ಇಂದಿನಿಂದ ಶಿವಮೊಗ್ಗದಲ್ಲಿ ವಿಮಾನ ಪ್ರಯಾಣ ಆರಂಭ: ಬೆಂಗಳೂರು TO ಶಿವಮೊಗ್ಗಕ್ಕೆ ಹಾರಾಟ

ಇಂದಿನಿಂದ ಶಿವಮೊಗ್ಗದಲ್ಲಿ ವಿಮಾನ ಪ್ರಯಾಣ ಆರಂಭ: ಬೆಂಗಳೂರು TO ಶಿವಮೊಗ್ಗಕ್ಕೆ ಹಾರಾಟ

Published : Aug 31, 2023, 11:15 AM ISTUpdated : Aug 31, 2023, 11:16 AM IST

ಮಲೆನಾಡಿನ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಹಾರಾಟಕ್ಕೆ  ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಇಂದಿನಿಂದ ವಿಮಾನಯಾನ ಆರಂಭಗೊಳ್ಳಲಿದೆ.
 

ಮಲೆನಾಡಿನ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಹಾರಾಟಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಇಂದಿನಿಂದಲೇ ವಿಮಾನಗಳ ಹಾರಾಟ ಆರಂಭವಾಗಲಿದೆ. ಬೆಳಗ್ಗೆ 9.50ಕ್ಕೆ ಬೆಂಗಳೂರಿನಿಂದ(Bengaluru) ಮೊದಲ ಇಂಡಿಗೋ ವಿಮಾನ(Flight) ಟೇಕ್ಅಪ್ ಆಗಲಿದ್ದು, 11.10ಕ್ಕೆ ಶಿವಮೊಗ್ಗದಲ್ಲಿ ಲ್ಯಾಂಡ್ ಆಗಲಿದೆ. ಮಾಜಿ ಸಿಎಂ ಬಿಎಸ್‌ವೈ ಸಚಿವ ಎಂ.ಬಿ ಪಾಟೀಲ್ ಸೇರಿದಂತೆ ಗಣ್ಯರು ಮೊದಲ ವಿಮಾನದಲ್ಲಿ ಶಿವಮೊಗ್ಗಕ್ಕೆ ಬಂದಿಳಿಯಲಿದ್ದಾರೆ. ನಂತರ ಇದೇ ವಿಮಾನ 11.25ಕ್ಕೆ ಶಿವಮೊಗ್ಗದಿಂದ(Shivamogga) ಹೊರಟು 12:25ಕ್ಕೆ ಬೆಂಗಳೂರು ತಲುಪಲಿದೆ. ಶಿವಮೊಗ್ಗದ ಸೋಗಾನೆಯಲ್ಲಿ ಸುಮಾರು 775 ಎಕರೆ ಪ್ರದೇಶದಲ್ಲಿ 450 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಾಣಗೊಂಡಿದೆ. ಫೆಬ್ರವರಿ 27ರಂದು ಪ್ರಧಾನಿ ನರೇಂದ್ರ ಮೋದಿ(PM Modi) ವಿಮಾನ ನಿಲ್ದಾಣವಲೋಕಾರ್ಪಣೆ ಮಾಡಿದ್ದರು. ಇಂದಿನಿಂದ ವಿಮಾನ  ಹಾರಾಟಕ್ಕೆ ಏರ್ಪೋರ್ಟ್ ಮುಕ್ತವಾಗಿದೆ. ಶಿವಮೊಗ್ಗದಿಂದ ಬೆಂಗಳೂರು ಮಧ್ಯೆ ವಿಮಾನ ಹಾರಾಟ ಆರಂಭವಾಗಿ ಬಳಿಕ ಗೋವಾ, ಚೆನ್ನೈ, ದೆಹಲಿ ಸೇರಿದಂತೆ 8ಕ್ಕೂ ಹೆಚ್ಚು ಮಾರ್ಗಗಳಿಗೆ ವಿಮಾನ ಹಾರಾಟ ವಿಸ್ತಾರವಾಗಲಿದೆ. ಇಂಡಿಗೋ, ಸ್ಟಾರ್ ಏರ್ಲೈನ್ಸ್, ಸ್ಪೈಸ್ ಮೊದಲಾದ ವಿಮಾನಯಾನ ಸಂಸ್ಥೆಗಳ ವಿಮಾನ ಸಂಚಾರ ನಡೆಸಲಿವೆ. ಮಧ್ಯ ಕರ್ನಾಟಕದ ಆರ್ಥಿಕ ಬೆಳೆಗಳಾದ ಅಡಿಕೆ, ಕಾಫಿ , ಸಾಂಬಾರ ಪದಾರ್ಥ ಮೊದಲಾದವುಗಳ ಸಾಗಾಣಿಕೆಗೆ ಕಾರ್ಗೋ ವಿಮಾನ ನಿಲ್ದಾಣವಾಗಿಯೂ ರೂಪುಗೊಳ್ಳಲಿದೆ. 

ಇದನ್ನೂ ವೀಕ್ಷಿಸಿ:  ಗುಮ್ಮಟನಗರಿಯಲ್ಲಿ ಇನ್ಮುಂದೆ ಹೆಲ್ಮೆಟ್‌ ಕಡ್ಡಾಯ: ಸಾವಿನ ಪ್ರಮಾಣ ತಗ್ಗಿಸಲು ಪೊಲೀಸರ ರೂಲ್ಸ್

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more