ಕಾರವಾರ: SBI ಬ್ಯಾಂಕ್ ಮ್ಯಾನೇಜರ್‌ನಿಂದಲೇ ಕೋಟ್ಯಂತರ ರೂಪಾಯಿ ಅವ್ಯವಹಾರ

ಕಾರವಾರ: SBI ಬ್ಯಾಂಕ್ ಮ್ಯಾನೇಜರ್‌ನಿಂದಲೇ ಕೋಟ್ಯಂತರ ರೂಪಾಯಿ ಅವ್ಯವಹಾರ

Published : Apr 28, 2022, 05:08 PM IST

ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದಲ್ಲಿ (Bhatkal) ಬ್ಯಾಂಕ್ ಮ್ಯಾನೇಜರ್‌ನೇ ಬ್ಯಾಂಕಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿ ಪರಾರಿಯಾಗಿದ್ದಾನೆ. ಭಟ್ಕಳ ಪಟ್ಟಣದ ಬಜಾರ್ ಬ್ರ್ಯಾಂಚ್‌ನ ಎಸ್‌ಬಿಐ ಶಾಖೆಯಲ್ಲಿ ಇಂತಹದ್ದೊಂದು ಅವ್ಯವಹಾರ ನಡೆದಿರೋದು ಬಯಲಾಗಿದ್ದು, ಈ ಬ್ಯಾಂಕ್‌ನ ಮ್ಯಾನೇಜರ್ ಆಗಿದ್ದ,ಲ ಆರೋಪಿ ಅನೂಪ್‌ ಪೈಯನ್ನು ಪತ್ತೆಹಚ್ಚಲು ಹುಡುಕಾಟ ಮುಂದುವರಿದಿದೆ. 

ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದಲ್ಲಿ (Bhatkal) ಬ್ಯಾಂಕ್ ಮ್ಯಾನೇಜರ್‌ನೇ ಬ್ಯಾಂಕಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿ ಪರಾರಿಯಾಗಿದ್ದಾನೆ. ಭಟ್ಕಳ ಪಟ್ಟಣದ ಬಜಾರ್ ಬ್ರ್ಯಾಂಚ್‌ನ ಎಸ್‌ಬಿಐ ಶಾಖೆಯಲ್ಲಿ ಇಂತಹದ್ದೊಂದು ಅವ್ಯವಹಾರ ನಡೆದಿರೋದು ಬಯಲಾಗಿದ್ದು, ಈ ಬ್ಯಾಂಕ್‌ನ ಮ್ಯಾನೇಜರ್ ಆಗಿದ್ದ,ಲ ಆರೋಪಿ ಅನೂಪ್‌ ಪೈಯನ್ನು ಪತ್ತೆಹಚ್ಚಲು ಹುಡುಕಾಟ ಮುಂದುವರಿದಿದೆ. 

ಅನೂಪ್ ದಿನಕರ ಪೈ ಎಂಬಾತ ಕಳೆದ 2019 ರಿಂದ 2022, ಏಪ್ರಿಲ್ 11ರ ವರೆಗೆ ಭಟ್ಕಳದ ಎಸ್‌ಬಿಐ ಬ್ಯಾಂಕ್‌ನ ಬಜಾರ್ ಬ್ರ್ಯಾಂಚ್‌ನ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಈ ಅವಧಿಯಲ್ಲಿ ಆತ ಮ್ಯಾನೇಜರ್ ಹುದ್ದೆಯ ಸಸ್ಪೆನ್ಸ್ ಖಾತೆಯಿಂದ ಗ್ರಾಹಕರ ಖಾತೆಗೆ ಹಣವನ್ನು ವರ್ಗಾಯಿಸುವ ಮೂಲಕ ಬ್ಯಾಂಕಿನ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದ. ಅಂದರೆ, ಬ್ಯಾಂಕಿನ ತುರ್ತು ವ್ಯವಹಾರಗಳಿಗಾಗಿ ಮ್ಯಾನೇಜರ್ ಬಳಿ ಸಸ್ಪೆನ್ಸ್ ಖಾತೆಯಲ್ಲಿ ಒಂದಷ್ಟು ಹಣವನ್ನು ಉಳಿಸಲಾಗಿರುತ್ತದೆ. ಅದನ್ನು ಬ್ಯಾಂಕಿನ ಕಾರ್ಯಗಳಿಗೆ ಮಾತ್ರ ಉಪಯೋಗಿಸಬೇಕು. ಆದರೆ, ಈತ ಇದೇ ಹಣವನ್ನು ಗ್ರಾಹಕರ ಖಾತೆಗೆ ಅಕ್ರಮವಾಗಿ ವರ್ಗಾವಣೆ ಮಾಡಿದ್ದು, ಆ ಮೂಲಕ ಬ್ಯಾಂಕಿನ ಹಣವನ್ನು ದುರ್ಬಳಕೆ ಮಾಡಿದ್ದಾನೆ. ಇದೇ ರೀತಿ ಸುಮಾರು 1.5 ಕೋಟಿ ರೂಪಾಯಿ ಹಣ ಸಸ್ಪೆನ್ಸ್ ಖಾತೆಯಿಂದ ನಾಪತ್ತೆಯಾಗಿದ್ದು, ಬ್ಯಾಂಕಿನ ಆಡಿಟ್ ನಡೆದ ವೇಳೆ ಈತನ ಅವ್ಯವಹಾರ ಬಯಲಾಗಿದೆ. 

ಇನ್ನು ಅನೂಪ್ ಪೈ ಅವ್ಯವಹಾರ ತಿಳಿಯುತ್ತಿದ್ದಂತೇ ಆತನನ್ನು ಏಪ್ರಿಲ್ 11ರಂದು ವಜಾಗೊಳಿಸಿ ನೂತನ ಮ್ಯಾನೇಜರ್‌ನನ್ನು ನೇಮಕ ಮಾಡಲಾಗಿತ್ತು. ಇದೀಗ ಎಸ್‌ಬಿಐ ಬ್ಯಾಂಕ್‌ನ ನೂತನ ಮ್ಯಾನೇಜರ್ ಅನೂಪ್ ಪೈ ವಿರುದ್ಧ ವಂಚನೆ ದೂರು ದಾಖಲಿಸಿದ್ದಾರೆ. ಸದ್ಯ ಭಟ್ಕಳ ನಗರ ಠಾಣೆ ಪೊಲೀಸರು ಅನೂಪ್ ವಿರುದ್ಧ ಸೆಕ್ಷನ್ 420 ಅಡಿಯಲ್ಲಿ ವಂಚನೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಆತ ತಲೆಮರೆಸಿಕೊಂಡಿದ್ದಾನೆ. ಆಡಿಟ್ ವೇಳೆ ಆತನ ಕರ್ಮಕಾಂಡ ಬಯಲಾಗುತ್ತಿದ್ದಂತೇ ಆತ ಉಳಿದುಕೊಂಡಿದ್ದ ಮನೆಗೆ ಬೀಗ ಹಾಕಿ ನಾಪತ್ತೆಯಾಗಿದ್ದಾನೆ ಎನ್ನಲಾಗಿದ್ದು, ಪೊಲೀಸರು ತಂಡ ರಚಿಸಿಕೊಂಡು ಆತನ ಪತ್ತೆಗೆ ಬಲೆ ಬೀಸಿದ್ದಾರೆ. ರಾಷ್ಟ್ರೀಕೃತ ಬ್ಯಾಂಕೊಂದರಲ್ಲೇ ಈ ರೀತಿಯ ಅವ್ಯವಹಾರ ನಡೆದಿರುವುದರಿಂದ ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ. 

ಒಟ್ಟಿನಲ್ಲಿ ಖಾಸಗಿ ಹಣಕಾಸಿನ ಸಂಸ್ಥೆಗಳಲ್ಲಿ ನಡೆಯುತ್ತಿದ್ದ ಹಣದ ಅವ್ಯವಹಾರ ಇದೀಗ ರಾಷ್ಟ್ರೀಕೃತ ಬ್ಯಾಂಕಿನಲ್ಲೂ ನಡೆದಿರುವುದು ಗ್ರಾಹಕರನ್ನು ಆತಂಕಕ್ಕೀಡುಮಾಡಿದೆ. ಈ ಬಗ್ಗೆ ಪೊಲೀಸರು ಕೂಲಂಕುಷ ತನಿಖೆ ಆರಂಭಿಸಿದ್ದು, ಪ್ರಕರಣದಲ್ಲಿ ಯಾರ್ಯಾರ ಕೈವಾಡವಿದೆ ಅನ್ನೋದನ್ನು ಕೂಡಾ ಪತ್ತೆ ಹಚ್ಚಲು ಪ್ರಯತ್ನ ಮುಂದುವರಿಸಿದ್ದಾರೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more