಲೆನಾಡಿನ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಹಾರಾಟಕ್ಕೆ  ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಇಂದಿನಿಂದ ವಿಮಾನಯಾನ ಆರಂಭಗೊಳ್ಳಲಿದೆ.
 

ಮಲೆನಾಡಿನ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಹಾರಾಟಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಇಂದಿನಿಂದಲೇ ವಿಮಾನಗಳ ಹಾರಾಟ ಆರಂಭವಾಗಲಿದೆ. ಬೆಳಗ್ಗೆ 9.50ಕ್ಕೆ ಬೆಂಗಳೂರಿನಿಂದ(Bengaluru) ಮೊದಲ ಇಂಡಿಗೋ ವಿಮಾನ(Flight) ಟೇಕ್ಅಪ್ ಆಗಲಿದ್ದು, 11.10ಕ್ಕೆ ಶಿವಮೊಗ್ಗದಲ್ಲಿ ಲ್ಯಾಂಡ್ ಆಗಲಿದೆ. ಮಾಜಿ ಸಿಎಂ ಬಿಎಸ್‌ವೈ ಸಚಿವ ಎಂ.ಬಿ ಪಾಟೀಲ್ ಸೇರಿದಂತೆ ಗಣ್ಯರು ಮೊದಲ ವಿಮಾನದಲ್ಲಿ ಶಿವಮೊಗ್ಗಕ್ಕೆ ಬಂದಿಳಿಯಲಿದ್ದಾರೆ. ನಂತರ ಇದೇ ವಿಮಾನ 11.25ಕ್ಕೆ ಶಿವಮೊಗ್ಗದಿಂದ(Shivamogga) ಹೊರಟು 12:25ಕ್ಕೆ ಬೆಂಗಳೂರು ತಲುಪಲಿದೆ. ಶಿವಮೊಗ್ಗದ ಸೋಗಾನೆಯಲ್ಲಿ ಸುಮಾರು 775 ಎಕರೆ ಪ್ರದೇಶದಲ್ಲಿ 450 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಾಣಗೊಂಡಿದೆ. ಫೆಬ್ರವರಿ 27ರಂದು ಪ್ರಧಾನಿ ನರೇಂದ್ರ ಮೋದಿ(PM Modi) ವಿಮಾನ ನಿಲ್ದಾಣವಲೋಕಾರ್ಪಣೆ ಮಾಡಿದ್ದರು. ಇಂದಿನಿಂದ ವಿಮಾನ  ಹಾರಾಟಕ್ಕೆ ಏರ್ಪೋರ್ಟ್ ಮುಕ್ತವಾಗಿದೆ. ಶಿವಮೊಗ್ಗದಿಂದ ಬೆಂಗಳೂರು ಮಧ್ಯೆ ವಿಮಾನ ಹಾರಾಟ ಆರಂಭವಾಗಿ ಬಳಿಕ ಗೋವಾ, ಚೆನ್ನೈ, ದೆಹಲಿ ಸೇರಿದಂತೆ 8ಕ್ಕೂ ಹೆಚ್ಚು ಮಾರ್ಗಗಳಿಗೆ ವಿಮಾನ ಹಾರಾಟ ವಿಸ್ತಾರವಾಗಲಿದೆ. ಇಂಡಿಗೋ, ಸ್ಟಾರ್ ಏರ್ಲೈನ್ಸ್, ಸ್ಪೈಸ್ ಮೊದಲಾದ ವಿಮಾನಯಾನ ಸಂಸ್ಥೆಗಳ ವಿಮಾನ ಸಂಚಾರ ನಡೆಸಲಿವೆ. ಮಧ್ಯ ಕರ್ನಾಟಕದ ಆರ್ಥಿಕ ಬೆಳೆಗಳಾದ ಅಡಿಕೆ, ಕಾಫಿ , ಸಾಂಬಾರ ಪದಾರ್ಥ ಮೊದಲಾದವುಗಳ ಸಾಗಾಣಿಕೆಗೆ ಕಾರ್ಗೋ ವಿಮಾನ ನಿಲ್ದಾಣವಾಗಿಯೂ ರೂಪುಗೊಳ್ಳಲಿದೆ. 

ಇದನ್ನೂ ವೀಕ್ಷಿಸಿ:  ಗುಮ್ಮಟನಗರಿಯಲ್ಲಿ ಇನ್ಮುಂದೆ ಹೆಲ್ಮೆಟ್‌ ಕಡ್ಡಾಯ: ಸಾವಿನ ಪ್ರಮಾಣ ತಗ್ಗಿಸಲು ಪೊಲೀಸರ ರೂಲ್ಸ್

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more