'ಮಹಾ'ಮಳೆಗೆ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ

Aug 3, 2019, 1:15 PM IST

ಮಹಾರಾಷ್ಟ್ರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕೃಷ್ಣಾ ನದಿಗೆ ಹೊಂದಿ ಕೊಂಡ ಗ್ರಾಮಗಳಲ್ಲಿ ಪ್ರವಾಹ ಭೀತಿ ಉಂಟಾಗಿದೆ. ಕೃಷ್ಣಾ ನಂದಿ ಮೈದುಂಬಿ ಹರಿಯುತ್ತಿದ್ದು, ಬೆಳಗಾವಿಯಲ್ಲಿ ಮನೆಗಳು ಜಲಾವೃತವಾಗಿದೆ. ಮನೆಯ ಒಳಗೂ ನೀರು ಪ್ರವೇಶಿಸಿದ್ದು, ಜನರು ರಾತ್ರಿ ಇಡೀ ಜಾಗರಣೆ ಕೂರುವ ಪರಿಸ್ಥಿತಿ ಎದುರಾಗಿದೆ. ಮನೆಯೊಳಗೆ ನೀರು ತುಂಬಿ ಟಿವಿ, ಸೋಫಾ ಸೇರಿ ಇತರ ಗೃಹೋಪಯೋಗಿ ವಸ್ತುಗಳು ಹಾಳಾಗಿದೆ.