Chikkamagaluru: ಭೂ ಒತ್ತುವರಿದಾರರಿಗೆ ರಿಲೀಫ್?  ಗುತ್ತಿಗೆ ಆಧಾರ ಭೂಮಿ ನೀಡಲು ಮುಂದಾದ ಸರ್ಕಾರ

Chikkamagaluru: ಭೂ ಒತ್ತುವರಿದಾರರಿಗೆ ರಿಲೀಫ್? ಗುತ್ತಿಗೆ ಆಧಾರ ಭೂಮಿ ನೀಡಲು ಮುಂದಾದ ಸರ್ಕಾರ

Published : Apr 29, 2022, 04:25 PM IST

ಚಿಕ್ಕಮಗಳೂರಿನಲ್ಲಿ (Chikkamagaluru) ಸುಮಾರು 11 ಸಾವಿರ ಹೆಕ್ಟೇರ್ಗೂ ಅಧಿಕ ಒತ್ತುವರಿಯಾಗಿದೆ ಎಂಬ ಮಾತಿದೆ. ಅದರಲ್ಲಿ ಬದುಕಿಗಾಗಿ ಮಾಡಿದ ಒತ್ತುವರಿಯಷ್ಟೆ (Land Encrochment) ಭೂಮಿ ಆಸೆಗೆ ಮಾಡಿದ್ದೂ ಇದೆ. ಹಾಗಾಗಿ, ಅರಣ್ಯ ಹಾಗೂ ಕಂದಾಯ ಇಲಾಖೆ ಹಲವು ಬಾರಿ ಒತ್ತುವರಿ ತೆರವಿಗೆ ಮುಂದಾದರೂ ಕೂಡ ಸಾಧ್ಯವಾಗಲಿಲ್ಲ.

ಚಿಕ್ಕಮಗಳೂರು (ಏ. 29): ಕಾಫಿನಾಡಿನಲ್ಲಿ ಹಲವು ದಶಕಗಳಿಂದ ಕಂದಾಯ ಭೂಮಿಯನ್ನ ಆಸೆ ಹಾಗೂ ಬದುಕಿಗಾಗಿ ಒತ್ತುವಾರಿ ಮಾಡಿದ್ದಾರೆ. ಅಕ್ರಮ ಒತ್ತುವರಿಯನ್ನ ಒಕ್ಕಲೆಬ್ಬಿಸೋ ಪ್ರಯತ್ನ ನಡೆಯಿತಾದ್ರು ಅಲ್ಲೊಂದು-ಇಲ್ಲೊಂದು ಬಿಟ್ರೆ ಸಮರ್ಪಕವಾಗಿ ಜಾರಿಯಾಗಿಲ್ಲ. ಹಾಗಾಗಿ, ಸರ್ಕಾರವೇ ಒತ್ತುವರಿದಾರರಿಗೆ ಗುಡ್ ನ್ಯೂಸ ಕೊಡಲು ಮುಂದಾಗಿದ್ದು, ದಶಕಗಳಿಂದ ಆತಂಕದಲ್ಲೇ ಬದುಕುತ್ತಿದ್ದ ಒತ್ತುವರಿದಾರರು ನಿಟ್ಟುಸಿರು ಬಿಟ್ಟಿದ್ದಾರೆ. 

ಸುಮಾರು 11 ಸಾವಿರ ಹೆಕ್ಟೇರ್ಗೂ ಅಧಿಕ ಒತ್ತುವರಿಯಾಗಿದೆ ಎಂಬ ಮಾತಿದೆ. ಅದರಲ್ಲಿ ಬದುಕಿಗಾಗಿ ಮಾಡಿದ ಒತ್ತುವರಿಯಷ್ಟೆ ಭೂಮಿ (land Encrochment) ಆಸೆಗೆ ಮಾಡಿದ್ದೂ ಇದೆ. ಹಾಗಾಗಿ, ಅರಣ್ಯ ಹಾಗೂ ಕಂದಾಯ ಇಲಾಖೆ (Revenue Department) ಹಲವು ಬಾರಿ ಒತ್ತುವರಿ ತೆರವಿಗೆ ಮುಂದಾದರೂ ಕೂಡ ಸಾಧ್ಯವಾಗಲಿಲ್ಲ. ಆದರೂ, ಒತ್ತುವರಿದಾರರು ನಾಳೆ-ನಾಡಿದ್ದು ನಮ್ಮ ಬದುಕು ಏನಾಗುತ್ತೋ ಎಂದು ಆತಂಕದಲ್ಲೆ ಬದುಕುತ್ತಿದ್ದರು. ಅದರಲ್ಲೂ ಕಾಫಿ ಬೆಳೆಯುವ ಮಲೆನಾಡು ಭಾಗದಲ್ಲೇ ಒತ್ತುವರಿ ಒಂದು ದೊಡ್ಡ ಸಮಸ್ಯೆಯಾಗಿತ್ತು.

ಆದ್ರೀಗ, ಕಂದಾಯ ಇಲಾಖೆ ಒತ್ತುವರಿಗೊಂದು ಫುಲ್ಸ್ಟಾಪ್ ಇಡೋದಕ್ಕೆ ಮುಂದಾಗಿರೋದು ಒತ್ತುವರಿದಾರರ ನಿರಾಳತೆಗೆ ಕಾರಣವಾಗಿದೆ. 10 ಎಕರೆಯೊಳಗಿನ ಜಮೀನನ್ನ ಒತ್ತುವರಿ ಮಾಡಿರುವ ರೈತರಿಗೆ ಅದೇ ಜಮೀನನ್ನ ಗುತ್ತಿಗೆ ಆಧಾರದಲ್ಲಿ ನೀಡುವ ತೀರ್ಮಾನಕ್ಕೆ ಸರ್ಕಾರ ಬದ್ಧವಾಗಿದೆ ಎನ್ನಲಾಗಿದ್ದು, ಒತ್ತುವರಿದಾರರು ನಿಟ್ಟುಸಿರು ಬಿಡುವಂತಾಗಿದೆ. ಕೇರಳ ಮಾದರಿಯಲ್ಲೇ ಎಕರೆಗೆ ವಾರ್ಷಿಕ 3 ಸಾವಿರ ಶುಲ್ಕ ವಿಧಿಸಲು ಮುಂದಾಗಿರೋದು ಸರ್ಕಾರದ ಬೊಕ್ಕಸಕ್ಕೂ ಲಾಭ ತರಲಿದೆ ಎಂದು ಹೇಳಲಾಗ್ತಿದೆ. 

ಚಿಕ್ಕಮಗಳೂರು 45 ಸಾವಿರ, ಹಾಸನ 25 ಸಾವಿರ ಹೆಕ್ಟೇರ್ ಹಾಗೂ ಕೊಡಗಿನಲ್ಲೂ ಕೂಡ ಕಂದಾಯ ಭೂಮಿಯನ್ನ ರೈತರು ಒತ್ತುವರಿ ಮಾಡಿದ್ದಾರೆ. ಸರ್ಕಾರದ ಈ ನಿರ್ಧಾರದಿಂದ ರೈತರಿಗೆ ರಿಲೀಫ್ ಸಿಕ್ಕಿದಂತಾಗಿದೆ. ಆದರೆ, ಈ ಆಫರ್ ಅರಣ್ಯವನ್ನ ಒತ್ತುವರಿ ಮಾಡಿದವರಿಗೆ ಇಲ್ಲ. ಅರಣ್ಯ ಭೂಮಿಯನ್ನ ಒತ್ತುವರಿ ಮಾಡಿ ಕೃಷಿ ಮಾಡುತ್ತಿರುವವರ ಜಮೀನನ್ನ ತೆರವು ಮಾಡುವುದು ಅನಿವಾರ್ಯವಾಗಿದೆ. ಕಂದಾಯ ಭೂಮಿಯನ್ನ ಒತ್ತುವರಿ ಮಾಡಿದವರಿಗೆ ಲೀಸ್ ಸೌಲಭ್ಯ ಸಿಗಲಿದೆ. ಸರ್ಕಾರದ ಈ ಗುತ್ತಿಗೆ ಭೂಮಿ ಬಗ್ಗೆ ಜನನಾಯಕರು ಹೇಳಿಕೆ ಕೊಡ್ತಿದ್ದಾರೆ. ಆದರೆ, ಜಿಲ್ಲಾಧಿಕಾರಿ ಮಾತ್ರ ಈ ಬಗ್ಗೆ ಮಾಹಿತಿ ಬಿಟ್ಟುಕೊಡ್ತಿಲ್ಲ. ಈ ಕುರಿತು ಸರ್ಕಾರದ ಮಟ್ಟದಲ್ಲಿ ನಿರ್ಧಾರ ಆಗಿರಬಹುದು. ಸದ್ಯಕ್ಕೆ ನಮ್ಮ ಗಮನಕ್ಕೆ ಬಂದಿಲ್ಲ ಅಂತಾರೆ.

ಒಟ್ಟಾರೆ, ದಶಕಗಳಿಂದ ಒತ್ತುವರಿ ಮಾಡಿ ಬದುಕು ಕಟ್ಟಿಕೊಂಡಿದ್ದ ರೈತರು ಆತಂಕದಿಂದಲೇ ಜೀವಿಸುತ್ತಿದ್ದರು. ಆದ್ರೀಗ, ಸರ್ಕಾರದ ಈ ನಿರ್ಧಾರ ರೈತರಿಗೆ ಕೊಂಚ ರಿಲೀಫ್ ತಂದಿದೆ. ಏಪ್ರಿಲ್ 29ಕ್ಕೆ ಚಿಕ್ಕಮಗಳೂರಿಗೆ ಆಗಮಿಸುವ ಕಂದಾಯ ಸಚಿವರು ಅದೇ ದಿನ ಸರ್ಕಾರದ ಈ ಮಹಾತ್ವಾಕಾಂಕ್ಷೆಯ ಯೋಜನೆಯನ್ನ ಘೋಷಣೆ ಮಾಡುವುದು ಬಹುತೇಕ ಖಚಿತವಾಗಿದ್ದು, ಸರ್ಕಾರ ರೈತರಿಗೆ ಭೂಮಿಯನ್ನ ಲೀಸ್ ಕೊಡೋದು ಪಕ್ಕಾ ಆದಂತಾಗಿದೆ. ಕೊಡಲಿ ಅನ್ನೋದು ನಮ್ಮ ಉದ್ದೇಶ. ರೈತ ಚೆನ್ನಾಗಿದ್ರೆ ಎಲ್ಲರೂ ಚೆನ್ನಾಗಿರ್ತಾರೆ. 
 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more