ಇಂದಿನಿಂದ ಶಿವಮೊಗ್ಗದಲ್ಲಿ ವಿಮಾನ ಪ್ರಯಾಣ ಆರಂಭ: ಬೆಂಗಳೂರು TO ಶಿವಮೊಗ್ಗಕ್ಕೆ ಹಾರಾಟ

ಇಂದಿನಿಂದ ಶಿವಮೊಗ್ಗದಲ್ಲಿ ವಿಮಾನ ಪ್ರಯಾಣ ಆರಂಭ: ಬೆಂಗಳೂರು TO ಶಿವಮೊಗ್ಗಕ್ಕೆ ಹಾರಾಟ

Published : Aug 31, 2023, 11:15 AM ISTUpdated : Aug 31, 2023, 11:16 AM IST

ಮಲೆನಾಡಿನ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಹಾರಾಟಕ್ಕೆ  ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಇಂದಿನಿಂದ ವಿಮಾನಯಾನ ಆರಂಭಗೊಳ್ಳಲಿದೆ.
 

ಮಲೆನಾಡಿನ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಹಾರಾಟಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಇಂದಿನಿಂದಲೇ ವಿಮಾನಗಳ ಹಾರಾಟ ಆರಂಭವಾಗಲಿದೆ. ಬೆಳಗ್ಗೆ 9.50ಕ್ಕೆ ಬೆಂಗಳೂರಿನಿಂದ(Bengaluru) ಮೊದಲ ಇಂಡಿಗೋ ವಿಮಾನ(Flight) ಟೇಕ್ಅಪ್ ಆಗಲಿದ್ದು, 11.10ಕ್ಕೆ ಶಿವಮೊಗ್ಗದಲ್ಲಿ ಲ್ಯಾಂಡ್ ಆಗಲಿದೆ. ಮಾಜಿ ಸಿಎಂ ಬಿಎಸ್‌ವೈ ಸಚಿವ ಎಂ.ಬಿ ಪಾಟೀಲ್ ಸೇರಿದಂತೆ ಗಣ್ಯರು ಮೊದಲ ವಿಮಾನದಲ್ಲಿ ಶಿವಮೊಗ್ಗಕ್ಕೆ ಬಂದಿಳಿಯಲಿದ್ದಾರೆ. ನಂತರ ಇದೇ ವಿಮಾನ 11.25ಕ್ಕೆ ಶಿವಮೊಗ್ಗದಿಂದ(Shivamogga) ಹೊರಟು 12:25ಕ್ಕೆ ಬೆಂಗಳೂರು ತಲುಪಲಿದೆ. ಶಿವಮೊಗ್ಗದ ಸೋಗಾನೆಯಲ್ಲಿ ಸುಮಾರು 775 ಎಕರೆ ಪ್ರದೇಶದಲ್ಲಿ 450 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಾಣಗೊಂಡಿದೆ. ಫೆಬ್ರವರಿ 27ರಂದು ಪ್ರಧಾನಿ ನರೇಂದ್ರ ಮೋದಿ(PM Modi) ವಿಮಾನ ನಿಲ್ದಾಣವಲೋಕಾರ್ಪಣೆ ಮಾಡಿದ್ದರು. ಇಂದಿನಿಂದ ವಿಮಾನ  ಹಾರಾಟಕ್ಕೆ ಏರ್ಪೋರ್ಟ್ ಮುಕ್ತವಾಗಿದೆ. ಶಿವಮೊಗ್ಗದಿಂದ ಬೆಂಗಳೂರು ಮಧ್ಯೆ ವಿಮಾನ ಹಾರಾಟ ಆರಂಭವಾಗಿ ಬಳಿಕ ಗೋವಾ, ಚೆನ್ನೈ, ದೆಹಲಿ ಸೇರಿದಂತೆ 8ಕ್ಕೂ ಹೆಚ್ಚು ಮಾರ್ಗಗಳಿಗೆ ವಿಮಾನ ಹಾರಾಟ ವಿಸ್ತಾರವಾಗಲಿದೆ. ಇಂಡಿಗೋ, ಸ್ಟಾರ್ ಏರ್ಲೈನ್ಸ್, ಸ್ಪೈಸ್ ಮೊದಲಾದ ವಿಮಾನಯಾನ ಸಂಸ್ಥೆಗಳ ವಿಮಾನ ಸಂಚಾರ ನಡೆಸಲಿವೆ. ಮಧ್ಯ ಕರ್ನಾಟಕದ ಆರ್ಥಿಕ ಬೆಳೆಗಳಾದ ಅಡಿಕೆ, ಕಾಫಿ , ಸಾಂಬಾರ ಪದಾರ್ಥ ಮೊದಲಾದವುಗಳ ಸಾಗಾಣಿಕೆಗೆ ಕಾರ್ಗೋ ವಿಮಾನ ನಿಲ್ದಾಣವಾಗಿಯೂ ರೂಪುಗೊಳ್ಳಲಿದೆ. 

ಇದನ್ನೂ ವೀಕ್ಷಿಸಿ:  ಗುಮ್ಮಟನಗರಿಯಲ್ಲಿ ಇನ್ಮುಂದೆ ಹೆಲ್ಮೆಟ್‌ ಕಡ್ಡಾಯ: ಸಾವಿನ ಪ್ರಮಾಣ ತಗ್ಗಿಸಲು ಪೊಲೀಸರ ರೂಲ್ಸ್

23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
Read more