ಈಡೇರದ ಭರವಸೆ, ಸರ್ಕಾರದ ವಿರುದ್ಧ ಸಿಡಿದೆದ್ಧ ನೇಕಾರರು: ಉಚಿತ ವಿದ್ಯುತ್‌ಗೆ ಆಗ್ರಹ..!

ಈಡೇರದ ಭರವಸೆ, ಸರ್ಕಾರದ ವಿರುದ್ಧ ಸಿಡಿದೆದ್ಧ ನೇಕಾರರು: ಉಚಿತ ವಿದ್ಯುತ್‌ಗೆ ಆಗ್ರಹ..!

Published : Oct 09, 2023, 11:16 AM IST

ಚುನಾವಣೆಗೂ ಮೊದಲು ರಾಜ್ಯ ಕಾಂಗ್ರೆಸ್ ಹತ್ತಾರು ಫ್ರೀ ಗ್ಯಾರಂಟಿ ಘೋಷಿಸಿದ್ರು. ನೇಕಾರರಿಗೂ ಫ್ರೀ ವಿದ್ಯುತ್ ಭರವಸೆ ನೀಡಿದ್ರು. ಫ್ರೀ ಭರವಸೆ ನೆಚ್ಚಿಕೊಂಡಿದ್ದ ನೇಕಾರರಿಗೆ ನಿರಾಸೆಯಾಗಿದ್ದು ಸರ್ಕಾರದ ವಿರುದ್ಧವೇ ಸಿಟ್ಟು ಹೊರಗೆ ಹಾಕ್ತಿದ್ದಾರೆ.
 

ನೇಕಾರರಿಗೆ 20 ಎಚ್‌ಪಿ ವಿದ್ಯುತ್ ಫ್ರೀ. ಚುನಾವಣೆಗೂ ಮುನ್ನ ಸಿದ್ದರಾಮಯ್ಯ ನೀಡಿದ ಆಶ್ವಾಸನೆ ಇದು. ಇಂಥ ಆಶ್ವಾಸನೆಗಳು, ಗ್ಯಾರಂಟಿ ಘೋಷಣೆಗಳಿಂದಲೇ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಬೀಗಿತ್ತು. ಸಿದ್ದರಾಮಯ್ಯ(Siddaramaiah) ನೇತೃತ್ವದ ಕಾಂಗ್ರೆಸ್(Congress)  ಸರ್ಕಾರ ರಚನೆಯಾಗಿ 4 ತಿಂಗಳು ಕಳೆದೊಯ್ತು. ಆದ್ರೆ, ನೇಕಾರಿರಿಗೆ ಘೋಷಿಸಿದ ಫ್ರೀ ವಿದ್ಯುತ್(free electricity) ಮಾತ್ರ ಇನ್ನೂ ಸಿಕ್ಕಿಲ್ಲ. ಹೀಗಾಗಿ ರಾಜ್ಯ ಸರ್ಕಾರದ ವಿರುದ್ಧ ಗದಗ ಜಿಲ್ಲೆ ನೇಕಾರರು ಆಕ್ರೋಶಗೊಂಡಿದ್ದಾರೆ. ಕರೆಂಟ್ ಬಿಲ್(Current bill) ಪಾವತಿಸಲ್ಲ ಅಂತ ಪಟ್ಟು ಹಿಡಿದಿದ್ದಾರೆ. ನುಡಿದಂತೆ ನಡೆದಿದ್ದೇ ಆಗಿದ್ರೆ ಇಷ್ಟೊತ್ತಿಗೆ ನೇಕಾರರಿಗೆ ಉಚಿತ್ ವಿದ್ಯುತ್ ಸಿಗಬೇಕಿತ್ತು. ಜುಲೈ 7ರಂದು ಮಂಡನೆಯಾದ ಬಜೆಟ್‌ನಲ್ಲಿ ನೇಕಾರರ ಪವರ್ ಲೋಮ್‌ಗಳಿಗೆ 10 ಎಚ್‌ಪಿ ಉಚಿತ ವಿದ್ಯುತ್ ಘೋಷಣೆ ಮಾಡಿದ್ರು. ಆದ್ರೆ, ಸರ್ಕಾರದ ಘೋಷಣೆ ಕೇವಲ ಘೋಷಣೆಗಷ್ಟೆ ಸೀಮಿತವಾಗಿದೆ. ಚುನಾವಣೆಗೂ ಮುನ್ನ ಸಿದ್ದರಾಮಯ್ಯ ನೀಡಿದ ಭರವಸೆ ಈಡೇರಿಸುವಂತೆ ನೇಕಾರರು ಆಗ್ರಹಿಸ್ತಿದ್ದಾರೆ. ಇದರ ಜತೆಗೆ ನೇಕಾರಿಗೂ ಕಾರ್ಮಿಕರಿಗೆ ನೀಡುವ ಸೌಲಭ್ಯ ನೀಡುವಂತೆ ಆಗ್ರಹಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದುಕೊಳ್ಳಬೇಕು.. ಆದಷ್ಟು ಬೇಗ ನೇಕಾರರಿಗೆ ಉಚಿತ ವಿದ್ಯುತ್ ಯೋಜನೆ ಅನ್ವಯವಾಗಬೇಕು. ನೇಕಾರಿಕೆಯನ್ನ ನಂಬ್ಕೊಂಡು ಜೀವನ ನಡೆಸುತ್ತಿರೋ ಸಾವಿರಾರು ಕುಟುಂಬಗಳ ಜೊತೆಗೆ ಸರರ್ಕಾರ ನಿಲ್ಲಬೇಕು.. ಸಂಕಷ್ಟದಲ್ಲಿರೋ ಕಾಯಕ ಜೀವಿಗಳಿಗೆ ನೆರವಾಗಬೇಕೆಂಬುದು ನೇಕಾರರ ಒತ್ತಾಯ.

ಇದನ್ನೂ ವೀಕ್ಷಿಸಿ:  ದೊಡ್ಮನೆ ಹುಡುಗ ಮೀಟ್ಸ್ ಗೌಡ್ರು ಮನೆ ಹುಡ್ಗ: ನಿಖಿಲ್ ಶೂಟಿಂಗ್ ಸೆಟ್‌ಗೆ ಯುವ ಸಪ್ರೈಸ್ ಎಂಟ್ರಿ..!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more