ಒಂದು ದಿನದ ಸಮಸ್ಯೆ ಅಲ್ಲ, ಇವರದ್ದು ನಿತ್ಯ ನರಕ: 6 ವರ್ಷವಾದ್ರೂ ಉದ್ಘಾಟನೆಯಾಗದ ಶೌಚಾಲಯ

ಒಂದು ದಿನದ ಸಮಸ್ಯೆ ಅಲ್ಲ, ಇವರದ್ದು ನಿತ್ಯ ನರಕ: 6 ವರ್ಷವಾದ್ರೂ ಉದ್ಘಾಟನೆಯಾಗದ ಶೌಚಾಲಯ

Published : Sep 12, 2023, 01:17 PM IST

ಈ ರಾಜಕಾರಣಿಗಳು ಅದನ್ನ ಮುಕ್ತ ಮಾಡ್ತೀವಿ, ಇದನ್ನ ಮುಕ್ತ ಮಾಡ್ತೀವಿ ಅಂತಾರೆ. ಅಧಿಕಾರಿ ಗಳು ಹೊಸದ್ರಲ್ಲಿ ಹುಮ್ಮಸ್ಸಲ್ಲಿ ಮಾಡೋಕು ಮುಂದಾಗ್ತಾರೆ. ಆಮೇಲೆ ಆ ಯೋಜನೆಗಳನ್ನ ಹೆಂಗ್ ಹಳ್ಳ ಹಿಡಿಸಿ ಬಿಡ್ತಾರೆ ಅಂದ್ರೆ ಅದಕ್ಕೆ ಬೆಸ್ಟ್ ಎಕ್ಸಾಂಪಲ್ ಈ ಸ್ಟೋರಿ. 

ಕಾಲಲ್ಲಿ ರಾಡ್ ಇದೆ ಆದ್ರೂ ಹಳ್ಳದಾಟಿಯೇ ಶೌಚ್ಯಕ್ಕೆ ಹೋಗ್ಬೇಕು. ಇಳಿ ವಯಸ್ಸಲ್ಲಿ ಮನೆ ಮೆಟ್ಟಿಲು ಹ ತ್ತೋದೇ ಕಷ್ಟ. ಆದ್ರೂ, ಶೌಚಕ್ಕೆ  ತಗ್ಗು ದಿನ್ನೆ ಹತ್ಬೇಕು. ಇದು ಒಂದು ದಿನದ ಸಮಸ್ಯೆ ಅಲ್ಲ. ಇವ್ರದ್ದು ನಿತ್ಯ ನರಕ. ಬಡಾವಣೆಗೆ ಸರಿಯಾದ ವಿದ್ಯುತ್ ಲೈಟ್‌ಗಳೂ (Lights) ಇಲ್ಲ. ಹೀಗಾಗಿ ರಾತ್ರಿ ಹೊತ್ತು ಶೌಚ್ಯಕ್ಕೆ ಹೋಗ್ಬೇಕೆಂದ್ರೆ ಕತ್ತಲೆಯಲ್ಲಿ ಟಾರ್ಚ್ ಹಿಡ್ಕೊಂಡು ಹೋಗ್ಬೇಕು. ಮನೆ ಎದ್ರು ಇರೋ ಶೌಚಾಲಯಕ್ಕೆ(Toilet) ಕನೆಕ್ಷನ್ ಇಲ್ಲ. ಹೀಗಾಗಿ ನಿತ್ಯ ನರಕದಲ್ಲೇ ಬಡಾವಣೆ ಜನ ಜೀವನ ಸಾಗಿಸ್ತಿದ್ದಾರೆ. ಅಷ್ಟಕ್ಕೂ ಈ ದೃಶ್ಯ ಕಂಡು ಬಂದಿದ್ದು ಗದಗ(Gadag) ನಗರದ ಹೊರ ವಲಯದ ಗಂಗಿಮಡಿ ಗಂಗಾನಗರ ಬಡಾವಣೆಯ ಬಯಲು ಶೌಚದ ಸಮಸ್ಯೆ ಹೇಳ ತೀರದು. ಮಳೆ ಇರ್ಲಿ, ರಾತ್ರಿಯಾಗಿರ್ಲಿ ಮಹಿಳೆಯರು ಹಳ್ಳ ದಾಟಿ ಬಯ ಲಿಗೆ ಶೌಚಕ್ಕೆ ಹೋಗ್ಬೇಕು.. ಮಳೆ ಅಬ್ಬರಿಸಿದ್ರೆ ಹಳ್ಳ ತುಂಬುತ್ತೆ.. ಹಳ್ಳ ಕಟ್ಕೊಂಡ್ರೆ ರಸ್ತೆ ಬ್ಲಾಕ್. 

ಬಡಾವಣೆಯ ಫಸ್ಟ್ ಕ್ರಾಸ್ ನಲ್ಲಿ 50 ಕ್ಕೂ ಹೆಚ್ಚು ಮನೆ ಇವೆ. ನೂರಾರು ಜನರು ವಾಸಿಸುತ್ತಾರೆ. ಅವ್ರೆಲ್ಲರಿಗೂ ಹಳ್ಳದ ಆಚಾಯ ಖಾಲಿ ಜಾಗೆಯೇ ಶೌಚಾಲಯ. ನಗರದ ಹೊರವಲಯದಲ್ಲಿರೋ ಗಂಗಿಮಡಿ ಗಂಗಾನಗರ ಬಡಾವಣೆಯಲ್ಲಿ ಪುಂಡರ ಕಾಟವೂ ಜಾಸ್ತಿ. ಶೌಚಕ್ಕೆ ಅಂತಾ ಬಯಲಿಗೆ ಹೋಗೋ ಮಹಿಳೆಯರ ಬಳಿ ಮೊಬೈಲ್ ಕಿತ್ತುಕೊಳ್ಳೋ ಪ್ರಕರಣವೂ ನಡೆದಿವೆಂತೆ. ಬಡಾವಣೆಯ ಹಿರಿಯ ಅಜ್ಜಿಯೊಬ್ಬರಿಗೆ ಕಾಲಿನಲ್ಲಿ ರಾಡ್ ಹಾಕಿದೆ. ಕಾಲು ನೋವಿದ್ರೂ ಹಳ್ಳದ ದಾಟಿ ಬಹಿರ್ದೆಸೆಗೆ ಹೋಗ್ಬೇಕು. 

ಮನೆಗೊಂದು ಶೌಚಾಲಯ ಅನ್ನೋ ಯೋಜನೆಯಡಿ ಮನೆಗೊಂದು ಶೌಚಾಲಯ ನಿರ್ಮಿಸಲಾಗಿದೆ. ಆದ್ರೆ, ಶೌಚಾಲಯಕ್ಕೆ ಪೈಪ್ ಕನೆಕ್ಷನ್ ಕೊಟ್ಟಿಲ್ಲ. ಹೀಗಾಗಿ ಟಾಯ್ಲೆಟ್ ಗಳು ಇದ್ದೂ ಇಲ್ಲವಾಗಿದೆ. ಗದಗ ಬೆಟಗೇರಿ ನಗರಸಭೆ 2017 ರಲ್ಲೇ ಬಡಾವಣೆಯಲ್ಲಿ ಪಬ್ಲಿಕ್ ಟಾಯ್ಲೆಟ್ ನಿರ್ಮಿಸಿದೆ. ಕಟ್ಟಡ ರೆಡಿ ಇದೆ..  ಕಟ್ಟಡಕ್ಕೆ ಬೋರ್  ವೆಲ್ ವ್ಯವಸ್ಥೆಯೂ ಇದೆ. ಆದ್ರೆ, ಆರು ವರ್ಷವಾದ್ರೂ ಸಾರ್ವಜನಿಕ ಶೌಚಾಲಯ ಉದ್ಘಾ ನೆಯಾಗಿಲ್ಲ. ನಗರಸಭೆ ಅಧಿಕಾರಿಗಳನ್ನ ಕೇಳಿದ್ರೆ ನೀರಿಟ್ಯಾಂಕ್ ಅಳವಡಿಸ್ಬೇಕು, ಮಾಡ್ತೀವಿ. ನೋಡ್ತೀವಿ ಅಂತಾ ಹಾರಿಕೆ ಉತ್ತರ ಕೊಡ್ತಿದ್ದಾರಂತೆ. ಸ್ವಚ್ಛ ಭಾರತ ಯೋಜನೆಯಡಿ ನಿರ್ಮಾಣವಾಗಿರೋ ಟಾಯ್ಲೆಟ್ ಇದ್ರೂ ಪಕ್ಕದಲ್ಲೇ ಬಯಲು ಬಹಿರ್ದೆಸೆಗೆ ಹೋಗೋ ಪರಿಸ್ಥಿತಿ.

ಇದನ್ನೂ ವೀಕ್ಷಿಸಿ:  ವಿಷ ಕೇಳಿದ ಕುಟುಂಬಕ್ಕೆ ಅಮೃತ ಕೊಡಿಸಿದ ಬಿಗ್ -3: 8 ವರ್ಷಗಳಿಂದ ಆಗದ್ದು ಕೇವಲ 4 ದಿನದಲ್ಲಿ ಆಯ್ತು !

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more