ಗಾಯಿತ್ರಿ ಸಿದ್ದೇಶ್ವರ್ ಸೋಲಿಗೆ ಲಗಾನ್ ಟೀಮ್ ನೇರ ಕಾರಣ: ರೇಣುಕಾಚಾರ್ಯ ವಿರುದ್ಧ ಸಿದ್ದೇಶ್ವರ್ ಟೀಮ್ ವಾಗ್ದಾಳಿ

ಗಾಯಿತ್ರಿ ಸಿದ್ದೇಶ್ವರ್ ಸೋಲಿಗೆ ಲಗಾನ್ ಟೀಮ್ ನೇರ ಕಾರಣ: ರೇಣುಕಾಚಾರ್ಯ ವಿರುದ್ಧ ಸಿದ್ದೇಶ್ವರ್ ಟೀಮ್ ವಾಗ್ದಾಳಿ

Published : Jul 21, 2024, 03:54 PM IST

ರೇಣುಕಾಚಾರ್ಯ ಪ್ರಚಾರ ಪ್ರಿಯ, ಟಿಆರ್‌ಪಿ ರಾಜಕಾರಣಿ. ಮೊಳಕಾಲೂದ್ಧದ ನೀರಲ್ಲಿ ಬೊಟ್ ಓಡಿಸಿ ಕುಖ್ಯಾತಿ ಪಡೆದ ವ್ಯಕ್ತಿ ಎಂದು  ಜಿಎಂ ಸಿದ್ದೇಶ್ವರ್ ಟೀಮ್ ವಾಗ್ದಾಳಿ ನಡೆಸಿದೆ.

ದಾವಣಗೆರೆ: ಮಾಜಿ ಸಚಿವ ರೇಣುಕಾಚಾರ್ಯ (Renukacharya) ಅಂಡ್ ಟೀಮ್ ವಿರುದ್ಧ ಜಿಎಂ ಸಿದ್ದೇಶ್ವರ್ (GM Siddeshwara) ಟೀಮ್ ವಾಗ್ದಾಳಿ ನಡೆಸಿದೆ. ದಾವಣಗೆರೆ (Davanagere) ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ (Gayathri Siddeshwar) ಸೋಲಿಗೆ ಲಗಾನ್ ಟೀಮ್ ನೇರ ಕಾರಣವಾಗಿದೆ. ರೇಣುಕಾಚಾರ್ಯ ಪ್ರಚಾರ ಪ್ರಿಯ, ಟಿಆರ್‌ಪಿ ರಾಜಕಾರಣಿ. ಮೊಳಕಾಲೂದ್ಧದ ನೀರಲ್ಲಿ ಬೊಟ್ ಓಡಿಸಿ ಕುಖ್ಯಾತಿ ಪಡೆದ ವ್ಯಕ್ತಿ. ಅವಕಾಶವಾದಿ ರಾಜಕಾರಣಿ ಎಂದು ರೇಣುಕಾಚಾರ್ಯ ವಿರುದ್ದ ಮಾಜಿ ಜಿಲ್ಲಾ ಅಧ್ಯಕ್ಷ ವೀರೇಶ್ ಹನಗವಾಡಿ ಸೇರಿದಂತೆ ಹಲವು ನಾಯಕರು ವಾಗ್ದಾಳಿ ನಡೆಸಿದ್ದಾರೆ. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಜೋಶಿ, ಸಂತೋಷ ಜೀ ಹಲವು ನಾಯಕರ ವಿರುದ್ಧ ಮಾತಾಡಿದ್ದಾರೆ. ನಮ್ಮ ಅಭ್ಯರ್ಥಿ ಹೊನ್ನಾಳಿಗೆ ಹೋದಾಗ ಹಿಂಬಾಲಕರಿಂದ ಗೊಂದಲ ಸೃಷ್ಟಿ. ನಮಗೆ ನಮ್ಮ ಪಕ್ಷದ ವರಿಷ್ಟರ ಬಗ್ಗೆ ಅಸಮಾಧಾನ ಆಗುತ್ತಿದೆ. ಇಂತವರನ್ನು ಸಹಿಸಿಕೊಂಡಿದ್ದರಲ್ಲ ಅಂತಾ ಕಾರ್ಯಕರ್ತರಿಗೆ ಬೇಸರ ಆಗಿದೆ. ಮೋದಿ ಮತ್ತು ಕಾರ್ಯಕರ್ತರ ಶ್ರಮದಿಂದ ನಮ್ಮ ಅಭ್ಯರ್ಥಿ 6 ಲಕ್ಷಕ್ಕೂ ಅಧಿಕ ಮತ ಪಡೆದಿದ್ದಾರೆ. ದಾವಣಗೆರೆ ಸೋಲಿಗೆ ಸ್ವಯಂ ಕೃತ ಅಪರಾಧ ಕಾರಣ ಅಂತಾ ಹೇಳುತ್ತಿದ್ದೀರಿ. ವಿಧಾನಸಭೆ ಚುನಾವಣೆಯಲ್ಲಿ 66 ಸೀಟ್ ಬರಲು ಕಾರಣ ಬೇಡ ಜಂಗಮ ಸರ್ಟಿಫಿಕೇಟ್ ಕಾರಣ. ನಿಮ್ಮ ಮನೆಯಿಂದಲೇ ಬೇಡ ಜಂಗಮ ಸರ್ಟಿಫಿಕೇಟ್ ಪಡೆದು ನಮ್ಮ ಪಕ್ಷದ ನಾಯಕರ ವಿರುದ್ಧ ಸ್ಪರ್ಧೆ ನಡೆಸಿದ್ದಾರೆ. ಸಹಜವಾಗಿ ಪರಿಶಿಷ್ಟ ಜಾತಿಯ ವರ್ಗಗಳು ಬೇಸರ ಆಗಿದ್ದವು. ಇದ್ರಿಂದ ನಮಗೆ ಚುನಾವಣೆಯಲ್ಲಿ ಹಿನ್ನಡೆ ಆಗಿದೆ. ರೇಣುಕಾಚಾರ್ಯ ಭೂತನ ಬಾಯಲ್ಲಿ ಭಗವದ್ಗೀತೆ ಕೇಳಿದಂಗೆ ಆಗುತ್ತೆ. ನಮಗೆ ಎಚ್ಚರಿಗೆ ಕೊಡೊ ದೊಡ್ಡ ವ್ಯಕ್ತಿ ನೀನಲ್ಲ ಎಂದು ರೇಣುಕಾಚಾರ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ವೀಕ್ಷಿಸಿ:  ಕೇಂದ್ರ ಸಚಿವರು ಬಂದರೆ ಪರಿಹಾರ ಸಿಗಲ್ಲ ಅಂತೀರಾ? ನೀವಾದ್ರೂ ಬರ್ತೀರಾ?: ಡಿಕೆಶಿ ವಿರುದ್ಧ ಅಶೋಕ್ ಕಿಡಿ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more