ಬ್ಯಾಂಕ್ ಮ್ಯಾನೇಜರ್ ದೋಖಾ..ರೈತನಿಗೆ ಸಂಕಷ್ಟ: ಏಷ್ಯಾನೆಟ್‌ ಸುವರ್ಣನ್ಯೂಸ್ ವರದಿಯಿಂದ ಸಮಸ್ಯೆ ಇತ್ಯರ್ಥ

ಬ್ಯಾಂಕ್ ಮ್ಯಾನೇಜರ್ ದೋಖಾ..ರೈತನಿಗೆ ಸಂಕಷ್ಟ: ಏಷ್ಯಾನೆಟ್‌ ಸುವರ್ಣನ್ಯೂಸ್ ವರದಿಯಿಂದ ಸಮಸ್ಯೆ ಇತ್ಯರ್ಥ

Published : Nov 21, 2023, 09:52 AM IST

ಬ್ಯಾಂಕ್ ಮ್ಯಾನೇಜರ್ ಮೋಸದಿಂದ ರೈತ ಸಂಕಷ್ಟಕ್ಕೆ ಸಿಲುಕಿದ್ದ. ಬ್ಯಾಂಕ್ ಬಾಗಿಲಿಗೆ ಅಲೆದು ಅಲೆದು ಹೈರಾಣಾಗಿದ್ದ. ಈ ಬಗ್ಗೆ ಏಷ್ಯಾನೆಟ್ ಸುವರ್ಣನ್ಯೂಸ್‌ನಲ್ಲಿ ವರದಿ ಪ್ರಸಾರವಾದ ಬೆನ್ನಲ್ಲೇ ರೈತನ ಸಮಸ್ಯೆ ಬಗೆಹರಿದಿದೆ. 
 

500 ರೂಪಾಯಿಯ ನೋಟುಗಳನ್ನ ಎಣಿಸುತ್ತಾ.. ನೆಮ್ಮದಿಯ ನಿಟ್ಟುಸಿರು ಬಿಡುತ್ತಿರೋ ರೈತನ ಹೆಸರು ಮಹದೇವಪ್ಪ(Farmer Mahadevappa) ಜೋಗಿನ್. ಗದಗ ತಾಲೂಕಿನ ತಿಮ್ಮಾಪುರ ಗ್ರಾಮದವರು. ಕೆನರಾ ಬ್ಯಾಂಕ್‌ನಲ್ಲಿ(Canara bank) ತಮ್ಮದೇ ಖಾತೆಯಲ್ಲಿದ್ದ ಹಣ ಪಡೆಯಲು ವರ್ಷಗಳಿಂದ ಅಲೆದಾಟ ನಡೆಸುತ್ತಿದ್ರು. ಬ್ಯಾಂಕ್ ಬಾಗಿಲಿಗೆ ಎಡತಾಕಿ ಹಣಕ್ಕಾಗಿ ಮನವಿ ಮಾಡ್ತಿದ್ರು. ಆದ್ರೆ ಬ್ಯಾಂಕ್(Bank) ಸಿಬ್ಬಂದಿ ಯಾವುದೇ ಸ್ಪಂದನೆ ನೀಡಿರಲಿಲ್ಲ.. ರೈತನ ಸಂಕಷ್ಟದ ಕುರಿತು ಏಷ್ಯಾನೆಟ್ ಸುವರ್ಣನ್ಯೂಸ್ ವರದಿ ಬಿತ್ತರಿಸಿದ ಬೆನ್ನಲ್ಲೇ ಸಮಸ್ಯೆ ಬಗೆಹರಿದಿದೆ. ಇದು ಸುವರ್ಣನ್ಯೂಸ್ ಬಿಗ್ ಇಂಪ್ಯಾಕ್ಟ್.ಅಷ್ಟಕ್ಕೂ ರೈತ ಮಹದೇವಪ್ಪ ತನ್ನ ಹಣಕ್ಕಾಗಿ ಈ ಪರಿ ಕಷ್ಟಪಡಬೇಕಾದ ಸ್ಥಿತಿ ಬಂದಿದ್ದು ಬ್ಯಾಂಕ್ನ ಹಳೇ ಮ್ಯಾನೇಜರ್ ಮಾಡಿದ ಮೋಸದಿಂದ. ರೈತ ಮಹದೇವಪ್ಪ ಈ ಹಿಂದೆ ಬ್ಯಾಂಕ್ನಲ್ಲಿ 2 ಲಕ್ಷ ಸಾಲ ಪಡೆದಿದ್ರು. ಅದೇ ವರ್ಷ ಹಣವನ್ನ ಬ್ಯಾಂಕ್ ಮ್ಯಾನೇಜರ್(Manager) ರಂಗಪ್ಪಗೆ ಮರುಪಾವತಿಸಿದ್ದರು. ಆದ್ರೆ ಮ್ಯಾನೇಜರ್ ಹಣವನ್ನ ಖಾತೆಗೆ ಹಾಕದೇ ತನ್ನ ಜೇಬಿಗಿಳಿಸಿದ್ದ. ಸಾಲ ಮರುಪಾವತಿಸುವಂತೆ ನೋಟಿಸ್ ಬಂದಾಗಲೇ ಮ್ಯಾನೇಜರ್ ಮೋಸ ರೈತನಿಗೆ ಅರಿವಾದದ್ದು.. ಆದ್ರೆ ಅಷ್ಟರಲ್ಲಿ ರಂಗಪ್ಪ ಬೇರೆಡೆಗೆ ವರ್ಗವಾಗಿದ್ದ. ಕೆನರಾ ಬ್ಯಾಂಕ್ ಸಿಬ್ಬಂದಿ ರೈತನ ಖಾತೆಯನ್ನ ಸೀಜ್ ಮಾಡಿದ್ದರು. ಇದ್ರಿಂದ ಖಾತೆಗೆ ಜಮೆಯಾಗ್ತಿದ್ದ ಬೆಳೆ ವಿಮೆ, ಉದ್ಯೋಗ ಖಾತ್ರಿ ಕೂಲಿ ಹಣ, ಬೆಳೆ ಪರಿಹಾರದ ಹಣ ಪಡೆದುಕೊಳ್ಳಲು ಸಾಧ್ಯವಾಗ್ತಿರಲಿಲ್ಲ. ಸದ್ಯ ಸುವರ್ಣನ್ಯೂಸ್ ವರದಿ ಬಳಿಕ ಸಿಬ್ಬಂದಿ ಅಕೌಂಟ್ ರಿಲೀಸ್ ಮಾಡಿದ್ದು, ಖಾತೆಯಲ್ಲಿನ ಹಣ ರೈತನ ಕೈ ಸೇರಿದೆ. ಬ್ಯಾಂಕ್ ಸಿಬ್ಬಂದಿ ಇಷ್ಟಕ್ಕೆ ಸುಮ್ಮನಾಗದೇ ಮೋಸ ಮಾಡಿರೋ ಹಳೇ ಮ್ಯಾನೇಜರ್ ಹಣ ಮರುಪಾವತಿಗೆ ಕ್ರಮಕೈಗೊಳ್ಳಬೇಕು..ಹಾಗೂ ರೈತ ರಂಗಪ್ಪಗೆ ಕ್ಲಿಯರೆನ್ಸ್ ಸರ್ಟಿಫಿಕೇಟ್ ನೀಡಬೇಕು.

ಇದನ್ನೂ ವೀಕ್ಷಿಸಿ:  Today Horoscope: ಕುಂಭ ರಾಶಿಯವರಿಗೆ ಆರೋಗ್ಯ ಸಮಸ್ಯೆ ಕಾಡಲಿದ್ದು,ಇಂದು ಶನೈಶ್ಚರ ಪ್ರಾರ್ಥನೆ ಮಾಡಿ

 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more