ಕಾರವಾರ: SBI ಬ್ಯಾಂಕ್ ಮ್ಯಾನೇಜರ್‌ನಿಂದಲೇ ಕೋಟ್ಯಂತರ ರೂಪಾಯಿ ಅವ್ಯವಹಾರ

ಕಾರವಾರ: SBI ಬ್ಯಾಂಕ್ ಮ್ಯಾನೇಜರ್‌ನಿಂದಲೇ ಕೋಟ್ಯಂತರ ರೂಪಾಯಿ ಅವ್ಯವಹಾರ

Published : Apr 28, 2022, 05:08 PM IST

ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದಲ್ಲಿ (Bhatkal) ಬ್ಯಾಂಕ್ ಮ್ಯಾನೇಜರ್‌ನೇ ಬ್ಯಾಂಕಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿ ಪರಾರಿಯಾಗಿದ್ದಾನೆ. ಭಟ್ಕಳ ಪಟ್ಟಣದ ಬಜಾರ್ ಬ್ರ್ಯಾಂಚ್‌ನ ಎಸ್‌ಬಿಐ ಶಾಖೆಯಲ್ಲಿ ಇಂತಹದ್ದೊಂದು ಅವ್ಯವಹಾರ ನಡೆದಿರೋದು ಬಯಲಾಗಿದ್ದು, ಈ ಬ್ಯಾಂಕ್‌ನ ಮ್ಯಾನೇಜರ್ ಆಗಿದ್ದ,ಲ ಆರೋಪಿ ಅನೂಪ್‌ ಪೈಯನ್ನು ಪತ್ತೆಹಚ್ಚಲು ಹುಡುಕಾಟ ಮುಂದುವರಿದಿದೆ. 

ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದಲ್ಲಿ (Bhatkal) ಬ್ಯಾಂಕ್ ಮ್ಯಾನೇಜರ್‌ನೇ ಬ್ಯಾಂಕಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿ ಪರಾರಿಯಾಗಿದ್ದಾನೆ. ಭಟ್ಕಳ ಪಟ್ಟಣದ ಬಜಾರ್ ಬ್ರ್ಯಾಂಚ್‌ನ ಎಸ್‌ಬಿಐ ಶಾಖೆಯಲ್ಲಿ ಇಂತಹದ್ದೊಂದು ಅವ್ಯವಹಾರ ನಡೆದಿರೋದು ಬಯಲಾಗಿದ್ದು, ಈ ಬ್ಯಾಂಕ್‌ನ ಮ್ಯಾನೇಜರ್ ಆಗಿದ್ದ,ಲ ಆರೋಪಿ ಅನೂಪ್‌ ಪೈಯನ್ನು ಪತ್ತೆಹಚ್ಚಲು ಹುಡುಕಾಟ ಮುಂದುವರಿದಿದೆ. 

ಅನೂಪ್ ದಿನಕರ ಪೈ ಎಂಬಾತ ಕಳೆದ 2019 ರಿಂದ 2022, ಏಪ್ರಿಲ್ 11ರ ವರೆಗೆ ಭಟ್ಕಳದ ಎಸ್‌ಬಿಐ ಬ್ಯಾಂಕ್‌ನ ಬಜಾರ್ ಬ್ರ್ಯಾಂಚ್‌ನ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಈ ಅವಧಿಯಲ್ಲಿ ಆತ ಮ್ಯಾನೇಜರ್ ಹುದ್ದೆಯ ಸಸ್ಪೆನ್ಸ್ ಖಾತೆಯಿಂದ ಗ್ರಾಹಕರ ಖಾತೆಗೆ ಹಣವನ್ನು ವರ್ಗಾಯಿಸುವ ಮೂಲಕ ಬ್ಯಾಂಕಿನ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದ. ಅಂದರೆ, ಬ್ಯಾಂಕಿನ ತುರ್ತು ವ್ಯವಹಾರಗಳಿಗಾಗಿ ಮ್ಯಾನೇಜರ್ ಬಳಿ ಸಸ್ಪೆನ್ಸ್ ಖಾತೆಯಲ್ಲಿ ಒಂದಷ್ಟು ಹಣವನ್ನು ಉಳಿಸಲಾಗಿರುತ್ತದೆ. ಅದನ್ನು ಬ್ಯಾಂಕಿನ ಕಾರ್ಯಗಳಿಗೆ ಮಾತ್ರ ಉಪಯೋಗಿಸಬೇಕು. ಆದರೆ, ಈತ ಇದೇ ಹಣವನ್ನು ಗ್ರಾಹಕರ ಖಾತೆಗೆ ಅಕ್ರಮವಾಗಿ ವರ್ಗಾವಣೆ ಮಾಡಿದ್ದು, ಆ ಮೂಲಕ ಬ್ಯಾಂಕಿನ ಹಣವನ್ನು ದುರ್ಬಳಕೆ ಮಾಡಿದ್ದಾನೆ. ಇದೇ ರೀತಿ ಸುಮಾರು 1.5 ಕೋಟಿ ರೂಪಾಯಿ ಹಣ ಸಸ್ಪೆನ್ಸ್ ಖಾತೆಯಿಂದ ನಾಪತ್ತೆಯಾಗಿದ್ದು, ಬ್ಯಾಂಕಿನ ಆಡಿಟ್ ನಡೆದ ವೇಳೆ ಈತನ ಅವ್ಯವಹಾರ ಬಯಲಾಗಿದೆ. 

ಇನ್ನು ಅನೂಪ್ ಪೈ ಅವ್ಯವಹಾರ ತಿಳಿಯುತ್ತಿದ್ದಂತೇ ಆತನನ್ನು ಏಪ್ರಿಲ್ 11ರಂದು ವಜಾಗೊಳಿಸಿ ನೂತನ ಮ್ಯಾನೇಜರ್‌ನನ್ನು ನೇಮಕ ಮಾಡಲಾಗಿತ್ತು. ಇದೀಗ ಎಸ್‌ಬಿಐ ಬ್ಯಾಂಕ್‌ನ ನೂತನ ಮ್ಯಾನೇಜರ್ ಅನೂಪ್ ಪೈ ವಿರುದ್ಧ ವಂಚನೆ ದೂರು ದಾಖಲಿಸಿದ್ದಾರೆ. ಸದ್ಯ ಭಟ್ಕಳ ನಗರ ಠಾಣೆ ಪೊಲೀಸರು ಅನೂಪ್ ವಿರುದ್ಧ ಸೆಕ್ಷನ್ 420 ಅಡಿಯಲ್ಲಿ ವಂಚನೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಆತ ತಲೆಮರೆಸಿಕೊಂಡಿದ್ದಾನೆ. ಆಡಿಟ್ ವೇಳೆ ಆತನ ಕರ್ಮಕಾಂಡ ಬಯಲಾಗುತ್ತಿದ್ದಂತೇ ಆತ ಉಳಿದುಕೊಂಡಿದ್ದ ಮನೆಗೆ ಬೀಗ ಹಾಕಿ ನಾಪತ್ತೆಯಾಗಿದ್ದಾನೆ ಎನ್ನಲಾಗಿದ್ದು, ಪೊಲೀಸರು ತಂಡ ರಚಿಸಿಕೊಂಡು ಆತನ ಪತ್ತೆಗೆ ಬಲೆ ಬೀಸಿದ್ದಾರೆ. ರಾಷ್ಟ್ರೀಕೃತ ಬ್ಯಾಂಕೊಂದರಲ್ಲೇ ಈ ರೀತಿಯ ಅವ್ಯವಹಾರ ನಡೆದಿರುವುದರಿಂದ ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ. 

ಒಟ್ಟಿನಲ್ಲಿ ಖಾಸಗಿ ಹಣಕಾಸಿನ ಸಂಸ್ಥೆಗಳಲ್ಲಿ ನಡೆಯುತ್ತಿದ್ದ ಹಣದ ಅವ್ಯವಹಾರ ಇದೀಗ ರಾಷ್ಟ್ರೀಕೃತ ಬ್ಯಾಂಕಿನಲ್ಲೂ ನಡೆದಿರುವುದು ಗ್ರಾಹಕರನ್ನು ಆತಂಕಕ್ಕೀಡುಮಾಡಿದೆ. ಈ ಬಗ್ಗೆ ಪೊಲೀಸರು ಕೂಲಂಕುಷ ತನಿಖೆ ಆರಂಭಿಸಿದ್ದು, ಪ್ರಕರಣದಲ್ಲಿ ಯಾರ್ಯಾರ ಕೈವಾಡವಿದೆ ಅನ್ನೋದನ್ನು ಕೂಡಾ ಪತ್ತೆ ಹಚ್ಚಲು ಪ್ರಯತ್ನ ಮುಂದುವರಿಸಿದ್ದಾರೆ.

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more