ಈಡೇರದ ಭರವಸೆ, ಸರ್ಕಾರದ ವಿರುದ್ಧ ಸಿಡಿದೆದ್ಧ ನೇಕಾರರು: ಉಚಿತ ವಿದ್ಯುತ್‌ಗೆ ಆಗ್ರಹ..!

ಈಡೇರದ ಭರವಸೆ, ಸರ್ಕಾರದ ವಿರುದ್ಧ ಸಿಡಿದೆದ್ಧ ನೇಕಾರರು: ಉಚಿತ ವಿದ್ಯುತ್‌ಗೆ ಆಗ್ರಹ..!

Published : Oct 09, 2023, 11:16 AM IST

ಚುನಾವಣೆಗೂ ಮೊದಲು ರಾಜ್ಯ ಕಾಂಗ್ರೆಸ್ ಹತ್ತಾರು ಫ್ರೀ ಗ್ಯಾರಂಟಿ ಘೋಷಿಸಿದ್ರು. ನೇಕಾರರಿಗೂ ಫ್ರೀ ವಿದ್ಯುತ್ ಭರವಸೆ ನೀಡಿದ್ರು. ಫ್ರೀ ಭರವಸೆ ನೆಚ್ಚಿಕೊಂಡಿದ್ದ ನೇಕಾರರಿಗೆ ನಿರಾಸೆಯಾಗಿದ್ದು ಸರ್ಕಾರದ ವಿರುದ್ಧವೇ ಸಿಟ್ಟು ಹೊರಗೆ ಹಾಕ್ತಿದ್ದಾರೆ.
 

ನೇಕಾರರಿಗೆ 20 ಎಚ್‌ಪಿ ವಿದ್ಯುತ್ ಫ್ರೀ. ಚುನಾವಣೆಗೂ ಮುನ್ನ ಸಿದ್ದರಾಮಯ್ಯ ನೀಡಿದ ಆಶ್ವಾಸನೆ ಇದು. ಇಂಥ ಆಶ್ವಾಸನೆಗಳು, ಗ್ಯಾರಂಟಿ ಘೋಷಣೆಗಳಿಂದಲೇ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಬೀಗಿತ್ತು. ಸಿದ್ದರಾಮಯ್ಯ(Siddaramaiah) ನೇತೃತ್ವದ ಕಾಂಗ್ರೆಸ್(Congress)  ಸರ್ಕಾರ ರಚನೆಯಾಗಿ 4 ತಿಂಗಳು ಕಳೆದೊಯ್ತು. ಆದ್ರೆ, ನೇಕಾರಿರಿಗೆ ಘೋಷಿಸಿದ ಫ್ರೀ ವಿದ್ಯುತ್(free electricity) ಮಾತ್ರ ಇನ್ನೂ ಸಿಕ್ಕಿಲ್ಲ. ಹೀಗಾಗಿ ರಾಜ್ಯ ಸರ್ಕಾರದ ವಿರುದ್ಧ ಗದಗ ಜಿಲ್ಲೆ ನೇಕಾರರು ಆಕ್ರೋಶಗೊಂಡಿದ್ದಾರೆ. ಕರೆಂಟ್ ಬಿಲ್(Current bill) ಪಾವತಿಸಲ್ಲ ಅಂತ ಪಟ್ಟು ಹಿಡಿದಿದ್ದಾರೆ. ನುಡಿದಂತೆ ನಡೆದಿದ್ದೇ ಆಗಿದ್ರೆ ಇಷ್ಟೊತ್ತಿಗೆ ನೇಕಾರರಿಗೆ ಉಚಿತ್ ವಿದ್ಯುತ್ ಸಿಗಬೇಕಿತ್ತು. ಜುಲೈ 7ರಂದು ಮಂಡನೆಯಾದ ಬಜೆಟ್‌ನಲ್ಲಿ ನೇಕಾರರ ಪವರ್ ಲೋಮ್‌ಗಳಿಗೆ 10 ಎಚ್‌ಪಿ ಉಚಿತ ವಿದ್ಯುತ್ ಘೋಷಣೆ ಮಾಡಿದ್ರು. ಆದ್ರೆ, ಸರ್ಕಾರದ ಘೋಷಣೆ ಕೇವಲ ಘೋಷಣೆಗಷ್ಟೆ ಸೀಮಿತವಾಗಿದೆ. ಚುನಾವಣೆಗೂ ಮುನ್ನ ಸಿದ್ದರಾಮಯ್ಯ ನೀಡಿದ ಭರವಸೆ ಈಡೇರಿಸುವಂತೆ ನೇಕಾರರು ಆಗ್ರಹಿಸ್ತಿದ್ದಾರೆ. ಇದರ ಜತೆಗೆ ನೇಕಾರಿಗೂ ಕಾರ್ಮಿಕರಿಗೆ ನೀಡುವ ಸೌಲಭ್ಯ ನೀಡುವಂತೆ ಆಗ್ರಹಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದುಕೊಳ್ಳಬೇಕು.. ಆದಷ್ಟು ಬೇಗ ನೇಕಾರರಿಗೆ ಉಚಿತ ವಿದ್ಯುತ್ ಯೋಜನೆ ಅನ್ವಯವಾಗಬೇಕು. ನೇಕಾರಿಕೆಯನ್ನ ನಂಬ್ಕೊಂಡು ಜೀವನ ನಡೆಸುತ್ತಿರೋ ಸಾವಿರಾರು ಕುಟುಂಬಗಳ ಜೊತೆಗೆ ಸರರ್ಕಾರ ನಿಲ್ಲಬೇಕು.. ಸಂಕಷ್ಟದಲ್ಲಿರೋ ಕಾಯಕ ಜೀವಿಗಳಿಗೆ ನೆರವಾಗಬೇಕೆಂಬುದು ನೇಕಾರರ ಒತ್ತಾಯ.

ಇದನ್ನೂ ವೀಕ್ಷಿಸಿ:  ದೊಡ್ಮನೆ ಹುಡುಗ ಮೀಟ್ಸ್ ಗೌಡ್ರು ಮನೆ ಹುಡ್ಗ: ನಿಖಿಲ್ ಶೂಟಿಂಗ್ ಸೆಟ್‌ಗೆ ಯುವ ಸಪ್ರೈಸ್ ಎಂಟ್ರಿ..!

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more