Uttara Kannada: 350ಕ್ಕೂ ಹೆಚ್ಚು ಅಡಿಕೆ, ಬಾಳೆ ಗಿಡಗಳನ್ನು ಕಡಿದು ಹಾಕಿದ ಅರಣ್ಯ ಇಲಾಖೆ ಸಿಬ್ಬಂದಿ

Uttara Kannada: 350ಕ್ಕೂ ಹೆಚ್ಚು ಅಡಿಕೆ, ಬಾಳೆ ಗಿಡಗಳನ್ನು ಕಡಿದು ಹಾಕಿದ ಅರಣ್ಯ ಇಲಾಖೆ ಸಿಬ್ಬಂದಿ

Suvarna News   | Asianet News
Published : Jan 31, 2022, 04:19 PM ISTUpdated : Jan 31, 2022, 04:50 PM IST

ಉತ್ತರಕನ್ನಡ (Uttara Kannada) ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಹಟ್ಟಿಕೇರಿ ಪಂಚಾಯತ್ ವ್ಯಾಪ್ತಿಯ ಶವೆಗುಳಿ ಗ್ರಾಮದಲ್ಲಿ ರೈತರಿಗೆ ಸೇರಿದ ಸುಮಾರು 350ಕ್ಕೂ ಹೆಚ್ಚು ಅಡಿಕೆ ಮತ್ತು ಬಾಳೆ ಗಿಡಗಳನ್ನು ಕಡಿದು ಹಾಕಿ ಅರಣ್ಯ ಇಲಾಖೆ ಸಿಬ್ಬಂದಿ ದೌರ್ಜನ್ಯ ನಡೆಸಿದ್ದಾರೆ. 

ಉತ್ತರ ಕನ್ನಡ (ಜ. 31):  ಅಂಕೋಲಾ (Ankola) ತಾಲ್ಲೂಕಿನ ಹಟ್ಟಿಕೇರಿ ಪಂಚಾಯತ್ ವ್ಯಾಪ್ತಿಯ ಶವೆಗುಳಿ ಗ್ರಾಮದಲ್ಲಿ ರೈತರಿಗೆ ಸೇರಿದ ಸುಮಾರು 350ಕ್ಕೂ ಹೆಚ್ಚು ಅಡಿಕೆ ಮತ್ತು ಬಾಳೆ ಗಿಡಗಳನ್ನು ಕಡಿದು ಹಾಕಿ ಅರಣ್ಯ ಇಲಾಖೆ ಸಿಬ್ಬಂದಿ ದೌರ್ಜನ್ಯ ನಡೆಸಿದ್ದಾರೆ. ಶವೆಗುಳಿಯ ಬೆಳ್ಳ ತಮ್ಮಣ್ಣ ಕುಣಬಿ ಮತ್ತು ಸಾತಾವುಳ್ಳು ಕುಣಬಿ ಅವರು ಬೆಳೆಸಿದ ಅಂದಾಜು 5ರಿಂದ 6 ವರ್ಷದ ಅಡಿಕೆ ಮರ ಮತ್ತು ಫಲ ಕೊಡುವಷ್ಟು ದೊಡ್ಡದಾಗಿರುವ ಬಾಳೆ ಗಿಡಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿ ಒಟ್ಟು 8 ಮಂದಿ ಕತ್ತಿ, ಕೊಡಲಿ ಹಿಡಿದುಕೊಂಡು ಬಂದು ಗಿಡಗಳನ್ನು ಕೊಚ್ಚಿ ಹಾಕಿ ಬಿಸಾಕಿದ್ದಾರೆ‌.

ವಿಷಯ ತಿಳಿದ ಕೃಷಿಕರು ಸ್ಥಳಕ್ಕೆ ಓಡೋಡಿ ಬರುವುದರೊಳಗೆ ನೂರಾರು ಮರಗಳು ನೆಲಕ್ಕೊರಗಿವೆ. ಅರಣ್ಯ ಇಲಾಖೆ ಸಿಬ್ಬಂದಿ ಅಡಿಕೆ ಮರ ಹಾಗೂ ಬಾಳೆ ಗಿಡಗಳನ್ನು  ಕಡಿಯುವುದನ್ನು ಮತ್ತೆ ಮುಂದುವರಿಸಿದಾಗ ಕೃಷಿಕರು ಕಡಿಯದಂತೆ ಗೋಗರೆದರೂ ಇಲಾಖೆಯ ಅಧಿಕಾರಿ, ಸಿಬ್ಬಂದಿ ಕೃಷಿಕರ ಮೆಲೆ ದಬ್ಬಾಳಿಕೆ ನಡೆಸಿದ್ದು, ಮುಂದೆ ಬಂದರೆ ಬೂಟು ಗಾಲಿನಿಂದ ಒದೆಯುವುದಾಗಿ ರೈತರನ್ನು ಬೆದರಿಸಿದ್ದಾರೆ.

ಅಧಿಕಾರಿಗಳು ಯಾವೊಂದು ನೋಟೀಸ್ ಕೂಡಾ ನೋಡದೆ ಏಕಾಏಕಿ ಮರ ಗಿಡಗಳನ್ನು ನೆಲಕ್ಕುರುಳಿಸಿದ್ದು, ರೈತರ ಹೊಟ್ಟೆಗೆ ಹೊಡೆದಂತಾಗಿದೆ. ಶವೆಗುಳಿ ಅಂಕೋಲಾ ತಾಲ್ಲೂಕು ಕೇಂದ್ರದಿಂದ ಸುಮಾರು 30 ರಿಂದ 40 ಕಿಲೋ ಮೀಟರ್ ದೂರದಲ್ಲಿ ದಟ್ಟಾರಣ್ಯ ಪ್ರದೇಶದಲ್ಲಿದೆ. ಹಟ್ಟಿಕೇರಿ ಪಂಚಾಯತ್ ವ್ಯಾಪ್ತಿಗೆ ಸೇರುವ ಈ ಗ್ರಾಮದ ನಿವಾಸಿಗಳು ಪಂಚಾಯತ್ ಕಚೇರಿಗೆ ಬರಬೇಕೆಂದರೆ ಸುಮಾರು 10 ಕಿಲೋ ಮೀಟರ್ ಕಾಲ್ನಡಿಗೆಯಲ್ಲಿ, ಕಲ್ಲು, ಮುಳ್ಳಿನ ಹಾದಿಯಲ್ಲಿ ನಡೆದುಕೊಂಡು ಬರಬೇಕು. ಮೂಲಭೂತ ಸೌಕರ್ಯಗಳೇ ಇಲ್ಲದ ಈ ಊರಿನಲ್ಲಿರುವ ನೂರರಷ್ಟು ಕುಟುಂಬಗಳು 35-40 ವರ್ಷಗಳಿಂದ ಅತಿಕ್ರಮಣವಾಗಿ ನೆಲೆಸಿರುವಂತವರೇ. 

ಎಲ್ಲಾ ಜನರು ಹಿಂದಿನಿಂದಲೇ ಅರಣ್ಯ ಜಾಗದಲ್ಲೇ ಭತ್ತ ಹಾಗೂ ತೋಟಗಾರಿಕೆ ಕೃಷಿ ನಡೆಸಿಕೊಂಡು ಬರುತ್ತಿದ್ದಾರೆ. ಆದರೆ, ಇದು ಅರಣ್ಯ ಜಾಗ ಎಂದು ಆಗಾಗ ರೈತರನ್ನು ಪೀಡಿಸುವ ಅರಣ್ಯಾಧಿಕಾರಿಗಳು, ಹಣಕ್ಕಾಗಿ ಅವರ ಮೇಲೆ ದೌರ್ಜನ್ಯ ನಡೆಸುತ್ತಾರೆ. ಈ ಹಿಂದೆಯೂ ಸ್ಥಳೀಯ ರೈತರೋರ್ವರ ಮೇಲೆ ದೌರ್ಜನ್ಯ ನಡೆಸಿರುವ ಅಧಿಕಾರಿಗಳು, ಬಳಿಕ ರೈತನಿಂದ ಹಣ ಪಡೆದುಕೊಂಡು ಸುಮ್ಮನಿದ್ದರು ಎಂದು ಆರೋಪಿಸಲಾಗಿದೆ. ಇದೀಗ ಮತ್ತೆ ಈ ಭಾಗದ ರೈತರ ಬೆಳೆಯನ್ನು ಹಾಳುಗೆಡವಿದ್ದಾರೆ. ರೈತರು ಸುಮಾರು 5-6 ವರ್ಷಗಳಿಂದ ಮಕ್ಕಳಂತೇ ಬೆಳೆಸಿದ್ದ ಅಡಿಕೆ ಮರಗಳ ಪೈಕಿ ಬಹುತೇಕ ಮರಗಳು ಮುಂದಿನ ವರ್ಷ ಫಲ ಕೊಡುವ ಹಂತಕ್ಕೆ ಬಂದಿದ್ದವು. ಈಗ ಅವುಗಳನ್ನು ಅವರ ಕಣ್ಣೇದುರೇ ಅಧಿಕಾರಿಗಳು ಕಡಿದು ಹಾಕಿದ್ದಾರೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more