ಕಾರವಾರ: SBI ಬ್ಯಾಂಕ್ ಮ್ಯಾನೇಜರ್‌ನಿಂದಲೇ ಕೋಟ್ಯಂತರ ರೂಪಾಯಿ ಅವ್ಯವಹಾರ

ಕಾರವಾರ: SBI ಬ್ಯಾಂಕ್ ಮ್ಯಾನೇಜರ್‌ನಿಂದಲೇ ಕೋಟ್ಯಂತರ ರೂಪಾಯಿ ಅವ್ಯವಹಾರ

Published : Apr 28, 2022, 05:08 PM IST

ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದಲ್ಲಿ (Bhatkal) ಬ್ಯಾಂಕ್ ಮ್ಯಾನೇಜರ್‌ನೇ ಬ್ಯಾಂಕಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿ ಪರಾರಿಯಾಗಿದ್ದಾನೆ. ಭಟ್ಕಳ ಪಟ್ಟಣದ ಬಜಾರ್ ಬ್ರ್ಯಾಂಚ್‌ನ ಎಸ್‌ಬಿಐ ಶಾಖೆಯಲ್ಲಿ ಇಂತಹದ್ದೊಂದು ಅವ್ಯವಹಾರ ನಡೆದಿರೋದು ಬಯಲಾಗಿದ್ದು, ಈ ಬ್ಯಾಂಕ್‌ನ ಮ್ಯಾನೇಜರ್ ಆಗಿದ್ದ,ಲ ಆರೋಪಿ ಅನೂಪ್‌ ಪೈಯನ್ನು ಪತ್ತೆಹಚ್ಚಲು ಹುಡುಕಾಟ ಮುಂದುವರಿದಿದೆ. 

ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದಲ್ಲಿ (Bhatkal) ಬ್ಯಾಂಕ್ ಮ್ಯಾನೇಜರ್‌ನೇ ಬ್ಯಾಂಕಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿ ಪರಾರಿಯಾಗಿದ್ದಾನೆ. ಭಟ್ಕಳ ಪಟ್ಟಣದ ಬಜಾರ್ ಬ್ರ್ಯಾಂಚ್‌ನ ಎಸ್‌ಬಿಐ ಶಾಖೆಯಲ್ಲಿ ಇಂತಹದ್ದೊಂದು ಅವ್ಯವಹಾರ ನಡೆದಿರೋದು ಬಯಲಾಗಿದ್ದು, ಈ ಬ್ಯಾಂಕ್‌ನ ಮ್ಯಾನೇಜರ್ ಆಗಿದ್ದ,ಲ ಆರೋಪಿ ಅನೂಪ್‌ ಪೈಯನ್ನು ಪತ್ತೆಹಚ್ಚಲು ಹುಡುಕಾಟ ಮುಂದುವರಿದಿದೆ. 

ಅನೂಪ್ ದಿನಕರ ಪೈ ಎಂಬಾತ ಕಳೆದ 2019 ರಿಂದ 2022, ಏಪ್ರಿಲ್ 11ರ ವರೆಗೆ ಭಟ್ಕಳದ ಎಸ್‌ಬಿಐ ಬ್ಯಾಂಕ್‌ನ ಬಜಾರ್ ಬ್ರ್ಯಾಂಚ್‌ನ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಈ ಅವಧಿಯಲ್ಲಿ ಆತ ಮ್ಯಾನೇಜರ್ ಹುದ್ದೆಯ ಸಸ್ಪೆನ್ಸ್ ಖಾತೆಯಿಂದ ಗ್ರಾಹಕರ ಖಾತೆಗೆ ಹಣವನ್ನು ವರ್ಗಾಯಿಸುವ ಮೂಲಕ ಬ್ಯಾಂಕಿನ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದ. ಅಂದರೆ, ಬ್ಯಾಂಕಿನ ತುರ್ತು ವ್ಯವಹಾರಗಳಿಗಾಗಿ ಮ್ಯಾನೇಜರ್ ಬಳಿ ಸಸ್ಪೆನ್ಸ್ ಖಾತೆಯಲ್ಲಿ ಒಂದಷ್ಟು ಹಣವನ್ನು ಉಳಿಸಲಾಗಿರುತ್ತದೆ. ಅದನ್ನು ಬ್ಯಾಂಕಿನ ಕಾರ್ಯಗಳಿಗೆ ಮಾತ್ರ ಉಪಯೋಗಿಸಬೇಕು. ಆದರೆ, ಈತ ಇದೇ ಹಣವನ್ನು ಗ್ರಾಹಕರ ಖಾತೆಗೆ ಅಕ್ರಮವಾಗಿ ವರ್ಗಾವಣೆ ಮಾಡಿದ್ದು, ಆ ಮೂಲಕ ಬ್ಯಾಂಕಿನ ಹಣವನ್ನು ದುರ್ಬಳಕೆ ಮಾಡಿದ್ದಾನೆ. ಇದೇ ರೀತಿ ಸುಮಾರು 1.5 ಕೋಟಿ ರೂಪಾಯಿ ಹಣ ಸಸ್ಪೆನ್ಸ್ ಖಾತೆಯಿಂದ ನಾಪತ್ತೆಯಾಗಿದ್ದು, ಬ್ಯಾಂಕಿನ ಆಡಿಟ್ ನಡೆದ ವೇಳೆ ಈತನ ಅವ್ಯವಹಾರ ಬಯಲಾಗಿದೆ. 

ಇನ್ನು ಅನೂಪ್ ಪೈ ಅವ್ಯವಹಾರ ತಿಳಿಯುತ್ತಿದ್ದಂತೇ ಆತನನ್ನು ಏಪ್ರಿಲ್ 11ರಂದು ವಜಾಗೊಳಿಸಿ ನೂತನ ಮ್ಯಾನೇಜರ್‌ನನ್ನು ನೇಮಕ ಮಾಡಲಾಗಿತ್ತು. ಇದೀಗ ಎಸ್‌ಬಿಐ ಬ್ಯಾಂಕ್‌ನ ನೂತನ ಮ್ಯಾನೇಜರ್ ಅನೂಪ್ ಪೈ ವಿರುದ್ಧ ವಂಚನೆ ದೂರು ದಾಖಲಿಸಿದ್ದಾರೆ. ಸದ್ಯ ಭಟ್ಕಳ ನಗರ ಠಾಣೆ ಪೊಲೀಸರು ಅನೂಪ್ ವಿರುದ್ಧ ಸೆಕ್ಷನ್ 420 ಅಡಿಯಲ್ಲಿ ವಂಚನೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಆತ ತಲೆಮರೆಸಿಕೊಂಡಿದ್ದಾನೆ. ಆಡಿಟ್ ವೇಳೆ ಆತನ ಕರ್ಮಕಾಂಡ ಬಯಲಾಗುತ್ತಿದ್ದಂತೇ ಆತ ಉಳಿದುಕೊಂಡಿದ್ದ ಮನೆಗೆ ಬೀಗ ಹಾಕಿ ನಾಪತ್ತೆಯಾಗಿದ್ದಾನೆ ಎನ್ನಲಾಗಿದ್ದು, ಪೊಲೀಸರು ತಂಡ ರಚಿಸಿಕೊಂಡು ಆತನ ಪತ್ತೆಗೆ ಬಲೆ ಬೀಸಿದ್ದಾರೆ. ರಾಷ್ಟ್ರೀಕೃತ ಬ್ಯಾಂಕೊಂದರಲ್ಲೇ ಈ ರೀತಿಯ ಅವ್ಯವಹಾರ ನಡೆದಿರುವುದರಿಂದ ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ. 

ಒಟ್ಟಿನಲ್ಲಿ ಖಾಸಗಿ ಹಣಕಾಸಿನ ಸಂಸ್ಥೆಗಳಲ್ಲಿ ನಡೆಯುತ್ತಿದ್ದ ಹಣದ ಅವ್ಯವಹಾರ ಇದೀಗ ರಾಷ್ಟ್ರೀಕೃತ ಬ್ಯಾಂಕಿನಲ್ಲೂ ನಡೆದಿರುವುದು ಗ್ರಾಹಕರನ್ನು ಆತಂಕಕ್ಕೀಡುಮಾಡಿದೆ. ಈ ಬಗ್ಗೆ ಪೊಲೀಸರು ಕೂಲಂಕುಷ ತನಿಖೆ ಆರಂಭಿಸಿದ್ದು, ಪ್ರಕರಣದಲ್ಲಿ ಯಾರ್ಯಾರ ಕೈವಾಡವಿದೆ ಅನ್ನೋದನ್ನು ಕೂಡಾ ಪತ್ತೆ ಹಚ್ಚಲು ಪ್ರಯತ್ನ ಮುಂದುವರಿಸಿದ್ದಾರೆ.

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more