Uttara Kannada: 350ಕ್ಕೂ ಹೆಚ್ಚು ಅಡಿಕೆ, ಬಾಳೆ ಗಿಡಗಳನ್ನು ಕಡಿದು ಹಾಕಿದ ಅರಣ್ಯ ಇಲಾಖೆ ಸಿಬ್ಬಂದಿ

Uttara Kannada: 350ಕ್ಕೂ ಹೆಚ್ಚು ಅಡಿಕೆ, ಬಾಳೆ ಗಿಡಗಳನ್ನು ಕಡಿದು ಹಾಕಿದ ಅರಣ್ಯ ಇಲಾಖೆ ಸಿಬ್ಬಂದಿ

Suvarna News   | Asianet News
Published : Jan 31, 2022, 04:19 PM ISTUpdated : Jan 31, 2022, 04:50 PM IST

ಉತ್ತರಕನ್ನಡ (Uttara Kannada) ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಹಟ್ಟಿಕೇರಿ ಪಂಚಾಯತ್ ವ್ಯಾಪ್ತಿಯ ಶವೆಗುಳಿ ಗ್ರಾಮದಲ್ಲಿ ರೈತರಿಗೆ ಸೇರಿದ ಸುಮಾರು 350ಕ್ಕೂ ಹೆಚ್ಚು ಅಡಿಕೆ ಮತ್ತು ಬಾಳೆ ಗಿಡಗಳನ್ನು ಕಡಿದು ಹಾಕಿ ಅರಣ್ಯ ಇಲಾಖೆ ಸಿಬ್ಬಂದಿ ದೌರ್ಜನ್ಯ ನಡೆಸಿದ್ದಾರೆ. 

ಉತ್ತರ ಕನ್ನಡ (ಜ. 31):  ಅಂಕೋಲಾ (Ankola) ತಾಲ್ಲೂಕಿನ ಹಟ್ಟಿಕೇರಿ ಪಂಚಾಯತ್ ವ್ಯಾಪ್ತಿಯ ಶವೆಗುಳಿ ಗ್ರಾಮದಲ್ಲಿ ರೈತರಿಗೆ ಸೇರಿದ ಸುಮಾರು 350ಕ್ಕೂ ಹೆಚ್ಚು ಅಡಿಕೆ ಮತ್ತು ಬಾಳೆ ಗಿಡಗಳನ್ನು ಕಡಿದು ಹಾಕಿ ಅರಣ್ಯ ಇಲಾಖೆ ಸಿಬ್ಬಂದಿ ದೌರ್ಜನ್ಯ ನಡೆಸಿದ್ದಾರೆ. ಶವೆಗುಳಿಯ ಬೆಳ್ಳ ತಮ್ಮಣ್ಣ ಕುಣಬಿ ಮತ್ತು ಸಾತಾವುಳ್ಳು ಕುಣಬಿ ಅವರು ಬೆಳೆಸಿದ ಅಂದಾಜು 5ರಿಂದ 6 ವರ್ಷದ ಅಡಿಕೆ ಮರ ಮತ್ತು ಫಲ ಕೊಡುವಷ್ಟು ದೊಡ್ಡದಾಗಿರುವ ಬಾಳೆ ಗಿಡಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿ ಒಟ್ಟು 8 ಮಂದಿ ಕತ್ತಿ, ಕೊಡಲಿ ಹಿಡಿದುಕೊಂಡು ಬಂದು ಗಿಡಗಳನ್ನು ಕೊಚ್ಚಿ ಹಾಕಿ ಬಿಸಾಕಿದ್ದಾರೆ‌.

ವಿಷಯ ತಿಳಿದ ಕೃಷಿಕರು ಸ್ಥಳಕ್ಕೆ ಓಡೋಡಿ ಬರುವುದರೊಳಗೆ ನೂರಾರು ಮರಗಳು ನೆಲಕ್ಕೊರಗಿವೆ. ಅರಣ್ಯ ಇಲಾಖೆ ಸಿಬ್ಬಂದಿ ಅಡಿಕೆ ಮರ ಹಾಗೂ ಬಾಳೆ ಗಿಡಗಳನ್ನು  ಕಡಿಯುವುದನ್ನು ಮತ್ತೆ ಮುಂದುವರಿಸಿದಾಗ ಕೃಷಿಕರು ಕಡಿಯದಂತೆ ಗೋಗರೆದರೂ ಇಲಾಖೆಯ ಅಧಿಕಾರಿ, ಸಿಬ್ಬಂದಿ ಕೃಷಿಕರ ಮೆಲೆ ದಬ್ಬಾಳಿಕೆ ನಡೆಸಿದ್ದು, ಮುಂದೆ ಬಂದರೆ ಬೂಟು ಗಾಲಿನಿಂದ ಒದೆಯುವುದಾಗಿ ರೈತರನ್ನು ಬೆದರಿಸಿದ್ದಾರೆ.

ಅಧಿಕಾರಿಗಳು ಯಾವೊಂದು ನೋಟೀಸ್ ಕೂಡಾ ನೋಡದೆ ಏಕಾಏಕಿ ಮರ ಗಿಡಗಳನ್ನು ನೆಲಕ್ಕುರುಳಿಸಿದ್ದು, ರೈತರ ಹೊಟ್ಟೆಗೆ ಹೊಡೆದಂತಾಗಿದೆ. ಶವೆಗುಳಿ ಅಂಕೋಲಾ ತಾಲ್ಲೂಕು ಕೇಂದ್ರದಿಂದ ಸುಮಾರು 30 ರಿಂದ 40 ಕಿಲೋ ಮೀಟರ್ ದೂರದಲ್ಲಿ ದಟ್ಟಾರಣ್ಯ ಪ್ರದೇಶದಲ್ಲಿದೆ. ಹಟ್ಟಿಕೇರಿ ಪಂಚಾಯತ್ ವ್ಯಾಪ್ತಿಗೆ ಸೇರುವ ಈ ಗ್ರಾಮದ ನಿವಾಸಿಗಳು ಪಂಚಾಯತ್ ಕಚೇರಿಗೆ ಬರಬೇಕೆಂದರೆ ಸುಮಾರು 10 ಕಿಲೋ ಮೀಟರ್ ಕಾಲ್ನಡಿಗೆಯಲ್ಲಿ, ಕಲ್ಲು, ಮುಳ್ಳಿನ ಹಾದಿಯಲ್ಲಿ ನಡೆದುಕೊಂಡು ಬರಬೇಕು. ಮೂಲಭೂತ ಸೌಕರ್ಯಗಳೇ ಇಲ್ಲದ ಈ ಊರಿನಲ್ಲಿರುವ ನೂರರಷ್ಟು ಕುಟುಂಬಗಳು 35-40 ವರ್ಷಗಳಿಂದ ಅತಿಕ್ರಮಣವಾಗಿ ನೆಲೆಸಿರುವಂತವರೇ. 

ಎಲ್ಲಾ ಜನರು ಹಿಂದಿನಿಂದಲೇ ಅರಣ್ಯ ಜಾಗದಲ್ಲೇ ಭತ್ತ ಹಾಗೂ ತೋಟಗಾರಿಕೆ ಕೃಷಿ ನಡೆಸಿಕೊಂಡು ಬರುತ್ತಿದ್ದಾರೆ. ಆದರೆ, ಇದು ಅರಣ್ಯ ಜಾಗ ಎಂದು ಆಗಾಗ ರೈತರನ್ನು ಪೀಡಿಸುವ ಅರಣ್ಯಾಧಿಕಾರಿಗಳು, ಹಣಕ್ಕಾಗಿ ಅವರ ಮೇಲೆ ದೌರ್ಜನ್ಯ ನಡೆಸುತ್ತಾರೆ. ಈ ಹಿಂದೆಯೂ ಸ್ಥಳೀಯ ರೈತರೋರ್ವರ ಮೇಲೆ ದೌರ್ಜನ್ಯ ನಡೆಸಿರುವ ಅಧಿಕಾರಿಗಳು, ಬಳಿಕ ರೈತನಿಂದ ಹಣ ಪಡೆದುಕೊಂಡು ಸುಮ್ಮನಿದ್ದರು ಎಂದು ಆರೋಪಿಸಲಾಗಿದೆ. ಇದೀಗ ಮತ್ತೆ ಈ ಭಾಗದ ರೈತರ ಬೆಳೆಯನ್ನು ಹಾಳುಗೆಡವಿದ್ದಾರೆ. ರೈತರು ಸುಮಾರು 5-6 ವರ್ಷಗಳಿಂದ ಮಕ್ಕಳಂತೇ ಬೆಳೆಸಿದ್ದ ಅಡಿಕೆ ಮರಗಳ ಪೈಕಿ ಬಹುತೇಕ ಮರಗಳು ಮುಂದಿನ ವರ್ಷ ಫಲ ಕೊಡುವ ಹಂತಕ್ಕೆ ಬಂದಿದ್ದವು. ಈಗ ಅವುಗಳನ್ನು ಅವರ ಕಣ್ಣೇದುರೇ ಅಧಿಕಾರಿಗಳು ಕಡಿದು ಹಾಕಿದ್ದಾರೆ. 
 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more