Chikkamagaluru: ಭೂ ಒತ್ತುವರಿದಾರರಿಗೆ ರಿಲೀಫ್?  ಗುತ್ತಿಗೆ ಆಧಾರ ಭೂಮಿ ನೀಡಲು ಮುಂದಾದ ಸರ್ಕಾರ

Chikkamagaluru: ಭೂ ಒತ್ತುವರಿದಾರರಿಗೆ ರಿಲೀಫ್? ಗುತ್ತಿಗೆ ಆಧಾರ ಭೂಮಿ ನೀಡಲು ಮುಂದಾದ ಸರ್ಕಾರ

Published : Apr 29, 2022, 04:25 PM IST

ಚಿಕ್ಕಮಗಳೂರಿನಲ್ಲಿ (Chikkamagaluru) ಸುಮಾರು 11 ಸಾವಿರ ಹೆಕ್ಟೇರ್ಗೂ ಅಧಿಕ ಒತ್ತುವರಿಯಾಗಿದೆ ಎಂಬ ಮಾತಿದೆ. ಅದರಲ್ಲಿ ಬದುಕಿಗಾಗಿ ಮಾಡಿದ ಒತ್ತುವರಿಯಷ್ಟೆ (Land Encrochment) ಭೂಮಿ ಆಸೆಗೆ ಮಾಡಿದ್ದೂ ಇದೆ. ಹಾಗಾಗಿ, ಅರಣ್ಯ ಹಾಗೂ ಕಂದಾಯ ಇಲಾಖೆ ಹಲವು ಬಾರಿ ಒತ್ತುವರಿ ತೆರವಿಗೆ ಮುಂದಾದರೂ ಕೂಡ ಸಾಧ್ಯವಾಗಲಿಲ್ಲ.

ಚಿಕ್ಕಮಗಳೂರು (ಏ. 29): ಕಾಫಿನಾಡಿನಲ್ಲಿ ಹಲವು ದಶಕಗಳಿಂದ ಕಂದಾಯ ಭೂಮಿಯನ್ನ ಆಸೆ ಹಾಗೂ ಬದುಕಿಗಾಗಿ ಒತ್ತುವಾರಿ ಮಾಡಿದ್ದಾರೆ. ಅಕ್ರಮ ಒತ್ತುವರಿಯನ್ನ ಒಕ್ಕಲೆಬ್ಬಿಸೋ ಪ್ರಯತ್ನ ನಡೆಯಿತಾದ್ರು ಅಲ್ಲೊಂದು-ಇಲ್ಲೊಂದು ಬಿಟ್ರೆ ಸಮರ್ಪಕವಾಗಿ ಜಾರಿಯಾಗಿಲ್ಲ. ಹಾಗಾಗಿ, ಸರ್ಕಾರವೇ ಒತ್ತುವರಿದಾರರಿಗೆ ಗುಡ್ ನ್ಯೂಸ ಕೊಡಲು ಮುಂದಾಗಿದ್ದು, ದಶಕಗಳಿಂದ ಆತಂಕದಲ್ಲೇ ಬದುಕುತ್ತಿದ್ದ ಒತ್ತುವರಿದಾರರು ನಿಟ್ಟುಸಿರು ಬಿಟ್ಟಿದ್ದಾರೆ. 

ಸುಮಾರು 11 ಸಾವಿರ ಹೆಕ್ಟೇರ್ಗೂ ಅಧಿಕ ಒತ್ತುವರಿಯಾಗಿದೆ ಎಂಬ ಮಾತಿದೆ. ಅದರಲ್ಲಿ ಬದುಕಿಗಾಗಿ ಮಾಡಿದ ಒತ್ತುವರಿಯಷ್ಟೆ ಭೂಮಿ (land Encrochment) ಆಸೆಗೆ ಮಾಡಿದ್ದೂ ಇದೆ. ಹಾಗಾಗಿ, ಅರಣ್ಯ ಹಾಗೂ ಕಂದಾಯ ಇಲಾಖೆ (Revenue Department) ಹಲವು ಬಾರಿ ಒತ್ತುವರಿ ತೆರವಿಗೆ ಮುಂದಾದರೂ ಕೂಡ ಸಾಧ್ಯವಾಗಲಿಲ್ಲ. ಆದರೂ, ಒತ್ತುವರಿದಾರರು ನಾಳೆ-ನಾಡಿದ್ದು ನಮ್ಮ ಬದುಕು ಏನಾಗುತ್ತೋ ಎಂದು ಆತಂಕದಲ್ಲೆ ಬದುಕುತ್ತಿದ್ದರು. ಅದರಲ್ಲೂ ಕಾಫಿ ಬೆಳೆಯುವ ಮಲೆನಾಡು ಭಾಗದಲ್ಲೇ ಒತ್ತುವರಿ ಒಂದು ದೊಡ್ಡ ಸಮಸ್ಯೆಯಾಗಿತ್ತು.

ಆದ್ರೀಗ, ಕಂದಾಯ ಇಲಾಖೆ ಒತ್ತುವರಿಗೊಂದು ಫುಲ್ಸ್ಟಾಪ್ ಇಡೋದಕ್ಕೆ ಮುಂದಾಗಿರೋದು ಒತ್ತುವರಿದಾರರ ನಿರಾಳತೆಗೆ ಕಾರಣವಾಗಿದೆ. 10 ಎಕರೆಯೊಳಗಿನ ಜಮೀನನ್ನ ಒತ್ತುವರಿ ಮಾಡಿರುವ ರೈತರಿಗೆ ಅದೇ ಜಮೀನನ್ನ ಗುತ್ತಿಗೆ ಆಧಾರದಲ್ಲಿ ನೀಡುವ ತೀರ್ಮಾನಕ್ಕೆ ಸರ್ಕಾರ ಬದ್ಧವಾಗಿದೆ ಎನ್ನಲಾಗಿದ್ದು, ಒತ್ತುವರಿದಾರರು ನಿಟ್ಟುಸಿರು ಬಿಡುವಂತಾಗಿದೆ. ಕೇರಳ ಮಾದರಿಯಲ್ಲೇ ಎಕರೆಗೆ ವಾರ್ಷಿಕ 3 ಸಾವಿರ ಶುಲ್ಕ ವಿಧಿಸಲು ಮುಂದಾಗಿರೋದು ಸರ್ಕಾರದ ಬೊಕ್ಕಸಕ್ಕೂ ಲಾಭ ತರಲಿದೆ ಎಂದು ಹೇಳಲಾಗ್ತಿದೆ. 

ಚಿಕ್ಕಮಗಳೂರು 45 ಸಾವಿರ, ಹಾಸನ 25 ಸಾವಿರ ಹೆಕ್ಟೇರ್ ಹಾಗೂ ಕೊಡಗಿನಲ್ಲೂ ಕೂಡ ಕಂದಾಯ ಭೂಮಿಯನ್ನ ರೈತರು ಒತ್ತುವರಿ ಮಾಡಿದ್ದಾರೆ. ಸರ್ಕಾರದ ಈ ನಿರ್ಧಾರದಿಂದ ರೈತರಿಗೆ ರಿಲೀಫ್ ಸಿಕ್ಕಿದಂತಾಗಿದೆ. ಆದರೆ, ಈ ಆಫರ್ ಅರಣ್ಯವನ್ನ ಒತ್ತುವರಿ ಮಾಡಿದವರಿಗೆ ಇಲ್ಲ. ಅರಣ್ಯ ಭೂಮಿಯನ್ನ ಒತ್ತುವರಿ ಮಾಡಿ ಕೃಷಿ ಮಾಡುತ್ತಿರುವವರ ಜಮೀನನ್ನ ತೆರವು ಮಾಡುವುದು ಅನಿವಾರ್ಯವಾಗಿದೆ. ಕಂದಾಯ ಭೂಮಿಯನ್ನ ಒತ್ತುವರಿ ಮಾಡಿದವರಿಗೆ ಲೀಸ್ ಸೌಲಭ್ಯ ಸಿಗಲಿದೆ. ಸರ್ಕಾರದ ಈ ಗುತ್ತಿಗೆ ಭೂಮಿ ಬಗ್ಗೆ ಜನನಾಯಕರು ಹೇಳಿಕೆ ಕೊಡ್ತಿದ್ದಾರೆ. ಆದರೆ, ಜಿಲ್ಲಾಧಿಕಾರಿ ಮಾತ್ರ ಈ ಬಗ್ಗೆ ಮಾಹಿತಿ ಬಿಟ್ಟುಕೊಡ್ತಿಲ್ಲ. ಈ ಕುರಿತು ಸರ್ಕಾರದ ಮಟ್ಟದಲ್ಲಿ ನಿರ್ಧಾರ ಆಗಿರಬಹುದು. ಸದ್ಯಕ್ಕೆ ನಮ್ಮ ಗಮನಕ್ಕೆ ಬಂದಿಲ್ಲ ಅಂತಾರೆ.

ಒಟ್ಟಾರೆ, ದಶಕಗಳಿಂದ ಒತ್ತುವರಿ ಮಾಡಿ ಬದುಕು ಕಟ್ಟಿಕೊಂಡಿದ್ದ ರೈತರು ಆತಂಕದಿಂದಲೇ ಜೀವಿಸುತ್ತಿದ್ದರು. ಆದ್ರೀಗ, ಸರ್ಕಾರದ ಈ ನಿರ್ಧಾರ ರೈತರಿಗೆ ಕೊಂಚ ರಿಲೀಫ್ ತಂದಿದೆ. ಏಪ್ರಿಲ್ 29ಕ್ಕೆ ಚಿಕ್ಕಮಗಳೂರಿಗೆ ಆಗಮಿಸುವ ಕಂದಾಯ ಸಚಿವರು ಅದೇ ದಿನ ಸರ್ಕಾರದ ಈ ಮಹಾತ್ವಾಕಾಂಕ್ಷೆಯ ಯೋಜನೆಯನ್ನ ಘೋಷಣೆ ಮಾಡುವುದು ಬಹುತೇಕ ಖಚಿತವಾಗಿದ್ದು, ಸರ್ಕಾರ ರೈತರಿಗೆ ಭೂಮಿಯನ್ನ ಲೀಸ್ ಕೊಡೋದು ಪಕ್ಕಾ ಆದಂತಾಗಿದೆ. ಕೊಡಲಿ ಅನ್ನೋದು ನಮ್ಮ ಉದ್ದೇಶ. ರೈತ ಚೆನ್ನಾಗಿದ್ರೆ ಎಲ್ಲರೂ ಚೆನ್ನಾಗಿರ್ತಾರೆ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more