Karwar: ಕೈ ಮುಗಿತೀವಿ ಸೇತುವೆ ನಿರ್ಮಿಸಿಕೊಡಿ, ಸಚಿವ ಹೆಬ್ಬಾರ್‌ಗೆ ಬಾಲಕಿಯ ಮನವಿ

Karwar: ಕೈ ಮುಗಿತೀವಿ ಸೇತುವೆ ನಿರ್ಮಿಸಿಕೊಡಿ, ಸಚಿವ ಹೆಬ್ಬಾರ್‌ಗೆ ಬಾಲಕಿಯ ಮನವಿ

Suvarna News   | Asianet News
Published : Nov 25, 2021, 12:23 PM ISTUpdated : Nov 25, 2021, 12:31 PM IST

*  ಕನಿಷ್ಠ ಮೂಲಭೂತ ಸೌಕರ್ಯವೂ ಇಲ್ಲದೇ ಪರದಾಡಬೇಕಾದ ಪರಿಸ್ಥಿತಿ
*  ಮಳೆಗಾಲದಲ್ಲಂತೂ ಹೊರಜಗತ್ತಿನಿಂದ ಸಂಪರ್ಕ ಕಡಿದುಕೊಳ್ಳುವ ಗ್ರಾಮ
*  ಸೇತುವೆಗಾಗಿ ಜನಪ್ರತಿನಿಧಿಗಳಿಗೆ ಮನವಿ ಮಾಡಿ ರೋಸಿಹೋಗಿರುವ ಜನ
 

ಕಾರವಾರ(ನ.25):  ನದಿಯಂಚಿನಲ್ಲಿರುವ ಆ ಪುಟ್ಟ ಗ್ರಾಮದಲ್ಲಿ ನೂರಾರು ಜನರು ನೆಮ್ಮದಿಯಿಂದ ಜೀವನ ನಡೆಸ್ತಿದ್ದಾರೆ. ಆದರೆ, ಯಾವಾಗ ಮಳೆ ಬರುತ್ತೋ ಆ ಗ್ರಾಮದ ಜನರ ನೆಮ್ಮದಿಯೇ ಹಾಳಾಗಿ ಬಿಡುತ್ತದೆ. ಮಳೆ ಬಂದ ಕೂಡಲೇ ಈ ಗ್ರಾಮವೇ ಸಂಪರ್ಕ ಕಳೆದುಕೊಳ್ಳುತ್ತಿದ್ದು, ತುಂಬಿ ಹರಿಯುವ ಹಳ್ಳದಲ್ಲಿ ಜೀವ ಕೈಯಲ್ಲಿ ಹಿಡಿದುಕೊಂಡೇ ವಿದ್ಯಾರ್ಥಿಗಳು, ಮಹಿಳೆಯರು ಸೇರಿದಂತೆ ಗ್ರಾಮಸ್ಥರು ನಡೆದು ಸಾಗಬೇಕಾದ ದುಸ್ಥಿತಿಯಿದೆ. 

Belagavi: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಾಳು ಕೊಂಪೆಯಾದ ನೂರಾರು ಮನೆಗಳು

ಹೌದು, ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ ಏಳು ದಶಕಗಳು ಕಳೆದರೂ ಈವರೆಗೂ ಕೆಲವು ಹಳ್ಳಿಗಳಲ್ಲಿ ಕನಿಷ್ಠ ಮೂಲಭೂತ ಸೌಕಾರ್ಯವೂ ಇಲ್ಲದೇ ಪರದಾಡಬೇಕಾದ ಸ್ಥಿತಿಯಿದೆ. ಇದಕ್ಕೆ ನೈಜ ಉದಾಹರಣೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಹೊಸಾಕುಳಿ ಗ್ರಾಮ. ಈ ಗ್ರಾಮದಲ್ಲಿ ಹಳ್ಳವೊಂದು ತುಂಬಿ ಹರಿಯುವ ಕಾರಣ ಗ್ರಾಮಸ್ಥರಿಗೆ ಪ್ರತಿ ಮಳೆಗಾಲದ ವೇಳೆ ಹೊರ ಊರಿನ ಸಂಪರ್ಕವೇ ಕಡಿತಗೊಳ್ಳಬೇಕಾದ ಸ್ಥಿತಿ ಎದುರಾಗುತ್ತದೆ. ಸಣ್ಣ ಮಳೆ ಬಂದರೂ ತುಂಬಿ ಹರಿಯುವ ಹಳ್ಳಕ್ಕೆ ಯಾವುದೇ ಸೇತುವೆ ಇಲ್ಲದ ಕಾರಣ ಗ್ರಾಮಸ್ಥರು ಹಳ್ಳದಲ್ಲಿಯೇ ಸರ್ಕಸ್ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಇದರಿಂದ ಪ್ರತಿನಿತ್ಯ ಶಾಲೆಗಳಿಗೆ ತೆರಳುವ ವಿದ್ಯಾರ್ಥಿಗಳು, ಕೆಲಸಕ್ಕೆ ತೆರಳುವ ಗ್ರಾಮಸ್ಥರು ಹಳ್ಳದಲ್ಲೇ ಜೀವ ಕೈಯಲ್ಲಿ ಹಿಡಿದು ನಡೆದುಕೊಂಡೇ ಸಾಗಬೇಕಾಗಿದೆ. ಗ್ರಾಮದಲ್ಲಿ ಸುಮಾರು 50 ಕುಟುಂಬಗಳು ವಾಸವಿದ್ದು ಮಳೆಗಾಲದಲ್ಲಂತೂ ಇಡೀ ಗ್ರಾಮ ಹೊರಜಗತ್ತಿನಿಂದ ಸಂಪರ್ಕ ಕಡಿದುಕೊಳ್ಳುತ್ತದೆ. ಅದರಲ್ಲೂ ರೋಗಿಗಳು, ಗರ್ಭಿಣಿ ಮಹಿಳೆಯರನ್ನು ಆಸ್ಪತ್ರೆಗೆ ಸಾಗಿಸಲು ಹೊಳೆಯ ನೀರಿನಲ್ಲಿ ಹೊತ್ತುಕೊಂಡೇ ಸಾಗಬೇಕಾಗಿದ್ದು ಗ್ರಾಮಕ್ಕೆ ಸೂಕ್ತ ರಸ್ತೆ ವ್ಯವಸ್ಥೆ ಸಹ ಇಲ್ಲವಾಗಿದೆ ಎನ್ನುತ್ತಾರೆ ಇಲ್ಲಿನ ಸ್ಥಳೀಯರಾದ ಚಿದಂಬರ ನಾಯ್ಕ. 

ಅಂದಹಾಗೆ, ಕಳೆದ ಮೂರು ವರ್ಷಗಳಿಂದ ಮಳೆಯ ಪ್ರಮಾಣ ಹೆಚ್ಚಳವಾಗಿದ್ದು ಗ್ರಾಮದಲ್ಲಿ ವರ್ಷವಿಡೀ ತುಂಬಿ ಹರಿಯುವ ಹಳ್ಳದ ನೀರಿನಲ್ಲೇ ಓಡಾಡಬೇಕಾದ ಸ್ಥಿತಿ ಇಲ್ಲಿನ ಗ್ರಾಮಸ್ಥರದ್ದಾಗಿದೆ. ಹೊನ್ನಾವರ ಪಟ್ಟಣದಿಂದ ಕೇವಲ 8 ಕಿಲೋ ಮೀಟರ್ ದೂರದಲ್ಲಿ ಈ ಹೊಸಾಕುಳಿ ಗ್ರಾಮವಿದ್ದು ದಶಕಗಳಿಂದ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಸೇತುವೆ ನಿರ್ಮಿಸಿಕೊಡುವಂತೆ ಮನವಿ ಸಲ್ಲಿಸಿದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಈ ಸಮಸ್ಯೆಯಿಂದ ನೊಂದಿರುವ ಪುಟ್ಟ  ಬಾಲಕಿಯೊರ್ವಳು ತಮ್ಮ ಗ್ರಾಮಕ್ಕೆ ಸೇತುವೆ ನಿರ್ಮಿಸಿಕೊಡುವಂತೆ ಕೈಮುಗಿದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್‌ಗೆ ಮನವಿ ಮಾಡಿಕೊಂಡಿದ್ದಾಳೆ.  
 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more