ಆಲಮಟ್ಟಿ ರಾಕ್ ಗಾರ್ಡನ್.. ಅಮಾವಾಸ್ಯೆ ದಿನ ತನ್ನಿಂದ ತಾನೇ ತೂಗಿದ ಜೋಕಾಲಿ!

ಆಲಮಟ್ಟಿ ರಾಕ್ ಗಾರ್ಡನ್.. ಅಮಾವಾಸ್ಯೆ ದಿನ ತನ್ನಿಂದ ತಾನೇ ತೂಗಿದ ಜೋಕಾಲಿ!

Published : Aug 31, 2019, 06:53 PM ISTUpdated : Aug 31, 2019, 06:56 PM IST

ಎಲ್ಲಿಂದ ಎಲ್ಲಿಗೆ ಸಂಬಂಧವೋ ಗೊತ್ತಿಲ್ಲ. ಆದರೆ ಈ ಘಟನೆ ಜನರಲ್ಲಿ ಒಂದು ಹಂತದ ಭಯ ಮೂಡಿಸಿರುವುದೆಂತೂ ಸುಳ್ಳಲ್ಲ. ಶುಕ್ರವಾರ ಅಮಾವಾಸ್ಯೆಯ ದಿನ ಸಂಜೆ ಜೋಕಾಲಿಗಳೆರಡು ತನ್ನಿಂದ ತಾನೆ ತೂಗಿಕೊಂಡು ಆಡುತ್ತಿರುವುದು ಭಯ ಮೂಡಿಸಿದೆ. ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿನ ರಾಕ್ ಗಾರ್ಡನ್ ನಲ್ಲಿ ಘಟನೆ ನಡೆದಿದೆ.

ಎಲ್ಲಿಂದ ಎಲ್ಲಿಗೆ ಸಂಬಂಧವೋ ಗೊತ್ತಿಲ್ಲ. ಆದರೆ ಈ ಘಟನೆ ಜನರಲ್ಲಿ ಒಂದು ಹಂತದ ಭಯ ಮೂಡಿಸಿರುವುದೆಂತೂ ಸುಳ್ಳಲ್ಲ. ಶುಕ್ರವಾರ ಅಮಾವಾಸ್ಯೆಯ ದಿನ ಸಂಜೆ ಜೋಕಾಲಿಗಳೆರಡು ತನ್ನಿಂದ ತಾನೆ ತೂಗಿಕೊಂಡು ಆಡುತ್ತಿರುವುದು ಭಯ ಮೂಡಿಸಿದೆ. ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿನ ರಾಕ್ ಗಾರ್ಡನ್ ನಲ್ಲಿ ಘಟನೆ ನಡೆದಿದೆ.

ನಿನ್ನೆ ಸಾಯಂಕಾಲ 6.30 ಗಂಟೆ ವೇಳೆಗೆ ರಾಕ್ ಗಾರ್ಡನ್ ನಲ್ಲಿನ ಎಂಟು ಜೋಕಾಲಿಗಳಲ್ಲಿ ಕೇವಲ ಎರಡು ಜೋಕಾಲಿಗಳು ಮಾತ್ರ ತನ್ನಿಂದ ತಾನೇ ತೂಗಾಡಿವೆ. ಜೋಕಾಲಿಯಲ್ಲಿ ಒಬ್ಬರು ಕುಳಿತು ಮತ್ತೊಬ್ಬರು ತೂಗಿದಾಗ ಹೇಗೆ ಅಲುಗಾಡುತ್ತವೋ ಹಾಗೆ ಆಗಿದೆ. ಸುಮಾರು ಎರಡ್ಮೂರು ನಿಮಿಷಗಳ ವರೆಗೆ ಹೀಗೆ ಜೋಕಾಲಿಗಳು ತೂಗಿವೆ.

ಎಂಟರಲ್ಲಿ ಕೇವಲ ಎರಡು ಜೋಕಾಲಿಗಳು ಮಾತ್ರ ತೂಗಿದ್ದು, ಇನ್ನುಳಿದವುಗಳು ಅಲುಗಾಡಿಲ್ಲ. ಗಾಳಿಗೆ ಜೋಕಾಲಿಗಳು ತೂಗಿದ್ರೆ ಎಲ್ಲವೂ ಅಲುಗಾಡಬೇಕಿತ್ತು ಎಂಬುದು ಯೋಚಿಸಬೇಕಾದ ಅಂಶ. ಇನ್ನು ಗಾರ್ಡನ್ ನಲ್ಲಿ ಅಂಗಡಿ ಇಟ್ಟುಕೊಂಡಿದ್ದ ಮಂಜುನಾಥ ಎಂಬುವವರು ನಿನ್ನೆ ಸಂಜೆ ಅಂಗಡಿ ಬಂದ್ ಮಾಡಿಕೊಂಡು ಬರುತ್ತಿದ್ದ ವೇಳೆ ಯಾರೂ ಇಲ್ಲದೆ ಜೋಕಾಲಿಗಳು ತೂಗುತ್ತಿರುವುದನ್ನು ಕಂಡು ತಮ್ಮ ಮೊಬೈಲ್ ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ.

ನಂತರ ಭಯಬಿದ್ದು ಅವರು ಸಹ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಕಬ್ಬಿಣ ಸರಳಿನಿಂದ ತಯಾರಾದ ಮಣಭಾರದ ಜೋಕಾಲಿಗಳು ಹೀಗೆ ಮನುಷ್ಯರು ಇಲ್ಲದೆ ತೂಗುತ್ತಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ. ಇದನ್ನು ನೋಡಿದ ಕೆಲವರು ನಿನ್ನೆ ಅಮಾವಾಸ್ಯೆ ಆಗಿದ್ದು ಇದು ನಿಗೂಢ ಶಕ್ತಿಗಳ ಆಟ ಇರಬಹುದು ಎಂದರೆ,,,ಇನ್ನು ಕೆಲವರು ಯಾರೂ ಹೀಗೆ ಜೋಕಾಲಿಗಳನ್ನು ತೂಗಿ ಬಳಿಕ ವಿಡಿಯೋ ಮಾಡಿರಬಹುದು ಎಂದು ಹೇಳಿದ್ದಾರೆ. ಒಟ್ಟಿನಲ್ಲಿ ಜೋಕಾಲಿಗಳ ತೂಗೂಯ್ಯಾಲೆ ಅಸಲಿ ಸತ್ಯದ ಬಗ್ಗೆ ಚರ್ಚೆ ನಡೆಯುತ್ತಲೇ ಇದೆ.

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!